AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Assembly Elections: ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಕಾಂಗ್ರೆಸ್​ ಪಕ್ಷದ ಸಿಎಂ ಅಭ್ಯರ್ಥಿ? ಸಂಚಲನ ಸೃಷ್ಟಿಸಿದ ಹೇಳಿಕೆ

ಪ್ರಿಯಾಂಕ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಹುಟ್ಟಿಸಿದೆ. ಮುಖ್ಯಮಂತ್ರಿ ಆಗಲು ಪ್ರಿಯಾಂಕ ಗಾಂಧಿ ವಿಧಾನಸಭಾ ಚುನಾವಣೆ ಗೆಲ್ಲಬೇಕು ಎಂದೇನಿಲ್ಲ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

UP Assembly Elections: ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಕಾಂಗ್ರೆಸ್​ ಪಕ್ಷದ ಸಿಎಂ ಅಭ್ಯರ್ಥಿ? ಸಂಚಲನ ಸೃಷ್ಟಿಸಿದ ಹೇಳಿಕೆ
ಪ್ರಿಯಾಂಕಾ ಗಾಂಧಿ
TV9 Web
| Edited By: |

Updated on:Jan 21, 2022 | 2:18 PM

Share

ದೆಹಲಿ: ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಉತ್ತರ ಪ್ರದೇಶ ಚುನಾವಣೆಗೆ (Uttar Pradesh Assembly Elections 2022) ಸಂಬಂಧಿಸಿದಂತೆ ಹೊಸ ಸಂಚಲನದ ಹೇಳಿಕೆಯೊಂದು ಕೇಳಿಬಂದಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಯಾರು (Congress CM Candidate) ಎಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಉತ್ತರ ಪ್ರದೇಶದ ಯುವ ಸಮುದಾಯದ ಮಂದಿಗೆ ಉದ್ಯೋಗ ನೀಡುವ ಕುರಿತಾದ ಪ್ರಣಾಳಿಕೆ ಬಿಡುಗಡೆ ಮಾಡಿದ ಅವರು ಮಾತನಾಡಿದ್ದಾರೆ. ಈ ವೇಳೆ, ಬಿಜೆಪಿ ಯೋಗಿ ಆದಿತ್ಯನಾಥ್ ಹಾಗೂ ಸಮಾಜವಾದಿ ಪಕ್ಷ ಅಖಿಲೇಶ್ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮುಂದಿಟ್ಟಿದೆ. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಹೇಳಿಕೆ ನೀಡಿದ್ದಾರೆ.

‘ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದಲ್ಲಿ ನೀವು ಬೇರೆ ಯಾವುದಾದರೂ ಮುಖವನ್ನು ಕಾಣುತ್ತೀರಾ?’ ಎಂದು ಪ್ರಶ್ನೆ ಮಾಡಿದ್ದಾರೆ. ಆ ಬಗ್ಗೆ ಮತ್ತಷ್ಟು ಪ್ರಶ್ನಿಸಿದಾಗ ‘ನೀವು ನನ್ನ ಮುಖವನ್ನು ನೋಡಬಹುದು? ಕಾಣುವುದಿಲ್ಲವೇ?’ ಎಂದು ಕೇಳಿದ್ದಾರೆ. ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದ ಪ್ರಿಯಾಂಕಾ ಗಾಂಧಿ ಈಗ ಮತ್ತೆ ಸುದ್ದಿಯಲ್ಲಿ ಇದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಲಬ್ಯವಾಗಿಲ್ಲ. ಆದರೆ, ಪ್ರಿಯಾಂಕ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಹುಟ್ಟಿಸಿದೆ. ಮುಖ್ಯಮಂತ್ರಿ ಆಗಲು ಪ್ರಿಯಾಂಕ ಗಾಂಧಿ ವಿಧಾನಸಭಾ ಚುನಾವಣೆ ಗೆಲ್ಲಬೇಕು ಎಂದೇನಿಲ್ಲ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

ಉತ್ತರ ಪ್ರದೇಶದಲ್ಲಿ ಈ ಮೊದಲು ಕೂಡ ಯೋಗಿ ಆದಿತ್ಯನಾಥ್ ಅಥವಾ ಅಖಿಲೇಶ್ ಯಾದವ್ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಈ ಬಾರಿ ಯೋಗಿ ಆದಿತ್ಯನಾಥ್ ಗೋರಖ್​ಪುರ್​ದಿಂದ ಹಾಗೂ ಅಖಿಲೇಶ್ ಯಾದವ್ ಕರ್ಹಾಲ್ ಎಂಬಲ್ಲಿಂದ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.

ಇದನ್ನೂ ಓದಿ: ಹೋಮ್​​ವರ್ಕ್ ಮಾಡಿಸಲು ಮುಂಜಾನೆ 3-4 ಗಂಟೆವರೆಗೆ ಮಕ್ಕಳೊಂದಿಗೆ ಕುಳಿತುಕೊಳ್ಳಬೇಕಾಗಿ ಬರುತ್ತದೆ: ಪ್ರಿಯಾಂಕಾ ಗಾಂಧಿ

ಇದನ್ನೂ ಓದಿ: Fact check ಯೋಗಿ ಸರ್ಕಾರ ಆಯ್ಕೆಯಾದರೆ ಉತ್ತರ ಪ್ರದೇಶ ಸಮೃದ್ಧಿ ಕಾಣಲಿದೆ ಎಂದು ಹೇಳಿದ್ದಾರೆಯೇ ಅಖಿಲೇಶ್ ಯಾದವ್?

Published On - 2:09 pm, Fri, 21 January 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು