AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರ ಕೆಲಸದಿಂದ ಪ್ರಭಾವಿತಳಾಗಿದ್ದೇನೆ, ಮುಲಾಯಂ ಸಿಂಗ್​ ಯಾದವ್ ಆಶೀರ್ವಾದ ನನ್ನ ಮೇಲಿದೆ: ಅಪರ್ಣಾ ಯಾದವ್​

ಅಪರ್ಣಾ ಯಾದವ್​ ಕೇವಲ ರಾಜಕಾರಣಿಯಷ್ಟೇ ಅಲ್ಲ, ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿಯೂ ಹೌದು. ಇವರು ಶಾಸ್ತ್ರೀಸ ಸಂಗೀತ ಅಭ್ಯಾಸ ಮಾಡಿದ್ದಾರೆ.  ಪ್ರಾಣಿ ಪ್ರಿಯರಾಗಿದ್ದು, ಪ್ರಾಣಿಗಳ ರಕ್ಷಣೆಗಾಗಿ ಎನ್​ಜಿಒ ಒಂದನ್ನೂ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿಯವರ ಕೆಲಸದಿಂದ ಪ್ರಭಾವಿತಳಾಗಿದ್ದೇನೆ, ಮುಲಾಯಂ ಸಿಂಗ್​ ಯಾದವ್ ಆಶೀರ್ವಾದ ನನ್ನ ಮೇಲಿದೆ: ಅಪರ್ಣಾ ಯಾದವ್​
ಇಂದು ಬಿಜೆಪಿ ಪಕ್ಷ ಸೇರಿದ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್​ ಸೊಸೆ (ಪಿಟಿಐ ಚಿತ್ರ)
TV9 Web
| Updated By: Lakshmi Hegde|

Updated on:Jan 19, 2022 | 4:52 PM

Share

ಉತ್ತರಪ್ರದೇಶದಲ್ಲಿಂದು ಮಹತ್ವದ ಬೆಳವಣಿಗೆಯಾಗಿದೆ. ಅಲ್ಲಿ ಬಿಜೆಪಿಗೆ ನೇರ ಪ್ರತಿಸ್ಪರ್ಧಿಯಾಗಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಕುಟುಂಬದ ಸೊಸೆ ಇಂದು ಬಿಜೆಪಿಗೇ ಸೇರಿದ್ದಾರೆ. ಅಂದರೆ ಮುಲಾಯಂ ಸಿಂಗ್​ ಯಾದವ್​ ಅವರ ಕಿರಿಯ ಪುತ್ರನ ಪತ್ನಿ ಅಪರ್ಣಾ ಯಾದವ್​ ಬಿಜೆಪಿಗೆ ಸೇರಿದ್ದು, ರಾಜಕೀಯ ವಲಯದಲ್ಲಿ ಬಹುಮುಖ್ಯ ಬೆಳವಣಿಗೆ ಎಂದೇ ಹೇಳಲಾಗುತ್ತಿದೆ. ಇತ್ತೀಚೆಗೆ ಬಿಜೆಪಿಯಿಂದ ಮೂರು ಸಚಿವರು ಸೇರಿ ಹಲವು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಇಂದು ಅಪರ್ಣಾ ಯಾದವ್​ ಕಮಲ ಮುಡಿದಿದ್ದಾರೆ. 2017ರ ವಿಧಾನಸಭೆ ಚುನಾವಣೆಯಲ್ಲಿ ಲಖನೌದಿಂದ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿ ವಿರುದ್ಧ ಸೋತಿದ್ದ ಅಪರ್ಣಾಗೆ ಈ ಚುನಾವಣೆಯಲ್ಲಿ ಟಿಕೆಟ್ ಸಿಗಲಿದೆಯಾ ಎಂಬುದಿನ್ನೂ ನಿಶ್ಚಯವಾಗಿಲ್ಲ.

ಇಂದು ಬಿಜೆಪಿ ಸೇರಿದ ಬಳಿಕ ಟೈಮ್ಸ್​ ನೌ ಮಾಧ್ಯಮದೊಂದಿಗೆ ಮಾತನಾಡಿದ ಅಪರ್ಣಾ ಯಾದವ್, ನಾನು ನನ್ನ ಮಾವ ಮುಲಾಯಂ ಸಿಂಗ್​ ಯಾದವ್​ ಅವರ ಆಶೀರ್ವಾದ ಪಡೆದೇ ಬಿಜೆಪಿಗೆ ಸೇರುತ್ತಿದ್ದೇನೆ. ಅವರ ಆಶೀರ್ವಾದ ನನ್ನೊಂದಿಗೆ ಸದಾ ಇರುತ್ತದೆ ಎಂದು ಹೇಳಿದ್ದಾರೆ. ಹಾಗೇ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೆಲಸ, ರಾಷ್ಟ್ರದ ಬಗೆಗೆ ಇರುವ ಆಸಕ್ತಿಯಿಂದ ಪ್ರಭಾವಿತಳಾಗಿದ್ದೇನೆ. ನನ್ನದು ರಾಷ್ಟ್ರದ ಹಿತಾಸಕ್ತಿ ಮುಖ್ಯ ಎಂಬ ಧ್ಯೇಯ. ರಾಷ್ಟ್ರ ಮೊದಲು ಎನ್ನುವವಳು ನಾನು. ಬಿಜೆಪಿ ಸಿದ್ಧಾಂತವೂ ಕೂಡ ಇದೇ ಆಗಿದೆ. ಹಾಗಾಗಿ ನಾನು ರಾಷ್ಟ್ರಕ್ಕಾಗಿ ದುಡಿಯಲು ಬಿಜೆಪಿ ಸೇರಿದ್ದೇನೆ ಎಂದು ಹೇಳಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಪಕ್ಷವೇ ನಿರ್ಧರಿಸುತ್ತದೆ ಎಂದಿದ್ದಾರೆ. ಯೋಗಿ ಆದಿತ್ಯನಾಥ್​ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಇಬ್ಬರಲ್ಲಿ ಯಾರು ಅತ್ಯುತ್ತಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕೇಳಿದ ಪ್ರಶ್ನೆಗೆ ಸೂಕ್ಷ್ಮವಾಗಿ ಉತ್ತರಿಸಿದ ಅವರು, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಯೋಗಿ ಆದಿತ್ಯನಾಥ್​ ಅವರೇ ಗೆದ್ದು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿದರು. ಅಂದಹಾಗೇ, ಪ್ರತೀಕ್​ ಯಾದವ್​, ಮುಲಾಯಂ ಸಿಂಗ್ ಯಾದವ್ ಅವರ ಎರಡನೇ ಪತ್ನಿಗೆ ಹುಟ್ಟಿದ ಮಗ. ಅಖಿಲೇಶ್ ಯಾದವ್​ ಮೊದಲ ಪತ್ನಿಯ ಪುತ್ರ. ಪ್ರತೀಕ್​ ರಾಜಕೀಯದಿಂದ ದೂರವುಳಿದಿದ್ದಾರೆ.

ಅತ್ಯುತ್ತಮ ಗಾಯಕಿ ಅಪರ್ಣಾ ಅಪರ್ಣಾ ಯಾದವ್​ ಕೇವಲ ರಾಜಕಾರಣಿಯಷ್ಟೇ ಅಲ್ಲ, ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿಯೂ ಹೌದು. ಇವರು ಶಾಸ್ತ್ರೀಸ ಸಂಗೀತ ಅಭ್ಯಾಸ ಮಾಡಿದ್ದಾರೆ.  ಯುಕೆಯ ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಸಂಬಂಧಗಳು ಮತ್ತು ರಾಜಕೀಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಾಣಿ ಪ್ರಿಯರೂ ಆಗಿರುವ ಇವರು, ಬಿ ಅವೇರ್ ಎಂಬ ಹೆಸರಿನ ಎನ್​ಜಿಒ ನಡೆಸುತ್ತಿದ್ದಾರೆ. ಈ ಎನ್​ಜಿಒ ಪ್ರಾಣಿ ರಕ್ಷಣೆಯ ಧ್ಯೇಯ ಹೊಂದಿದೆ. ಅಷ್ಟೇ ಅಲ್ಲ, ಮಹಿಳಾ ಸುರಕ್ಷತೆ, ಮಹಿಳೆಯರ ವಿರುದ್ಧ ನಡೆಯುವ ಕ್ರೈಂಗಳ ನಿಯಂತ್ರಣಕ್ಕಾಗಿಯೂ ಶ್ರಮಿಸುತ್ತಿದ್ದಾರೆ.

ಇದನ್ನೂ ಓದಿ: ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್​ ಬಿಜೆಪಿ ಸೇರ್ಪಡೆ; ಸಮಾಜವಾದಿ ಪಕ್ಷಕ್ಕೆ ಇದು ಬಹುದೊಡ್ಡ ಹಿನ್ನಡೆ !

Published On - 4:49 pm, Wed, 19 January 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?