AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಶೋಚನೀಯವಾಗಿದೆ, ಮತ ವ್ಯರ್ಥ ಮಾಡಬೇಡಿ: ಮಾಯಾವತಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ತುಂಬಾ ಶೋಚನೀಯವಾಗಿದೆ, ಅವರ ಸಿಎಂ ಅಭ್ಯರ್ಥಿ ಕೆಲವೇ ಗಂಟೆಗಳಲ್ಲಿ ತಮ್ಮ ನಿಲುವನ್ನು ಬದಲಾಯಿಸಿದ್ದಾರೆ. ಜನರು ಕಾಂಗ್ರೆಸ್‌ಗೆ ತಮ್ಮ ಮತವನ್ನು ನೀಡಿ ತಮ್ಮ ಮತವನ್ನು ವ್ಯರ್ಥ ಮಾಡದಿದ್ದರೆ ಒಳ್ಳೆಯದು ಎಂದು ಮಾಯಾವತಿ ಟ್ವೀಟ್.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಶೋಚನೀಯವಾಗಿದೆ, ಮತ ವ್ಯರ್ಥ ಮಾಡಬೇಡಿ: ಮಾಯಾವತಿ
ಮಾಯಾವತಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 23, 2022 | 6:03 PM

Share

ಲಖನೌ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಸ್ಥಿತಿ ತುಂಬಾ ಶೋಚನೀಯವಾಗಿದೆ.ಅವರು ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ ಒಂದು ಗಂಟೆಯಲ್ಲಿ ಅವರನ್ನು ಬದಲಿಸಿದರು ಎಂದು ಬಹುಜನ ಸಮಾಜ ಪಕ್ಷದ  (Bahujan Samaj Party) ಮುಖ್ಯಸ್ಥೆ ಮಾಯಾವತಿ (Mayawati) ಭಾನುವಾರ ಹೇಳಿದ್ದಾರೆ. “ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ತುಂಬಾ ಶೋಚನೀಯವಾಗಿದೆ, ಅವರ ಸಿಎಂ ಅಭ್ಯರ್ಥಿ ಕೆಲವೇ ಗಂಟೆಗಳಲ್ಲಿ ತಮ್ಮ ನಿಲುವನ್ನು ಬದಲಾಯಿಸಿದ್ದಾರೆ. ಜನರು ಕಾಂಗ್ರೆಸ್‌ಗೆ ತಮ್ಮ ಮತವನ್ನು ನೀಡಿ ತಮ್ಮ ಮತವನ್ನು ವ್ಯರ್ಥ ಮಾಡದಿದ್ದರೆ ಒಳ್ಳೆಯದು. ಬಿಎಸ್​​ಪಿಗಾಗಿ ಒಂದು ಮತ ನೀಡಿ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ. ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮತಗಳನ್ನು ವಿಭಜಿಸುವ ಪಕ್ಷ ಕಾಂಗ್ರೆಸ್ ಎಂದು ಬಣ್ಣಿಸಿದ ಅವರು, ಮತದಾರರು ಅದನ್ನು ನಿರ್ಲಕ್ಷಿಸುವಂತೆ ಮನವಿ ಮಾಡಿದರು.  “ಉತ್ತರಪ್ರದೇಶದ ಜನರು ಕಾಂಗ್ರೆಸ್ ಅನ್ನು ವೋಟ್ ಕಟ್ ಮಾಡುವ ಪಕ್ಷವೆಂದು ನೋಡುತ್ತಾರೆ. ಸಮಾಜದ ಎಲ್ಲಾ ವರ್ಗಗಳ ಪರವಾಗಿ ಕೆಲಸ ಮಾಡುವ ಸರ್ಕಾರದ ಪರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕಾದರೆ, ಈ ಸಂದರ್ಭದಲ್ಲಿ ಬಿಎಸ್ಪಿ ಮೊದಲ ಸ್ಥಾನವನ್ನು ಹೊಂದಿದೆ ಎಂದು ಮಾಯಾವತಿ ಹೇಳಿದ್ದಾರೆ.

ಎರಡು ದಿನಗಳ ಹಿಂದೆ ದೆಹಲಿಯ ಕಾಂಗ್ರೆಸ್ ಪ್ರಧಾನ ಕಛೇರಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಲ್ಲಿ ಯುಪಿಯಲ್ಲಿ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಕೇಳಿದಾಗ, “ನೀವು ಉತ್ತರ ಪ್ರದೇಶದ ಕಾಂಗ್ರೆಸ್‌ನಲ್ಲಿ ಅಂಥಾ ಯಾರನ್ನಾದರೂ ನೋಡುತ್ತಿದ್ದೀರಾ? ಎಂದು ಕೇಳಿದ್ದರು.

ನಂತರ ಶನಿವಾರ ಸಂದರ್ಶನವೊಂದರಲ್ಲಿ ವಾದ್ರಾ ಅವರು ನಾನು ಪಕ್ಷದ ಏಕೈಕ ಮುಖವಲ್ಲ ಎಂದು ಹೇಳಿದ್ದರು. ಸಂದರ್ಶನದಲ್ಲಿ, ಬಿಎಸ್ಪಿಯ ಕಡಿಮೆ ಪ್ರಚಾರದ ಬಗ್ಗೆ ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಎಂದ ಪ್ರಿಯಾಂಕಾ ಗಾಂಧಿ; ಉಲ್ಟಾ ಹೊಡೆದಿದ್ದು ಯಾಕೆ?

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ