AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ಶ್ರೀರಾಮ ದೇಗುಲ ಭಾರತದ ರಾಷ್ಟ್ರ ಮಂದಿರವಾಗಲಿದೆ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​

ಕರ್ಹಾಲ್​​ನಲ್ಲಿ ಸಮಾಜವಾದಿ ಪಕ್ಷ ಖಂಡಿತ ಸೋಲನುಭವಿಸುತ್ತದೆ. ಅದು ಅವರಿಗೂ ಈಗ ಗೊತ್ತಾಗಿದೆ. ತಾವು ಸೋಲುತ್ತೇವೆ ಎಂಬ ಹತಾಶೆಯಿಂದಲೇ ಬಿಜೆಪಿ ಅಭ್ಯರ್ಥಿ ಎಸ್​ಪಿ ಸಿಂಗ್​ ಬಾಘೇಲ್​ ಮೇಲೆ ಹಲ್ಲೆಯನ್ನೂ ನಡೆಸಿದ್ದಾರೆ ಎಂದು ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.

ಅಯೋಧ್ಯೆಯ ಶ್ರೀರಾಮ ದೇಗುಲ ಭಾರತದ ರಾಷ್ಟ್ರ ಮಂದಿರವಾಗಲಿದೆ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
TV9 Web
| Edited By: |

Updated on:Feb 19, 2022 | 2:38 PM

Share

ದೆಹಲಿ: ಉತ್ತರ ಪ್ರದೇಶದಲ್ಲಿ ಫೆ.20ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಕರ್ಹಾಲ್​​ನಲ್ಲಿ (Karhal) ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಎಸ್​.ಪಿ.ಬಾಘೇಲ್​ ಪರ ಪ್ರಚಾರ ನಡೆಸಿದ್ದಾರೆ. ಕರ್ಹಾಲ್​​ನಲ್ಲಿ ನಾಳೆ ಮತದಾನ ನಡೆಯಲಿದ್ದು, ಸಮಾಜವಾದಿ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ ಸ್ಪರ್ಧಿಸಿರುವ ಕ್ಷೇತ್ರ. ಇನ್ನು ಕರ್ಹಾಲ್​ ಕ್ಷೇತ್ರವಿರುವ ಮೇನ್​ಪುರಿ ಜಿಲ್ಲೆ ಸಮಾಜವಾದಿ ಪಕ್ಷದ ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿದೆ. ಹೀಗಾಗಿ ಕರ್ಹಾಲ್​ ಸೇರಿ ಮೇನ್​​ಪುರಿಯಲ್ಲಿರು ನಾಲ್ಕೂ ವಿಧಾನಸಭಾ ಕ್ಷೇತ್ರಗಳೂ ಬಹುಮುಖ್ಯ ಎನ್ನಿಸಿವೆ.

ನಿನ್ನೆ ಕರ್ಹಾಲ್​ನಲ್ಲಿ ಚುನಾವಣಾ ಪ್ರಚಾರ ನಡೆಸಿದ ಸಿಎಂ ಯೋಗಿ ಆದಿತ್ಯನಾಥ್​, ಕರ್ಹಾಲ್​​ನಲ್ಲಿ ಸಮಾಜವಾದಿ ಪಕ್ಷ ಖಂಡಿತ ಸೋಲನುಭವಿಸುತ್ತದೆ. ಅದು ಅವರಿಗೂ ಈಗ ಗೊತ್ತಾಗಿದೆ. ತಾವು ಸೋಲುತ್ತೇವೆ ಎಂಬ ಹತಾಶೆಯಿಂದಲೇ ಬಿಜೆಪಿ ಅಭ್ಯರ್ಥಿ ಎಸ್​ಪಿ ಸಿಂಗ್​ ಬಾಘೇಲ್​ ಮೇಲೆ ಹಲ್ಲೆಯನ್ನೂ ನಡೆಸಿದ್ದಾರೆ. ಇದು ಸಮಾಜವಾದಿ ಪಕ್ಷದವರ ಹೇಡಿತನಕ್ಕೆ ಒಂದು ಉದಾಹರಣೆ ಎಂದು ಹೇಳಿದರು. ಹಾಗೇ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಆಗುತ್ತಿರುವ ಬಗ್ಗೆ ಮಾತನಾಡಿದ ಸಿಎಂ ಯೋಗಿ, ಅಯೋಧ್ಯೆಯ ಶ್ರೀರಾಮ ದೇಗುಲ ಭಾರತದ ರಾಷ್ಟ್ರೀಯ ದೇವಸ್ಥಾನವಾಗಲಿದೆ. 2023ರ ಹೊತ್ತಿಗೆ ಭವ್ಯ ಮಂದಿರ ನಿರ್ಮಾಣ ಆಗಲಿದ್ದು, ಸಾರ್ವಜನಿಕರಿಗೆ ದರ್ಶನಕ್ಕೆ ಮುಕ್ತವಾಗುತ್ತದೆ ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಆಡಳಿತ ಹಿಡಿಯಲು ಬಿಜೆಪಿ ಎಲ್ಲ ಸಿದ್ಧತೆಗಳನ್ನೂ ನಡೆಸಿದೆ. ವಿಧಾನಸಭೆ ಚುನಾವಣೆ ತಿಂಗಳು ಇರುವಾಗ, ಇಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಅಯೋಧ್ಯಾ ರಾಮಮಂದಿರವಷ್ಟೇ ಅಲ್ಲ, ಕಾಶಿ ವಿಶ್ವನಾಥ ಕಾರಿಡಾರ್​, ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿ ಹತ್ತು-ಹಲವು ಅಭಿವೃದ್ಧಿ ಕಾರ್ಯಗಳೊಂದಿಗೆ ಬಿಜೆಪಿಗರು ಜನರ ಮತ ಕೇಳುತ್ತಿದ್ದಾರೆ. ಇತ್ತ ಸಮಾಜವಾದಿ ಪಕ್ಷ ಕೂಡ ಈ ಬಾರಿ ಹೇಗಾದರೂ ಉತ್ತರ ಪ್ರದೇಶದ ಆಡಳಿತ ಹಿಡಿಯಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ. ಈಗಾಗಲೇ 2 ಹಂತದ ಮತದಾನ ಮುಕ್ತಾಯಗೊಂಡಿದ್ದು, ಫೆ.20ರಂದು ಮೂರನೇ ಹಂತದಲ್ಲಿ ಮತದಾನ ಇದೆ. ಅಂದು 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳ ಮತದಾರರು ಮತ ಚಲಾಯಿಸಲಿದ್ದಾರೆ. ಅದಾದ ಬಳಿಕ ಫೆ.23ರಂದು ನಾಲ್ಕನೇ, ಫೆ.27ಕ್ಕೆ 5, ಮಾರ್ಚ್​ 3ರಂದು ಆರು ಮತ್ತು ಮಾರ್ಚ್​ 7ರಂದು ಏಳನೇ ಹಂತದ ಮತದಾನ ನಡೆಯಲಿದ್ದು, ಮಾರ್ಚ್​ 10ಕ್ಕೆ ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: 1000 ಕೋಟಿ ಬೆಳೆ ನಷ್ಟಕ್ಕೆ ಸರ್ಕಾರದಿಂದ ಬಂದಿದ್ದು ಬರೀ 36 ಕೋಟಿ ಪರಿಹಾರ; ಕಂಗಾಲಾದ ಮೆಣಸಿನಕಾಯಿ ಬೆಳೆಗಾರರು 

Published On - 2:21 pm, Sat, 19 February 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್