AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Assembly Elections: ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಕಾಂಗ್ರೆಸ್​ ಪಕ್ಷದ ಸಿಎಂ ಅಭ್ಯರ್ಥಿ? ಸಂಚಲನ ಸೃಷ್ಟಿಸಿದ ಹೇಳಿಕೆ

ಪ್ರಿಯಾಂಕ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಹುಟ್ಟಿಸಿದೆ. ಮುಖ್ಯಮಂತ್ರಿ ಆಗಲು ಪ್ರಿಯಾಂಕ ಗಾಂಧಿ ವಿಧಾನಸಭಾ ಚುನಾವಣೆ ಗೆಲ್ಲಬೇಕು ಎಂದೇನಿಲ್ಲ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

UP Assembly Elections: ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಕಾಂಗ್ರೆಸ್​ ಪಕ್ಷದ ಸಿಎಂ ಅಭ್ಯರ್ಥಿ? ಸಂಚಲನ ಸೃಷ್ಟಿಸಿದ ಹೇಳಿಕೆ
ಪ್ರಿಯಾಂಕಾ ಗಾಂಧಿ
Follow us
TV9 Web
| Updated By: ganapathi bhat

Updated on:Jan 21, 2022 | 2:18 PM

ದೆಹಲಿ: ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಉತ್ತರ ಪ್ರದೇಶ ಚುನಾವಣೆಗೆ (Uttar Pradesh Assembly Elections 2022) ಸಂಬಂಧಿಸಿದಂತೆ ಹೊಸ ಸಂಚಲನದ ಹೇಳಿಕೆಯೊಂದು ಕೇಳಿಬಂದಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಯಾರು (Congress CM Candidate) ಎಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಉತ್ತರ ಪ್ರದೇಶದ ಯುವ ಸಮುದಾಯದ ಮಂದಿಗೆ ಉದ್ಯೋಗ ನೀಡುವ ಕುರಿತಾದ ಪ್ರಣಾಳಿಕೆ ಬಿಡುಗಡೆ ಮಾಡಿದ ಅವರು ಮಾತನಾಡಿದ್ದಾರೆ. ಈ ವೇಳೆ, ಬಿಜೆಪಿ ಯೋಗಿ ಆದಿತ್ಯನಾಥ್ ಹಾಗೂ ಸಮಾಜವಾದಿ ಪಕ್ಷ ಅಖಿಲೇಶ್ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮುಂದಿಟ್ಟಿದೆ. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಹೇಳಿಕೆ ನೀಡಿದ್ದಾರೆ.

‘ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದಲ್ಲಿ ನೀವು ಬೇರೆ ಯಾವುದಾದರೂ ಮುಖವನ್ನು ಕಾಣುತ್ತೀರಾ?’ ಎಂದು ಪ್ರಶ್ನೆ ಮಾಡಿದ್ದಾರೆ. ಆ ಬಗ್ಗೆ ಮತ್ತಷ್ಟು ಪ್ರಶ್ನಿಸಿದಾಗ ‘ನೀವು ನನ್ನ ಮುಖವನ್ನು ನೋಡಬಹುದು? ಕಾಣುವುದಿಲ್ಲವೇ?’ ಎಂದು ಕೇಳಿದ್ದಾರೆ. ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದ ಪ್ರಿಯಾಂಕಾ ಗಾಂಧಿ ಈಗ ಮತ್ತೆ ಸುದ್ದಿಯಲ್ಲಿ ಇದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಲಬ್ಯವಾಗಿಲ್ಲ. ಆದರೆ, ಪ್ರಿಯಾಂಕ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಹುಟ್ಟಿಸಿದೆ. ಮುಖ್ಯಮಂತ್ರಿ ಆಗಲು ಪ್ರಿಯಾಂಕ ಗಾಂಧಿ ವಿಧಾನಸಭಾ ಚುನಾವಣೆ ಗೆಲ್ಲಬೇಕು ಎಂದೇನಿಲ್ಲ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

ಉತ್ತರ ಪ್ರದೇಶದಲ್ಲಿ ಈ ಮೊದಲು ಕೂಡ ಯೋಗಿ ಆದಿತ್ಯನಾಥ್ ಅಥವಾ ಅಖಿಲೇಶ್ ಯಾದವ್ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಈ ಬಾರಿ ಯೋಗಿ ಆದಿತ್ಯನಾಥ್ ಗೋರಖ್​ಪುರ್​ದಿಂದ ಹಾಗೂ ಅಖಿಲೇಶ್ ಯಾದವ್ ಕರ್ಹಾಲ್ ಎಂಬಲ್ಲಿಂದ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.

ಇದನ್ನೂ ಓದಿ: ಹೋಮ್​​ವರ್ಕ್ ಮಾಡಿಸಲು ಮುಂಜಾನೆ 3-4 ಗಂಟೆವರೆಗೆ ಮಕ್ಕಳೊಂದಿಗೆ ಕುಳಿತುಕೊಳ್ಳಬೇಕಾಗಿ ಬರುತ್ತದೆ: ಪ್ರಿಯಾಂಕಾ ಗಾಂಧಿ

ಇದನ್ನೂ ಓದಿ: Fact check ಯೋಗಿ ಸರ್ಕಾರ ಆಯ್ಕೆಯಾದರೆ ಉತ್ತರ ಪ್ರದೇಶ ಸಮೃದ್ಧಿ ಕಾಣಲಿದೆ ಎಂದು ಹೇಳಿದ್ದಾರೆಯೇ ಅಖಿಲೇಶ್ ಯಾದವ್?

Published On - 2:09 pm, Fri, 21 January 22

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ