AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ದಿನಗಳು ಬಾಕಿ; ಅಖಿಲೇಶ್​ ಯಾದವ್ ಪಕ್ಷದ ಶಾಸಕ ಅರೆಸ್ಟ್​, 14 ದಿನಗಳ ನ್ಯಾಯಾಂಗ ಬಂಧನ

ಹಸನ್​ ಪದೇಪದೆ ತಪ್ಪು ಮಾಡುತ್ತಿದ್ದು, ಅವರ ವಿರುದ್ಧ ವರ್ಷದಿಂದಲೂ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ನಿನ್ನೆ ಹಸನ್​ ಬಂಧನವಾಗಿದ್ದು, ಇಂದು ಫಾಸ್ಟ್​ಟ್ರ್ಯಾಕ್​ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು.

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ದಿನಗಳು ಬಾಕಿ; ಅಖಿಲೇಶ್​ ಯಾದವ್ ಪಕ್ಷದ ಶಾಸಕ ಅರೆಸ್ಟ್​, 14 ದಿನಗಳ ನ್ಯಾಯಾಂಗ ಬಂಧನ
ನಾಹೀದ್​ ಹಸನ್​
TV9 Web
| Updated By: Lakshmi Hegde|

Updated on: Jan 15, 2022 | 6:52 PM

Share

ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಾಗ ಸಮಾಜವಾದಿ ಪಕ್ಷದ ಶಾಸಕ ನಾಹೀದ್​ ಹಸನ್​ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಕೈರಾನಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಗ್ಯಾಂಗ್​ಸ್ಟರ್ ಕಾಯ್ದೆಯಡಿ ಅವರನ್ನು ಬಂಧಿಸಲಾಗಿದೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಈ ಬೆಳವಣಿಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್​ಗೆ ತುಸು ಮಟ್ಟಿಗೆ ಸಂಕಷ್ಟ ತಂದಿದೆ.

ಹಸನ್​ ಪದೇಪದೆ ತಪ್ಪು ಮಾಡುತ್ತಿದ್ದು, ಅವರ ವಿರುದ್ಧ ವರ್ಷದಿಂದಲೂ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ನಿನ್ನೆ ಹಸನ್​ ಬಂಧನವಾಗಿದ್ದು, ಇಂದು ಫಾಸ್ಟ್​ಟ್ರ್ಯಾಕ್​ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು.ಇವರು ತಮ್ಮ ವಿರುದ್ಧ ಬಂಧನದ ವಾರೆಂಟ್ ಜಾರಿಯಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದರು. ನಂತರ ಶುಕ್ರವಾರ ಸಿಕ್ಕಿಬಿದ್ದಿದ್ದಾರೆ. ಹಾಗೇ, ಇಂದು ವಿಚಾರಣೆ ವೇಳೆ ಸಹ ಕೋರ್ಟ್​ ಹೊರಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿತ್ತು.  ಶಾಸಕ ನಾಹೀದ್ ಹಸನ್​ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಖಿಲೇಶ್ ಯಾದವ್​, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಆಗುವುದಿಲ್ಲ ಎಂಬ ಹತಾಶೆ ಬಿಜೆಪಿಗೆ ಶುರುವಾಗಿದೆ. ಹೀಗಾಗಿ ಈಗಿನಿಂದಲೇ ಇಂಥ ಪ್ರಯತ್ನಗಳನ್ನು ಮಾಡುತ್ತಿದೆ.  ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರ ಪಕ್ಷಗಳ ಮೇಲೆ ಎಫ್​ಐಆರ್​ನಂತಹ ಕ್ರಮ ಕೈಗೊಳ್ಳುತ್ತಿರುವುದು ಬಿಜೆಪಿಯ ಶೇ.100ರಷ್ಟು ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಇದೀಗ ಬಂಧಿತರಾದ ನಾಹೀದ್​ ಹಸನ್​​ ವಿರುದ್ಧ 2019ರಲ್ಲಿ ಜನವರಿ 7ರಂದು ಕೂಡ ಪ್ರಕರಣ ದಾಖಲಾಗಿತ್ತು. ಭೂವ್ಯವಹಾರದಲ್ಲಿ 80 ಲಕ್ಷ ರೂ.ವಂಚನೆ ಮಾಡಿದ ಆರೋಪ ಇವರ ವಿರುದ್ಧ ಕೇಳಿಬರುತ್ತಿದೆ. 2020ರ ಜನವರಿಯಲ್ಲಿ ಇದೇ ಕೇಸ್​​ನಡಿ ಜೈಲಿಗೆ ಕೂಡ ಸೇರಿದ್ದರು. ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್​ 420 ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಅದಾದ ನಂತರ ಇನ್ನೂ ಹಲವು ಕೇಸ್​ಗಳಡಿ ಎಫ್​ಐಆರ್​ ದಾಖಲಾಗಿತ್ತು. ಇನ್ನು ಸಮಾಜವಾದಿ ಪಕ್ಷದ 2500 ಕಾರ್ಯಕರ್ತರ ವಿರುದ್ಧ ಕೂಡ ಎಫ್​ಐಆರ್ ದಾಖಲಾಗಿದೆ. ಕೊವಿಡ್​ 19 ಶಿಷ್ಟಾಚಾರ ಉಲ್ಲಂಘನೆ ಮತ್ತು ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಅವರ ವಿರುದ್ಧ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ; ಪ್ರಚಾರಸಭೆ, ರೋಡ್​ಶೋಗಳಿಗೆ ವಿಧಿಸಿದ್ದ ನಿರ್ಬಂಧ ಅವಧಿ ಜ.22ರವರೆಗೆ ವಿಸ್ತರಿಸಿದ ಚುನಾವಣಾ ಆಯೋಗ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ