AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ಹೋಳಿ, ದೀಪಾವಳಿಗೆ ಉಚಿತ ಎಲ್​​ಪಿಜಿ ಸಿಲಿಂಡರ್​: ರಾಜನಾಥ್​ ಸಿಂಗ್​ ಘೋಷಣೆ

ಈ ಜನ ಏನು ಬೇಕೋ ಅದನ್ನು ಮಾತನಾಡುತ್ತಿರಲಿ, ವಾಸ್ತವ ನಮಗೆ ಗೊತ್ತಿದೆಯಲ್ಲ ಸಾಕು ಎಂದು ಪ್ರಧಾನಿ ನರೇಂದ್ರ ಮೋದಿ ನನಗೆ ಹೇಳಿದ್ದರು. ಹಾಗಾಗಿ ಒಬ್ಬ ರಕ್ಷಣಾ ಸಚಿವನಾಗಿಯೂ ಕೂಡ ನಾನು ಸುಮ್ಮನಿದ್ದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ಹೋಳಿ, ದೀಪಾವಳಿಗೆ ಉಚಿತ ಎಲ್​​ಪಿಜಿ ಸಿಲಿಂಡರ್​: ರಾಜನಾಥ್​ ಸಿಂಗ್​ ಘೋಷಣೆ
ರಾಜನಾಥ್ ಸಿಂಗ್​
TV9 Web
| Edited By: |

Updated on:Feb 19, 2022 | 4:55 PM

Share

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ (Uttar Pradesh Assembly Elction)ಮೂರನೇ ಹಂತದ ಮತದಾನಕ್ಕೆ ಇನ್ನೊಂದೇ ದಿನ ಬಾಕಿ ಇದ್ದು, ನಾಳೆ (ಫೆ.20) 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇಂದು ಗೋಂಡಾದ ಕರ್ನಲ್‌ಗಂಜ್‌ನಲ್ಲಿ ಚುನಾವಣಾ ರ್ಯಾಲಿ ನಡೆಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿವರ್ಷವೂ ಹೋಳಿ ಹುಣ್ಣಿಮೆ ಮತ್ತು ದೀಪಾವಳಿ ಹಬ್ಬಗಳಂದು ಉಚಿತವಾಗಿ ಎಲ್​​ಪಿಜಿ ಸಿಲಿಂಡರ್​ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ರಾಜನಾಥ್​ ಸಿಂಗ್​,  ನರೇಂದ್ರ ಮೋದಿಯವರು ಭಾರತದ ಪ್ರಧಾನಮಂತ್ರಿಯಾದ ಮೇಲೆ ಚೀನಾ ಮತ್ತು ಪಾಕಿಸ್ತಾನ ದೇಶಗಳು ಸ್ನೇಹಿತರಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳುತ್ತಿದ್ದಾರೆ. ಆದರೆ ವಾಸ್ತವ ಏನೆಂದರೆ, ರಾಹುಲ್​ ಗಾಂಧಿ ಪ್ರಾಚೀನ ಭಾರತದ ಇತಿಹಾಸ ಓದಿಕೊಂಡಿಲ್ಲ. ಅವರು ಆಧುನಿಕ ಭಾರತದ ಇತಿಹಾಸವನ್ನಾದರೂ ಓದಿಕೊಳ್ಳಬೇಕು ಎಂದು ರಾಜನಾಥ್​ ಸಿಂಗ್ ವಾಗ್ದಾಳಿ ನಡೆಸಿದರು.  ಅಷ್ಟೇ ಅಲ್ಲ, ಪಾಕಿಸ್ತಾನ ಅಕ್ರಮವಾಗಿ ವಶಪಡಿಸಿಕೊಂಡಿದ್ದ ಶಕ್ಸಗಾಮ್​ ಕಣಿವೆಯನ್ನು ಚೀನಾಕ್ಕೆ ಹಸ್ತಾಂತರ ಮಾಡಿದ್ದು, ಜವಾಹರ್​ ಲಾಲ್​ ನೆಹರೂ ಅವರು ಪ್ರಧಾನಿಯಾಗಿದ್ದಾಗ. ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಕಾರಾಕೋರಂ ಹೆದ್ದಾರಿ ನಿರ್ಮಾಣಗೊಂಡಿದ್ದು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದ್ದು ಮನಮೋಹನ್​ ಸಿಂಗ್​ ಪ್ರಧಾನಿಯಾಗಿದ್ದಾಗಲೇ ಹೊರತು ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾದ ಮೇಲೆ ಅಲ್ಲ ಎಂದೂ ರಕ್ಷಣಾ ಸಚಿವರು ವಿವರಿಸಿದ್ದಾರೆ.

ಗಲ್ವಾನ್​ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷದ ಬಗ್ಗೆ ಮಾತನಾಡಿದ ರಾಜನಾಥ್​ ಸಿಂಗ್​, ರಾಹುಲ್ ಗಾಂಧಿ ಸಂಸತ್ತಿನಲ್ಲಿ ಗಲ್ವಾನ್​ ಕಣಿವೆ ಸಂಘರ್ಷದ ಬಗ್ಗೆ ಮಾತನಾಡುವಾಗ, ಭಾರತದ ಅತಿ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ. ಆದರೆ ಚೀನಾದ 3-4 ಸೈನಿಕರಷ್ಟೇ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಆದರೆ ಇದು ನಿಜಕ್ಕೂ ನೋವಿನ ಸಂಗತಿ. ಒಬ್ಬ ರಕ್ಷಣಾ ಸಚಿವನಾಗಿ ನಾನು ಇದಕ್ಕೆ ಯಾವುದೇ ಉತ್ತರ ಕೊಡಲಿಲ್ಲ. ಯಾಕೆಂದರೆ ಈ ಜನ ಏನು ಬೇಕೋ ಅದನ್ನು ಮಾತನಾಡುತ್ತಿರಲಿ, ವಾಸ್ತವ ನಮಗೆ ಗೊತ್ತಿದೆಯಲ್ಲ ಸಾಕು ಎಂದು ಪ್ರಧಾನಿ ನರೇಂದ್ರ ಮೋದಿ ನನಗೆ ಹೇಳಿದ್ದರು. ಕೊನೆಗೆ ಆಸ್ಟ್ರೇಲಿಯಾದ ಮಾಧ್ಯಮವೇ ಒಂದು ತನಿಖಾ ವರದಿ ಪ್ರಕಟಿಸಿದ್ದು, ಗಲ್ವಾನ್​ ಸಂಘರ್ಷದಲ್ಲಿ ಚೀನಾದ 38-50 ಚೀನಾದ ಸೈನಿಕರು ಹತ್ಯೆಯಾಗಿದ್ದನ್ನು ಪ್ರಕಟಿಸಿದೆ ಎಂದು ತಿಳಿಸಿದರು.

ಅಷ್ಟೇ ಅಲ್ಲ, ಈ ಹಿಂದೆ ಭಾರತ ಜಾಗತಿಕ ವೇದಿಕೆಯಲ್ಲಿ ಯಾವುದೇ ಮಾತುಗಳನ್ನಾಡಿದರೂ ಅದನ್ನು ಉಳಿದ ರಾಷ್ಟ್ರಗಳು ಕಿವಿಮೇಲೆ ಹಾಕಿಕೊಳ್ಳುತ್ತಿರಲಿಲ್ಲ. ಆದರೆ ಈಗ ಭಾರತ ಆಡುವ ಮಾತುಗಳನ್ನು ಎಲ್ಲ ರಾಷ್ಟ್ರಗಳೂ ಗಮನವಿಟ್ಟು ಕೇಳುತ್ತವೆ. ನಮ್ಮ ದೇಶ ದುರ್ಬಲವಾಗಿ ಉಳಿದಿಲ್ಲ. ಅತ್ಯಂತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ರಾಜನಾಥ್​ ಸಿಂಗ್​ ಹೇಳಿದರು.

ಇದನ್ನೂ ಓದಿ: ಈ ಭಯೋತ್ಪಾದಕ ಭಗತ್ ಸಿಂಗ್, ಅಂಬೇಡ್ಕರ್ ಕನಸನ್ನು ನನಸಾಗಿಸುತ್ತಿದ್ದಾನೆ; ವಿರೋಧಿಗಳಿಗೆ ಕೇಜ್ರಿವಾಲ್ ತಿರುಗೇಟು

Published On - 4:27 pm, Sat, 19 February 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ