AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಉತ್ತರ ಪ್ರದೇಶದ ಕಾಂಗ್ರೆಸ್ ಮ್ಯಾರಥಾನ್‌ನಲ್ಲಿ ಕಾಲ್ತುಳಿತದಂತಹ ದೃಶ್ಯ; ಮಾಸ್ಕ್ ಇಲ್ಲದೆ ರಸ್ತೆಗಿಳಿದರು ನೂರಾರು ಮಹಿಳೆಯರು

Congress Marathon ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಕಾಂಗ್ರೆಸ್ ನಾಯಕಿ ಮತ್ತು ಬರೇಲಿ ಮಾಜಿ ಮೇಯರ್ ಸುಪ್ರಿಯಾ ಅರೋನ್, ಆತಂಕಪಡುವ ಅಗತ್ಯವಿಲ್ಲ. "ಸಾವಿರಾರು ಜನಸಂದಣಿಯಲ್ಲಿ ವೈಷ್ಣೋದೇವಿಯ ಬಳಿಗೆ ಹೋದರು. ಅದರ ಬಗ್ಗೆ ಏನಂತೀರಿ? ನೋಡಿ, ಇದು ತುಂಬಾ ಮಾನವೀಯ ವಿಷಯ ಎಂದಿದ್ದಾರೆ.

Video: ಉತ್ತರ ಪ್ರದೇಶದ ಕಾಂಗ್ರೆಸ್ ಮ್ಯಾರಥಾನ್‌ನಲ್ಲಿ ಕಾಲ್ತುಳಿತದಂತಹ ದೃಶ್ಯ; ಮಾಸ್ಕ್ ಇಲ್ಲದೆ ರಸ್ತೆಗಿಳಿದರು ನೂರಾರು ಮಹಿಳೆಯರು
ಉತ್ತರಪ್ರದೇಶದಲ್ಲಿ ಮ್ಯಾರಥಾನ್
TV9 Web
| Edited By: |

Updated on:Jan 04, 2022 | 1:31 PM

Share

ಲಖನೌ: ಕಾಂಗ್ರೆಸ್ ಪಕ್ಷದ (Congress) “ಲಡ್ಕಿ ಹೂಂ, ಲಡ್ ಸಕ್ತೀ ಹೂಂ (ನಾನು ಹುಡುಗಿ, ಹೋರಾಡಬಲ್ಲೆ)” ಚುನಾವಣಾ ಪ್ರಚಾರದ ಭಾಗವಾಗಿ ಉತ್ತರ ಪ್ರದೇಶದಲ್ಲಿ(Uttar pradesh) ಕಾಂಗ್ರೆಸ್ ನಾಯಕರೊಬ್ಬರು ಆಯೋಜಿಸಿದ್ದ ಮ್ಯಾರಥಾನ್​​ನಲ್ಲಿ(Marathon) ಕಾಲ್ತುಳಿತವಾಗುವಂತ ಸನ್ನಿವೇಶ ಕಾಣಿಸಿತ್ತು. ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ಮ್ಯಾರಥಾನ್‌ನಲ್ಲಿ ನೂರಾರು ಮಹಿಳೆಯರು ಮತ್ತು ಹದಿಹರೆಯದ ಹುಡುಗಿಯರು ಮಾಸ್ಕ್ ಗಳಿಲ್ಲದೆ ಕಾಣಿಸಿಕೊಂಡಿರುವುದು ದೃಶ್ಯಗಳಲ್ಲಿ ಕಾಣಿಸಿದೆ. ಹೆಚ್ಚುತ್ತಿರುವ ಕೊವಿಡ್-19 (Covid-19) ಪ್ರಕರಣಗಳ ಮಧ್ಯೆ ಮ್ಯಾರಥಾನ್ ಭಾಗವಹಿಸುವವರ ಬೃಹತ್ ಗುಂಪು ಕಂಡುಬಂದಿದ್ದು ಹೆಚ್ಚಿನವರು ಮಾಸ್ಕ್ ಧರಿಸದೆ ರಸ್ತೆಗಿಳಿದಿದ್ದರು. ಮ್ಯಾರಥಾನ್ ಪ್ರಾರಂಭಿಸಿದಾಗ, ಮುಂಭಾಗದಲ್ಲಿದ್ದ ಕೆಲವು ಮಹಿಳೆಯರು ಮುಗ್ಗರಿಸಿ ನೆಲಕ್ಕೆ ಬಿದ್ದರು. ಹಿಂದಿನಿಂದ ಹೆಚ್ಚಿನ ಜನಸಂದಣಿಯು ಮುಂಭಾಗದಲ್ಲಿದ್ದವರನ್ನು ತಳ್ಳಿದ್ದರಿಂದ ಅನಾಹುತ ಸಂಭವಿಸುವಂತೆ ಭಯದ ವಾತಾವರಣ ಸೃಷ್ಟಿಯಾಗಿತ್ತು. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಕಾಂಗ್ರೆಸ್ ನಾಯಕಿ ಮತ್ತು ಬರೇಲಿ ಮಾಜಿ ಮೇಯರ್ ಸುಪ್ರಿಯಾ ಅರೋನ್, ಆತಂಕಪಡುವ ಅಗತ್ಯವಿಲ್ಲ. “ಸಾವಿರಾರು ಜನಸಂದಣಿಯಲ್ಲಿ ವೈಷ್ಣೋದೇವಿಯ ಬಳಿಗೆ ಹೋದರು. ಅದರ ಬಗ್ಗೆ ಏನಂತೀರಿ? ನೋಡಿ, ಇದು ತುಂಬಾ ಮಾನವೀಯ ವಿಷಯ. ಇವರು ಶಾಲಾಮಕ್ಕಳು ಮತ್ತು ಅವರು ಸ್ವಲ್ಪ ಸಮಯದವರೆಗೆ ಹೊರಬರಲು ಬಯಸುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಯಾರಿಗಾದರೂ ನೋವಾಗಿದ್ದರೆ  ಕಾಂಗ್ರೆಸ್ ಪರವಾಗಿ ನಾನು ಕ್ಷಮೆಯಾಚಿಸಲು ಬಯಸುತ್ತೇನೆ ಎಂದು ಆರೋನ್ ಹೇಳಿದರು.

ಕೊವಿಡ್-19 ಮತ್ತು ವೇಗವಾಗಿ ಹರಡುತ್ತಿರುವ ಒಮಿಕ್ರಾನ್ ರೂಪಾಂತರವು ಪಂಜಾಬ್ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳ ಚುನಾವಣೆಗಳ ಮೇಲೆ ಪರಿಣಾಮದ ಮೋಡ ಆವರಿಸುವಂತೆ ಮಾಡಿದೆ. ಅಲ್ಲಿ ರಾಜಕೀಯ ಪಕ್ಷಗಳು ರ್ಯಾಲಿಗಳನ್ನು ನಡೆಸುವುದನ್ನು ಮುಂದುವರೆಸಿವೆ. ಕಟ್ಟುನಿಟ್ಟಾದ ಕೊವಿಡ್-19 ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಿ ಚುನಾವಣೆಗಳನ್ನು ನಡೆಸಬೇಕೆಂದು ರಾಜಕೀಯ ಪಕ್ಷಗಳಲ್ಲಿ ಚುನಾವಣಾ ಆಯೋಗ ಹೇಳಿದೆ.

ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳ ದೃಷ್ಟಿಯಿಂದ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಲಿಂಗ ಸಮಾನತೆಯತ್ತ ಗಮನ ಹರಿಸುತ್ತಿದೆ. ಈ ಕೆಲವು ಪ್ರಕರಣಗಳು ಹಥಾರಸ್ ನಲ್ಲಿ ದಲಿತ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಮತ್ತು ಉನ್ನಾವ್‌ನಲ್ಲಿನ ಪ್ರಕರಣಗಳು ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು . ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳೆದ ತಿಂಗಳು “ಲಡ್ಕಿ ಹೂಂ, ಲಡ್ ಸಕ್ತಿ ಹೂಂ ಎಂಬ ಚುನಾವಣಾ ಘೋಷಣೆಯನ್ನು ನೀಡಿದ್ದರು

ರಾಜಕೀಯವಾಗಿ ನಿರ್ಣಾಯಕವಾಗಿರುವ ರಾಜ್ಯದಲ್ಲಿ ಬಿಜೆಪಿ ಕೂಡ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು 16 ಲಕ್ಷಕ್ಕೂ ಅಧಿಕ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ₹ 1,000 ಕೋಟಿಗೂ ಹೆಚ್ಚು ಹಣವನ್ನು ವರ್ಗಾಯಿಸುವ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ.  ಸಮಾಜವಾದಿ ಪಕ್ಷವು ಅಖಿಲೇಶ್ ಯಾದವ್ ಮತ್ತು ಅವರ ತಂದೆ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಪಕ್ಷದ ಸರ್ಕಾರಗಳ ಅವಧಿಯಲ್ಲಿ ಮಹಿಳೆಯರಿಗಾಗಿ ಕೈಗೊಂಡ ಉಪಕ್ರಮಗಳನ್ನು ಹೈಲೈಟ್ ಮಾಡಲು ಪ್ರಯತ್ನಿಸಿದೆ.

ಇದನ್ನೂ ಓದಿ: ಮ್ಯಾನ್‌ಕೈಂಡ್ ಫಾರ್ಮಾ ಮುಂದಿನ ವಾರದೊಳಗೆ ಅಗ್ಗದ ಕೊವಿಡ್ ಆಂಟಿವೈರಲ್ ಡ್ರಗ್ ಬಿಡುಗಡೆ ಮಾಡಲಿದೆ: ವರದಿ

Published On - 1:20 pm, Tue, 4 January 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ