AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ದಿನಗಳು ಬಾಕಿ; ಅಖಿಲೇಶ್​ ಯಾದವ್ ಪಕ್ಷದ ಶಾಸಕ ಅರೆಸ್ಟ್​, 14 ದಿನಗಳ ನ್ಯಾಯಾಂಗ ಬಂಧನ

ಹಸನ್​ ಪದೇಪದೆ ತಪ್ಪು ಮಾಡುತ್ತಿದ್ದು, ಅವರ ವಿರುದ್ಧ ವರ್ಷದಿಂದಲೂ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ನಿನ್ನೆ ಹಸನ್​ ಬಂಧನವಾಗಿದ್ದು, ಇಂದು ಫಾಸ್ಟ್​ಟ್ರ್ಯಾಕ್​ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು.

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ದಿನಗಳು ಬಾಕಿ; ಅಖಿಲೇಶ್​ ಯಾದವ್ ಪಕ್ಷದ ಶಾಸಕ ಅರೆಸ್ಟ್​, 14 ದಿನಗಳ ನ್ಯಾಯಾಂಗ ಬಂಧನ
ನಾಹೀದ್​ ಹಸನ್​
TV9 Web
| Edited By: |

Updated on: Jan 15, 2022 | 6:52 PM

Share

ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಾಗ ಸಮಾಜವಾದಿ ಪಕ್ಷದ ಶಾಸಕ ನಾಹೀದ್​ ಹಸನ್​ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಕೈರಾನಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಗ್ಯಾಂಗ್​ಸ್ಟರ್ ಕಾಯ್ದೆಯಡಿ ಅವರನ್ನು ಬಂಧಿಸಲಾಗಿದೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಈ ಬೆಳವಣಿಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್​ಗೆ ತುಸು ಮಟ್ಟಿಗೆ ಸಂಕಷ್ಟ ತಂದಿದೆ.

ಹಸನ್​ ಪದೇಪದೆ ತಪ್ಪು ಮಾಡುತ್ತಿದ್ದು, ಅವರ ವಿರುದ್ಧ ವರ್ಷದಿಂದಲೂ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ನಿನ್ನೆ ಹಸನ್​ ಬಂಧನವಾಗಿದ್ದು, ಇಂದು ಫಾಸ್ಟ್​ಟ್ರ್ಯಾಕ್​ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು.ಇವರು ತಮ್ಮ ವಿರುದ್ಧ ಬಂಧನದ ವಾರೆಂಟ್ ಜಾರಿಯಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದರು. ನಂತರ ಶುಕ್ರವಾರ ಸಿಕ್ಕಿಬಿದ್ದಿದ್ದಾರೆ. ಹಾಗೇ, ಇಂದು ವಿಚಾರಣೆ ವೇಳೆ ಸಹ ಕೋರ್ಟ್​ ಹೊರಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿತ್ತು.  ಶಾಸಕ ನಾಹೀದ್ ಹಸನ್​ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಖಿಲೇಶ್ ಯಾದವ್​, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಆಗುವುದಿಲ್ಲ ಎಂಬ ಹತಾಶೆ ಬಿಜೆಪಿಗೆ ಶುರುವಾಗಿದೆ. ಹೀಗಾಗಿ ಈಗಿನಿಂದಲೇ ಇಂಥ ಪ್ರಯತ್ನಗಳನ್ನು ಮಾಡುತ್ತಿದೆ.  ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರ ಪಕ್ಷಗಳ ಮೇಲೆ ಎಫ್​ಐಆರ್​ನಂತಹ ಕ್ರಮ ಕೈಗೊಳ್ಳುತ್ತಿರುವುದು ಬಿಜೆಪಿಯ ಶೇ.100ರಷ್ಟು ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಇದೀಗ ಬಂಧಿತರಾದ ನಾಹೀದ್​ ಹಸನ್​​ ವಿರುದ್ಧ 2019ರಲ್ಲಿ ಜನವರಿ 7ರಂದು ಕೂಡ ಪ್ರಕರಣ ದಾಖಲಾಗಿತ್ತು. ಭೂವ್ಯವಹಾರದಲ್ಲಿ 80 ಲಕ್ಷ ರೂ.ವಂಚನೆ ಮಾಡಿದ ಆರೋಪ ಇವರ ವಿರುದ್ಧ ಕೇಳಿಬರುತ್ತಿದೆ. 2020ರ ಜನವರಿಯಲ್ಲಿ ಇದೇ ಕೇಸ್​​ನಡಿ ಜೈಲಿಗೆ ಕೂಡ ಸೇರಿದ್ದರು. ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್​ 420 ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಅದಾದ ನಂತರ ಇನ್ನೂ ಹಲವು ಕೇಸ್​ಗಳಡಿ ಎಫ್​ಐಆರ್​ ದಾಖಲಾಗಿತ್ತು. ಇನ್ನು ಸಮಾಜವಾದಿ ಪಕ್ಷದ 2500 ಕಾರ್ಯಕರ್ತರ ವಿರುದ್ಧ ಕೂಡ ಎಫ್​ಐಆರ್ ದಾಖಲಾಗಿದೆ. ಕೊವಿಡ್​ 19 ಶಿಷ್ಟಾಚಾರ ಉಲ್ಲಂಘನೆ ಮತ್ತು ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಅವರ ವಿರುದ್ಧ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ; ಪ್ರಚಾರಸಭೆ, ರೋಡ್​ಶೋಗಳಿಗೆ ವಿಧಿಸಿದ್ದ ನಿರ್ಬಂಧ ಅವಧಿ ಜ.22ರವರೆಗೆ ವಿಸ್ತರಿಸಿದ ಚುನಾವಣಾ ಆಯೋಗ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ