AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ಹಾಲ್​ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಅಖಿಲೇಶ್ ಯಾದವ್​; ಸಮಾಜವಾದಿ ಪಕ್ಷಕ್ಕೆ ಇನ್ನೊಂದು ಅವಕಾಶ ಕೊಡುವಂತೆ ಮನವಿ

ನಾನು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನನ್ನ ಸ್ಪರ್ಧೆಯ ಬಗ್ಗೆ ಜನರೂ ಕೂಡ ಉತ್ಸುಕರಾಗಿದ್ದಾರೆ. ಯಾಕೆಂದರೆ ಅವರು ರಾಜ್ಯದಲ್ಲಿ ಬದಲಾವಣೆ ತರಲು ಕಾಯುತ್ತಿದ್ದಾರೆ ಎಂದು ಅಖಿಲೇಶ್ ಯಾದವ್ ಹೇಳಿದರು.

ಕರ್ಹಾಲ್​ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಅಖಿಲೇಶ್ ಯಾದವ್​; ಸಮಾಜವಾದಿ ಪಕ್ಷಕ್ಕೆ ಇನ್ನೊಂದು ಅವಕಾಶ ಕೊಡುವಂತೆ ಮನವಿ
ನಾಮಪತ್ರ ಸಲ್ಲಿಸಲು ತೆರಳಿದ ಅಖಿಲೇಶ್​ ಯಾದವ್​
TV9 Web
| Edited By: |

Updated on: Jan 31, 2022 | 3:53 PM

Share

ಲಖನೌ: ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭೆ ಚುನಾವಣೆ (Uttar Pradesh Assembly Election) ದೇಶದ ಮುಂದಿನ ಶತಮಾನವನ್ನು ನಿರ್ಧರಿಸುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್​ (Akhilesh Yadav) ಹೇಳಿದರು. ಹಾಗೇ, ದೇಶದಲ್ಲಿರುವ ನಕಾರಾತ್ಮಕ ರಾಜಕೀಯವನ್ನು ತೊಡೆದುಹಾಕುವಂತೆ ಜನರಿಗೆ ಕರೆ ನೀಡಿದರು.  ನಂತರ ಕರ್ಹಾಲ್​ ವಿಧಾನಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಈ ವೇಳೆ ಅಪಾರ ಬೆಂಬಲಿಗರು ಸ್ಥಳದಲ್ಲಿದ್ದು, ಅಖಿಲೇಶ್​ ಯಾದವ್​ ಪರ ಘೋಷಣೆ ಕೂಗಿದರು. ಇಂದು ಅಖಿಲೇಶ್​ ಯಾದವ್​ ಸೈಫಾಯ್​ ಮನೆಯಿಂದ ನಾಮಪತ್ರ ಸಲ್ಲಿಸಲು ಸಮಾಜವಾದಿ ಪಕ್ಷದ ರಥ (ಅಖಿಲೇಶ್​ ಯಾದವ್ ಸೈಕಲ್​ ಮೇಲೆ ಕುಳಿತ ಫೋಟೋ ಇರುವ ಬಸ್​)ದ​ಲ್ಲಿ ತೆರಳಿದರು. ಅವರು ಕರ್ಹಾಲ್​​ ತಲುಪುವಷ್ಟರಲ್ಲಿ ಅಲ್ಲಿ ಜನಸಂದಣಿ ಜಾಸ್ತಿಯಾಯಿತು. ಅಖಿಲೇಶ್​ ಬೆಂಬಲಿಗರನ್ನು ನಿಯಂತ್ರಿಸಲು ಸ್ಥಳೀಯ ಜಿಲ್ಲಾಡಳಿತ ಹರಸಾಹಸ ಪಡುವಂತಾಯ್ತು. ಅದಕ್ಕಾಗಿ  ಬ್ಯಾರಿಕೇಡ್​ಗಳನ್ನು ಕೂಡ ಹಾಕಲಾಯಿತು. 

ನಾಮಪತ್ರ ಸಲ್ಲಿಸಿದ ಬಳಿಕ ಟ್ವೀಟ್ ಮಾಡಿದ ಅಖಿಲೇಶ್ ಯಾದವ್, ನನ್ನ ನಾಮಪತ್ರ ಸಲ್ಲಿಕೆ ಒಂದು ಮಿಷನ್​ ಎಂದು ಹೇಳಿದ್ದಾರೆ. ನಾನು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನನ್ನ ಸ್ಪರ್ಧೆಯ ಬಗ್ಗೆ ಜನರೂ ಕೂಡ ಉತ್ಸುಕರಾಗಿದ್ದಾರೆ. ಯಾಕೆಂದರೆ ಅವರು ರಾಜ್ಯದಲ್ಲಿ ಬದಲಾವಣೆ ತರಲು ಕಾಯುತ್ತಿದ್ದಾರೆ ಎಂದು ಹೇಳಿದರು. ಹಾಗೇ, ತಾವು ಇಟಾವಾದಲ್ಲಿರುವ ಸೈಫಾಯ್​ ಮನೆಯಿಂದ ನಾಮಪತ್ರ ಸಲ್ಲಿಸಲು ಬಸ್​​ನಲ್ಲಿ ಹೋಗುತ್ತಿರುವ ಫೋಟೋವನ್ನೂ ಶೇರ್​ ಮಾಡಿಕೊಂಡಿದ್ದಾರೆ.

ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಒಟ್ಟು 7ಹಂತದಲ್ಲಿ ನಡೆಯಲಿದ್ದು, ಅದರಲ್ಲಿ ಕರ್ಹಾಲ್​ನಲ್ಲಿ ಫೆ.20ಕ್ಕೆ ಅಂದರೆ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಿರುವ ಅಖಿಲೇಶ್ ಯಾದವ್​ ಸಿಕ್ಕಾಪಟೆ ಉತ್ಸಾಹದಲ್ಲಿದ್ದಾರೆ. ಸಕಾರಾತ್ಮಕ ರಾಜಕೀಯ ದೇಶವನ್ನು ಮುನ್ನಡೆಸುತ್ತದೆ. ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷಕ್ಕೆ ಒಂದು ಅವಕಾಶ ಕೊಡಿ. ಕೇವಲ ನನ್ನ ಕ್ಷೇತ್ರ ಕರ್ಹಾಲ್​​ನಲ್ಲಿ ಅಷ್ಟೇ ಅಲ್ಲ, ಪ್ರತಿ ಕ್ಷೇತ್ರದಲ್ಲೂ ಸಮಾಜವಾದಿ ಪಕ್ಷವನ್ನು ಗೆಲ್ಲಿಸಿ. ಉತ್ತರಪ್ರದೇಶ ರಾಜ್ಯವನ್ನು ನಮ್ಮ ಪಕ್ಷ ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯುತ್ತದೆ ಎಂದು ಹೇಳಿದರು.

ಕರ್ಹಾಲ್​ ವಿಧಾನಸಭೆ ಕ್ಷೇತ್ರದಲ್ಲಿ 1993ರಿಂದಲೂ ಸಮಾಜವಾದಿ ಪಕ್ಷದ ಹಿಡಿತದಲ್ಲೇ ಇದೆ. ಆದರೆ 2002ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸೋಬರನ್​ ಸಿಂಗ್​ ಇಲ್ಲಿ ಗೆಲುವು ಸಾಧಿಸಿದ್ದರು. ಆದರೆ ನಂತರ ಅವರೂ ಕೂಡ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ನಂತರ ಅಲ್ಲಿ ಮೂರು ಅವಧಿಗೆ ಗೆದ್ದಿದ್ದಾರೆ. ಕರ್ಹಾಲ್​ನಲ್ಲಿ ಒಟ್ಟು 3.7 ಲಕ್ಷ ಮತದಾರರು ಇದ್ದಾರೆ. ಅದರಲ್ಲೂ ಶೇ.37ರಷ್ಟು ಅಂದರೆ 1.4 ಲಕ್ಷ ಮಂದಿ ಯಾದವ ಸಮುದಾಯಕ್ಕೆ ಸೇರಿದವರೇ ಆಗಿದ್ದಾರೆ.

ಇದನ್ನೂ ಓದಿ: ಎಲ್​ಆರ್ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಹೆಚ್​ಡಿ ಕುಮಾರಸ್ವಾಮಿ ಗರಂ; ಪಕ್ಷದಿಂದ ಹೊರಹಾಕಲು ಸೂಚನೆ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ