ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ಹೋಳಿ, ದೀಪಾವಳಿಗೆ ಉಚಿತ ಎಲ್​​ಪಿಜಿ ಸಿಲಿಂಡರ್​: ರಾಜನಾಥ್​ ಸಿಂಗ್​ ಘೋಷಣೆ

ಈ ಜನ ಏನು ಬೇಕೋ ಅದನ್ನು ಮಾತನಾಡುತ್ತಿರಲಿ, ವಾಸ್ತವ ನಮಗೆ ಗೊತ್ತಿದೆಯಲ್ಲ ಸಾಕು ಎಂದು ಪ್ರಧಾನಿ ನರೇಂದ್ರ ಮೋದಿ ನನಗೆ ಹೇಳಿದ್ದರು. ಹಾಗಾಗಿ ಒಬ್ಬ ರಕ್ಷಣಾ ಸಚಿವನಾಗಿಯೂ ಕೂಡ ನಾನು ಸುಮ್ಮನಿದ್ದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ಹೋಳಿ, ದೀಪಾವಳಿಗೆ ಉಚಿತ ಎಲ್​​ಪಿಜಿ ಸಿಲಿಂಡರ್​: ರಾಜನಾಥ್​ ಸಿಂಗ್​ ಘೋಷಣೆ
ರಾಜನಾಥ್ ಸಿಂಗ್​
Follow us
| Updated By: Lakshmi Hegde

Updated on:Feb 19, 2022 | 4:55 PM

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ (Uttar Pradesh Assembly Elction)ಮೂರನೇ ಹಂತದ ಮತದಾನಕ್ಕೆ ಇನ್ನೊಂದೇ ದಿನ ಬಾಕಿ ಇದ್ದು, ನಾಳೆ (ಫೆ.20) 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇಂದು ಗೋಂಡಾದ ಕರ್ನಲ್‌ಗಂಜ್‌ನಲ್ಲಿ ಚುನಾವಣಾ ರ್ಯಾಲಿ ನಡೆಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿವರ್ಷವೂ ಹೋಳಿ ಹುಣ್ಣಿಮೆ ಮತ್ತು ದೀಪಾವಳಿ ಹಬ್ಬಗಳಂದು ಉಚಿತವಾಗಿ ಎಲ್​​ಪಿಜಿ ಸಿಲಿಂಡರ್​ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ರಾಜನಾಥ್​ ಸಿಂಗ್​,  ನರೇಂದ್ರ ಮೋದಿಯವರು ಭಾರತದ ಪ್ರಧಾನಮಂತ್ರಿಯಾದ ಮೇಲೆ ಚೀನಾ ಮತ್ತು ಪಾಕಿಸ್ತಾನ ದೇಶಗಳು ಸ್ನೇಹಿತರಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳುತ್ತಿದ್ದಾರೆ. ಆದರೆ ವಾಸ್ತವ ಏನೆಂದರೆ, ರಾಹುಲ್​ ಗಾಂಧಿ ಪ್ರಾಚೀನ ಭಾರತದ ಇತಿಹಾಸ ಓದಿಕೊಂಡಿಲ್ಲ. ಅವರು ಆಧುನಿಕ ಭಾರತದ ಇತಿಹಾಸವನ್ನಾದರೂ ಓದಿಕೊಳ್ಳಬೇಕು ಎಂದು ರಾಜನಾಥ್​ ಸಿಂಗ್ ವಾಗ್ದಾಳಿ ನಡೆಸಿದರು.  ಅಷ್ಟೇ ಅಲ್ಲ, ಪಾಕಿಸ್ತಾನ ಅಕ್ರಮವಾಗಿ ವಶಪಡಿಸಿಕೊಂಡಿದ್ದ ಶಕ್ಸಗಾಮ್​ ಕಣಿವೆಯನ್ನು ಚೀನಾಕ್ಕೆ ಹಸ್ತಾಂತರ ಮಾಡಿದ್ದು, ಜವಾಹರ್​ ಲಾಲ್​ ನೆಹರೂ ಅವರು ಪ್ರಧಾನಿಯಾಗಿದ್ದಾಗ. ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಕಾರಾಕೋರಂ ಹೆದ್ದಾರಿ ನಿರ್ಮಾಣಗೊಂಡಿದ್ದು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದ್ದು ಮನಮೋಹನ್​ ಸಿಂಗ್​ ಪ್ರಧಾನಿಯಾಗಿದ್ದಾಗಲೇ ಹೊರತು ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾದ ಮೇಲೆ ಅಲ್ಲ ಎಂದೂ ರಕ್ಷಣಾ ಸಚಿವರು ವಿವರಿಸಿದ್ದಾರೆ.

ಗಲ್ವಾನ್​ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷದ ಬಗ್ಗೆ ಮಾತನಾಡಿದ ರಾಜನಾಥ್​ ಸಿಂಗ್​, ರಾಹುಲ್ ಗಾಂಧಿ ಸಂಸತ್ತಿನಲ್ಲಿ ಗಲ್ವಾನ್​ ಕಣಿವೆ ಸಂಘರ್ಷದ ಬಗ್ಗೆ ಮಾತನಾಡುವಾಗ, ಭಾರತದ ಅತಿ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ. ಆದರೆ ಚೀನಾದ 3-4 ಸೈನಿಕರಷ್ಟೇ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಆದರೆ ಇದು ನಿಜಕ್ಕೂ ನೋವಿನ ಸಂಗತಿ. ಒಬ್ಬ ರಕ್ಷಣಾ ಸಚಿವನಾಗಿ ನಾನು ಇದಕ್ಕೆ ಯಾವುದೇ ಉತ್ತರ ಕೊಡಲಿಲ್ಲ. ಯಾಕೆಂದರೆ ಈ ಜನ ಏನು ಬೇಕೋ ಅದನ್ನು ಮಾತನಾಡುತ್ತಿರಲಿ, ವಾಸ್ತವ ನಮಗೆ ಗೊತ್ತಿದೆಯಲ್ಲ ಸಾಕು ಎಂದು ಪ್ರಧಾನಿ ನರೇಂದ್ರ ಮೋದಿ ನನಗೆ ಹೇಳಿದ್ದರು. ಕೊನೆಗೆ ಆಸ್ಟ್ರೇಲಿಯಾದ ಮಾಧ್ಯಮವೇ ಒಂದು ತನಿಖಾ ವರದಿ ಪ್ರಕಟಿಸಿದ್ದು, ಗಲ್ವಾನ್​ ಸಂಘರ್ಷದಲ್ಲಿ ಚೀನಾದ 38-50 ಚೀನಾದ ಸೈನಿಕರು ಹತ್ಯೆಯಾಗಿದ್ದನ್ನು ಪ್ರಕಟಿಸಿದೆ ಎಂದು ತಿಳಿಸಿದರು.

ಅಷ್ಟೇ ಅಲ್ಲ, ಈ ಹಿಂದೆ ಭಾರತ ಜಾಗತಿಕ ವೇದಿಕೆಯಲ್ಲಿ ಯಾವುದೇ ಮಾತುಗಳನ್ನಾಡಿದರೂ ಅದನ್ನು ಉಳಿದ ರಾಷ್ಟ್ರಗಳು ಕಿವಿಮೇಲೆ ಹಾಕಿಕೊಳ್ಳುತ್ತಿರಲಿಲ್ಲ. ಆದರೆ ಈಗ ಭಾರತ ಆಡುವ ಮಾತುಗಳನ್ನು ಎಲ್ಲ ರಾಷ್ಟ್ರಗಳೂ ಗಮನವಿಟ್ಟು ಕೇಳುತ್ತವೆ. ನಮ್ಮ ದೇಶ ದುರ್ಬಲವಾಗಿ ಉಳಿದಿಲ್ಲ. ಅತ್ಯಂತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ರಾಜನಾಥ್​ ಸಿಂಗ್​ ಹೇಳಿದರು.

ಇದನ್ನೂ ಓದಿ: ಈ ಭಯೋತ್ಪಾದಕ ಭಗತ್ ಸಿಂಗ್, ಅಂಬೇಡ್ಕರ್ ಕನಸನ್ನು ನನಸಾಗಿಸುತ್ತಿದ್ದಾನೆ; ವಿರೋಧಿಗಳಿಗೆ ಕೇಜ್ರಿವಾಲ್ ತಿರುಗೇಟು

Published On - 4:27 pm, Sat, 19 February 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ