AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ದಿನಗಳು ಬಾಕಿ; ಅಖಿಲೇಶ್​ ಯಾದವ್ ಪಕ್ಷದ ಶಾಸಕ ಅರೆಸ್ಟ್​, 14 ದಿನಗಳ ನ್ಯಾಯಾಂಗ ಬಂಧನ

ಹಸನ್​ ಪದೇಪದೆ ತಪ್ಪು ಮಾಡುತ್ತಿದ್ದು, ಅವರ ವಿರುದ್ಧ ವರ್ಷದಿಂದಲೂ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ನಿನ್ನೆ ಹಸನ್​ ಬಂಧನವಾಗಿದ್ದು, ಇಂದು ಫಾಸ್ಟ್​ಟ್ರ್ಯಾಕ್​ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು.

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ದಿನಗಳು ಬಾಕಿ; ಅಖಿಲೇಶ್​ ಯಾದವ್ ಪಕ್ಷದ ಶಾಸಕ ಅರೆಸ್ಟ್​, 14 ದಿನಗಳ ನ್ಯಾಯಾಂಗ ಬಂಧನ
ನಾಹೀದ್​ ಹಸನ್​
TV9 Web
| Edited By: |

Updated on: Jan 15, 2022 | 6:52 PM

Share

ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಾಗ ಸಮಾಜವಾದಿ ಪಕ್ಷದ ಶಾಸಕ ನಾಹೀದ್​ ಹಸನ್​ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಕೈರಾನಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಗ್ಯಾಂಗ್​ಸ್ಟರ್ ಕಾಯ್ದೆಯಡಿ ಅವರನ್ನು ಬಂಧಿಸಲಾಗಿದೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಈ ಬೆಳವಣಿಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್​ಗೆ ತುಸು ಮಟ್ಟಿಗೆ ಸಂಕಷ್ಟ ತಂದಿದೆ.

ಹಸನ್​ ಪದೇಪದೆ ತಪ್ಪು ಮಾಡುತ್ತಿದ್ದು, ಅವರ ವಿರುದ್ಧ ವರ್ಷದಿಂದಲೂ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ನಿನ್ನೆ ಹಸನ್​ ಬಂಧನವಾಗಿದ್ದು, ಇಂದು ಫಾಸ್ಟ್​ಟ್ರ್ಯಾಕ್​ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು.ಇವರು ತಮ್ಮ ವಿರುದ್ಧ ಬಂಧನದ ವಾರೆಂಟ್ ಜಾರಿಯಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದರು. ನಂತರ ಶುಕ್ರವಾರ ಸಿಕ್ಕಿಬಿದ್ದಿದ್ದಾರೆ. ಹಾಗೇ, ಇಂದು ವಿಚಾರಣೆ ವೇಳೆ ಸಹ ಕೋರ್ಟ್​ ಹೊರಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿತ್ತು.  ಶಾಸಕ ನಾಹೀದ್ ಹಸನ್​ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಖಿಲೇಶ್ ಯಾದವ್​, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಆಗುವುದಿಲ್ಲ ಎಂಬ ಹತಾಶೆ ಬಿಜೆಪಿಗೆ ಶುರುವಾಗಿದೆ. ಹೀಗಾಗಿ ಈಗಿನಿಂದಲೇ ಇಂಥ ಪ್ರಯತ್ನಗಳನ್ನು ಮಾಡುತ್ತಿದೆ.  ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರ ಪಕ್ಷಗಳ ಮೇಲೆ ಎಫ್​ಐಆರ್​ನಂತಹ ಕ್ರಮ ಕೈಗೊಳ್ಳುತ್ತಿರುವುದು ಬಿಜೆಪಿಯ ಶೇ.100ರಷ್ಟು ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಇದೀಗ ಬಂಧಿತರಾದ ನಾಹೀದ್​ ಹಸನ್​​ ವಿರುದ್ಧ 2019ರಲ್ಲಿ ಜನವರಿ 7ರಂದು ಕೂಡ ಪ್ರಕರಣ ದಾಖಲಾಗಿತ್ತು. ಭೂವ್ಯವಹಾರದಲ್ಲಿ 80 ಲಕ್ಷ ರೂ.ವಂಚನೆ ಮಾಡಿದ ಆರೋಪ ಇವರ ವಿರುದ್ಧ ಕೇಳಿಬರುತ್ತಿದೆ. 2020ರ ಜನವರಿಯಲ್ಲಿ ಇದೇ ಕೇಸ್​​ನಡಿ ಜೈಲಿಗೆ ಕೂಡ ಸೇರಿದ್ದರು. ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್​ 420 ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಅದಾದ ನಂತರ ಇನ್ನೂ ಹಲವು ಕೇಸ್​ಗಳಡಿ ಎಫ್​ಐಆರ್​ ದಾಖಲಾಗಿತ್ತು. ಇನ್ನು ಸಮಾಜವಾದಿ ಪಕ್ಷದ 2500 ಕಾರ್ಯಕರ್ತರ ವಿರುದ್ಧ ಕೂಡ ಎಫ್​ಐಆರ್ ದಾಖಲಾಗಿದೆ. ಕೊವಿಡ್​ 19 ಶಿಷ್ಟಾಚಾರ ಉಲ್ಲಂಘನೆ ಮತ್ತು ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಅವರ ವಿರುದ್ಧ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ; ಪ್ರಚಾರಸಭೆ, ರೋಡ್​ಶೋಗಳಿಗೆ ವಿಧಿಸಿದ್ದ ನಿರ್ಬಂಧ ಅವಧಿ ಜ.22ರವರೆಗೆ ವಿಸ್ತರಿಸಿದ ಚುನಾವಣಾ ಆಯೋಗ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ