AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಪುನರಾಯ್ಕೆಯಾದರೆ ಮುಸ್ಲಿಮರು ತಿಲಕ ಧರಿಸುವಂತೆ ಮಾಡುತ್ತೇನೆ: ಉತ್ತರ ಪ್ರದೇಶದ ಬಿಜೆಪಿ ನಾಯಕ

"ಮೊದಲ ಬಾರಿಗೆ ಇಷ್ಟೊಂದು ಹಿಂದೂಗಳು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ದೊಮರಿಯಾಗಂಜ್‌ನಲ್ಲಿ 'ಸಲಾಮ್' ಇದೆಯೇ ಅಥವಾ 'ಜೈ ಶ್ರೀ ರಾಮ್' ಇದೆಯೇ?" ಎಂದು ಸಿಂಗ್ ಕೇಳಿದ್ದಾರೆ.  2017ರಲ್ಲಿ ಸಿಂಗ್ ಡೊಮರಿಯಾಗಂಜ್ ಕ್ಷೇತ್ರದಿಂದ ಸುಮಾರು 200 ಮತಗಳಿಂದ ಗೆದ್ದಿದ್ದರು.

ನಾನು ಪುನರಾಯ್ಕೆಯಾದರೆ ಮುಸ್ಲಿಮರು ತಿಲಕ ಧರಿಸುವಂತೆ ಮಾಡುತ್ತೇನೆ: ಉತ್ತರ ಪ್ರದೇಶದ ಬಿಜೆಪಿ ನಾಯಕ
ರಾಘವೇಂದ್ರ ಸಿಂಗ್
TV9 Web
| Edited By: |

Updated on: Feb 14, 2022 | 3:52 PM

Share

ಲಖನೌ: ಉತ್ತರಪ್ರದೇಶದ (Uttar Pradesh) ಬಿಜೆಪಿ ಶಾಸಕ ರಾಘವೇಂದ್ರ ಸಿಂಗ್ (Raghvendra Singh) ತಾನು ಮರು ಆಯ್ಕೆಯಾದರೆ ಮುಸ್ಲಿಮರು ಟೋಪಿ (ಸ್ಕಲ್ ಕ್ಯಾಪ್) ಧರಿಸುವ ಬದಲು ಹಣೆಗೆ ತಿಲಕ ಇಡುತ್ತಾರೆ ಎಂದು ಹೇಳಿದ್ದಾರೆ ಬಿಜೆಪಿ (BJP) ನಾಯಕನ ದ್ವೇಷ ಭಾಷಣದ ವಿಡಿಯೊ ವೈರಲ್ ಆಗಿದ್ದು ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ಪೂರ್ವ ಯುಪಿಯ ಡೊಮರಿಯಾಗಂಜ್‌ನ ಶಾಸಕ ರಾಘವೇಂದ್ರ  ಸಿಂಗ್ “ಇಸ್ಲಾಮಿಕ್ ಭಯೋತ್ಪಾದನೆ” ಎಂದು ಕರೆದಿದ್ದನ್ನು ಎದುರಿಸಿರುವ ಭಾಷಣ ಇದು ಎಂದು ಸಮರ್ಥಿಸಿಕೊಂಡಿದ್ದಾರೆ. “ಇಲ್ಲಿ ಇಸ್ಲಾಮಿಕ್ ಭಯೋತ್ಪಾದಕರು ಇದ್ದಾಗ, ಹಿಂದೂಗಳು ಗೋಲ್ ಟೋಪಿಗಳನ್ನು (ಸ್ಕಲ್ ಕ್ಯಾಪ್) ಧರಿಸುವಂತೆ ಒತ್ತಾಯಿಸಲಾಯಿತು. ನಾನು ಷರತ್ತು ವಿಧಿಸಿದೆ. ನಾನು ಹಿಂದೂ ಹೆಮ್ಮೆಗಾಗಿ ಏನು ಬೇಕಾದರೂ ತ್ಯಾಗ ಮಾಡಲು ಸಿದ್ಧನಿದ್ದೇನೆ. ನನ್ನ ಪ್ರಕಾರ ಮುಸ್ಲಿಮರು ನನ್ನನ್ನು ಸೋಲಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದರೆ, ನಾನು ಮೌನವಾಗಿರುವುದಿಲ್ಲ ಎಂದು ರಾಘವೇಂದ್ರ ಸಿಂಗ್ ವಿಡಿಯೊದಲ್ಲಿ ಹೇಳಿದ್ದಾರೆ. ಸಿಂಗ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸ್ಥಾಪಿಸಿದ ಬಲಪಂಥೀಯ ಗುಂಪಿನ ಹಿಂದೂ ಯುವ ವಾಹಿನಿಯ ಉತ್ತರ ಪ್ರದೇಶದ ಉಸ್ತುವಾರಿಯಾಗಿದ್ದಾರೆ. ಸಿಂಗ್ ಅವರ ದ್ವೇಷಭಾಷಣದ ವಿಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ಅವರು ಪ್ರಕರಣ ದಾಖಲಿಸಿದ್ದಾರೆ ಎಂದು ಯುಪಿ ಪೊಲೀಸರು ಹೇಳಿದ್ದಾರೆ. ನಾನು ಮತ್ತೆ ಶಾಸಕನಾದರೆ, ಗೋಲ್ ಟೋಪಿಗಳು (ಸ್ಕಲ್ ಕ್ಯಾಪ್) ಮಾಯವಾದಂತೆ. ಮುಂದಿನ ಬಾರಿ ಮಿಯಾನ್ ಲೋಗ್ (ಮುಸ್ಲಿಮರಿಗೆ ಅವಹೇಳನಕಾರಿಯಾಗಿ ಬಳಸಲಾಗುವ ಪದ) ತಿಲಕ ಧರಿಸುತ್ತಾರೆ ”ಎಂದು ಸಿಂಗ್ ಹೇಳಿದ್ದಾರೆ.

“ಮೊದಲ ಬಾರಿಗೆ ಇಷ್ಟೊಂದು ಹಿಂದೂಗಳು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ದೊಮರಿಯಾಗಂಜ್‌ನಲ್ಲಿ ‘ಸಲಾಮ್’ ಇದೆಯೇ ಅಥವಾ ‘ಜೈ ಶ್ರೀ ರಾಮ್’ ಇದೆಯೇ?” ಎಂದು ಸಿಂಗ್ ಕೇಳಿದ್ದಾರೆ.  2017ರಲ್ಲಿ ಸಿಂಗ್ ಡೊಮರಿಯಾಗಂಜ್ ಕ್ಷೇತ್ರದಿಂದ ಸುಮಾರು 200 ಮತಗಳಿಂದ ಗೆದ್ದಿದ್ದರು.

ಮಿಶ್ರ ಜನಸಂಖ್ಯೆಯನ್ನು ಹೊಂದಿರುವ ಡೊಮರಿಯಾಗಂಜ್ ಉತ್ತರ ಪ್ರದೇಶ ಚುನಾವಣೆಯಲ್ಲಿ ಆರನೇ ಹಂತದ ಮತದಾನದ ಕ್ಷೇತ್ರಗಳಲ್ಲಿ ಬರಲಿದೆ.  ಪೂರ್ವ ಯುಪಿಯಲ್ಲಿ ಹಲವಾರು ಬಿಜೆಪಿ ನಾಯಕರು ಮತದಾನಕ್ಕೂ ಮುನ್ನ ಧ್ರುವೀಕರಣದ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಬಿಜೆಪಿ ಕಳೆದ ತಿಂಗಳು ಹಲವಾರು ಹಿಂದುಳಿದ ಜಾತಿಗಳ ನಾಯಕರನ್ನು ಕಳೆದುಕೊಂಡಿದ್ದು, ಅವರು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷಕ್ಕೆ ಸೇರಿದ್ದರು.

ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಕಾಂಗ್ರೆಸ್​​ಗೆ ಅದರ ದಾರಿ, ನಾವು ನಮ್ಮ ದಾರಿಯಲ್ಲಿ ಹೋಗುತ್ತೇವೆ: ಮಮತಾ ಬ್ಯಾನರ್ಜಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ