AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಎಂದ ಪ್ರಿಯಾಂಕಾ ಗಾಂಧಿ; ಉಲ್ಟಾ ಹೊಡೆದಿದ್ದು ಯಾಕೆ?

Priyanka Gandhi: ಸುದ್ದಿಗಾರರು ಉತ್ತರ ಪ್ರದೇಶ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಬಗ್ಗೆ ಕೇಳಿದ್ದಾಗ ‘ನಾನೇ ಸಿಎಂ ಅಭ್ಯರ್ಥಿ’ ಎಂಬ ಅರ್ಥ ಬರುವಂತೆ ಪ್ರಿಯಾಂಕಾ ಗಾಂಧಿ ಹೇಳಿಕೆ ನೀಡಿದ್ದರು. ಅದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿತ್ತು.

ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಎಂದ ಪ್ರಿಯಾಂಕಾ ಗಾಂಧಿ; ಉಲ್ಟಾ ಹೊಡೆದಿದ್ದು ಯಾಕೆ?
ಪ್ರಿಯಾಂಕಾ ಗಾಂಧಿ ವಾದ್ರಾ
TV9 Web
| Edited By: |

Updated on: Jan 22, 2022 | 9:19 AM

Share

ದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ವಿಚಾರವಾಗಿ ಸ್ಫೋಟಕ ಹೇಳಿಕೆ ನೀಡಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ. ತಾವು ಶುಕ್ರವಾರ ನೀಡಿದ ಹೇಳಿಕೆಯು ಉತ್ಪ್ರೇಕ್ಷೆಯ ಹೇಳಿಕೆ ಆಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರು ಉತ್ತರ ಪ್ರದೇಶ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಬಗ್ಗೆ ಕೇಳಿದ್ದಾಗ ‘ನಾನೇ ಸಿಎಂ ಅಭ್ಯರ್ಥಿ’ ಎಂಬ ಅರ್ಥ ಬರುವಂತೆ ಪ್ರಿಯಾಂಕಾ ಗಾಂಧಿ ಹೇಳಿಕೆ ನೀಡಿದ್ದರು. ಅದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿತ್ತು.

ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಉತ್ತರ ಪ್ರದೇಶ ಚುನಾವಣೆಗೆ (Uttar Pradesh Assembly Elections 2022) ಸಂಬಂಧಿಸಿದಂತೆ ಹೊಸ ಸಂಚಲನದ ಹೇಳಿಕೆಯೊಂದು ಕೇಳಿಬಂದಿತ್ತು. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಯಾರು (Congress CM Candidate) ಎಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದರು.

ಉತ್ತರ ಪ್ರದೇಶದ ಯುವ ಸಮುದಾಯದ ಮಂದಿಗೆ ಉದ್ಯೋಗ ನೀಡುವ ಕುರಿತಾದ ಪ್ರಣಾಳಿಕೆ ಬಿಡುಗಡೆ ಮಾಡಿದ ಅವರು ಮಾತನಾಡಿದ್ದರು. ಈ ವೇಳೆ, ಬಿಜೆಪಿ ಯೋಗಿ ಆದಿತ್ಯನಾಥ್ ಹಾಗೂ ಸಮಾಜವಾದಿ ಪಕ್ಷ ಅಖಿಲೇಶ್ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮುಂದಿಟ್ಟಿದೆ. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಹೇಳಿಕೆ ನೀಡಿದ್ದರು.

‘ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದಲ್ಲಿ ನೀವು ಬೇರೆ ಯಾವುದಾದರೂ ಮುಖವನ್ನು ಕಾಣುತ್ತೀರಾ?’ ಎಂದು ಪ್ರಶ್ನೆ ಮಾಡಿದ್ದರು. ಆ ಬಗ್ಗೆ ಮತ್ತಷ್ಟು ಪ್ರಶ್ನಿಸಿದಾಗ ‘ನೀವು ನನ್ನ ಮುಖವನ್ನು ನೋಡಬಹುದು? ಕಾಣುವುದಿಲ್ಲವೇ?’ ಎಂದು ಕೇಳಿದ್ದರು. ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದ ಪ್ರಿಯಾಂಕಾ ಗಾಂಧಿ ಮತ್ತೆ ಸುದ್ದಿ ಮಾಡಿದ್ದರು.

ಪ್ರಿಯಾಂಕಾ ಗಾಂಧಿ ವಾದ್ರಾ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಲಬ್ಯವಾಗಿರಲಿಲ್ಲ. ಆದರೆ, ಪ್ರಿಯಾಂಕ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಹುಟ್ಟಿಸಿತ್ತು. ಮುಖ್ಯಮಂತ್ರಿ ಆಗಲು ಪ್ರಿಯಾಂಕ ಗಾಂಧಿ ವಿಧಾನಸಭಾ ಚುನಾವಣೆ ಗೆಲ್ಲಬೇಕು ಎಂದೇನಿಲ್ಲ ಎಂಬ ಮಾತುಗಳು ಕೂಡ ಕೇಳಿಬಂದಿತ್ತು.

ಇದನ್ನೂ ಓದಿ: UP Assembly Elections: ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಕಾಂಗ್ರೆಸ್​ ಪಕ್ಷದ ಸಿಎಂ ಅಭ್ಯರ್ಥಿ? ಸಂಚಲನ ಸೃಷ್ಟಿಸಿದ ಹೇಳಿಕೆ

ಇದನ್ನೂ ಓದಿ: ಹೋಮ್​​ವರ್ಕ್ ಮಾಡಿಸಲು ಮುಂಜಾನೆ 3-4 ಗಂಟೆವರೆಗೆ ಮಕ್ಕಳೊಂದಿಗೆ ಕುಳಿತುಕೊಳ್ಳಬೇಕಾಗಿ ಬರುತ್ತದೆ: ಪ್ರಿಯಾಂಕಾ ಗಾಂಧಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?