AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP polls ರಾಮಾಯಣದಲ್ಲಿ ಲಂಕೇಶ್‌ನಂತೆ ಸಮಾಜವಾದಿ ಪಕ್ಷ ದಂಗೇಶ್: ಯೋಗಿ ಆದಿತ್ಯನಾಥ

“ಸಮಾಜವಾದಿ ಪಕ್ಷವು ಮಾಫಿಯಾಗಳು ಮತ್ತು ಭಯೋತ್ಪಾದಕರನ್ನು ರಕ್ಷಿಸಿತು. ಈಗ ಉತ್ತರ ಪ್ರದೇಶದಲ್ಲಿ ಗಲಭೆಗಳು ಮತ್ತು ಕರ್ಫ್ಯೂಗಳಿಲ್ಲ. ಅವರು (ಹಿಂದಿನ ಸರ್ಕಾರಗಳು) ಕರ್ಫ್ಯೂಗಳನ್ನು ವಿಧಿಸಿದರು. ಆದರೆ ನಾವು ಕನ್ವರ್ ಯಾತ್ರೆಯನ್ನು ಮಾಡಿದೆವು

UP polls ರಾಮಾಯಣದಲ್ಲಿ ಲಂಕೇಶ್‌ನಂತೆ ಸಮಾಜವಾದಿ ಪಕ್ಷ ದಂಗೇಶ್: ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Feb 22, 2022 | 6:09 PM

Share

ಲಖನೌ: ಉತ್ತರಪ್ರದೇಶದ (Uttar Pradesh) ಬಹ್ರೈಚ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಅಖಿಲೇಶ್ ಯಾದವ್ (Akhilesh Yadav) ನೇತೃತ್ವದ ಸಮಾಜವಾದಿ ಪಕ್ಷದ ವಿರುದ್ಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath)ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಸಮಾಜವಾದಿ ಪಕ್ಷವನ್ನು ‘ದಂಗೇಶ್’ (ಗಲಭೆ ನಡೆಸುವವರು) ಎಂದು ಆದಿತ್ಯನಾಥ ಕರೆದಿದ್ದಾರೆ.“ಸಮಾಜವಾದಿ ಪಕ್ಷವು ಮಾಫಿಯಾಗಳು ಮತ್ತು ಭಯೋತ್ಪಾದಕರನ್ನು ರಕ್ಷಿಸಿತು. ಈಗ ಉತ್ತರ ಪ್ರದೇಶದಲ್ಲಿ ಗಲಭೆಗಳು ಮತ್ತು ಕರ್ಫ್ಯೂಗಳಿಲ್ಲ. ಅವರು (ಹಿಂದಿನ ಸರ್ಕಾರಗಳು) ಕರ್ಫ್ಯೂಗಳನ್ನು ವಿಧಿಸಿದರು. ಆದರೆ ನಾವು ಕನ್ವರ್ ಯಾತ್ರೆಯನ್ನು ಮಾಡಿದೆವು. ರಾಮಾಯಣದಲ್ಲಿ ‘ಲಂಕೇಶ್’ ಅಂತ ನೀವು ಕೇಳಿರಬೇಕು. ಅದೇ ರೀತಿ ಸಮಾಜವಾದಿ ಪಕ್ಷವನ್ನು ದಂಗೇಶ್ ಎಂದು ಕರೆಯಬೇಕು” ಎಂದು ಆದಿತ್ಯನಾಥ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.ಅಹಮದಾಬಾದ್ ನ್ಯಾಯಾಲಯವು (2008) ಸರಣಿ ಸ್ಫೋಟ ಪ್ರಕರಣದಲ್ಲಿ 38 ಭಯೋತ್ಪಾದಕರಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಿತು. ತಪ್ಪಿತಸ್ಥರಿಗೆ ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆಯನ್ನು ನೀಡಲಾಯಿತು. ಅವರಲ್ಲಿ ಉತ್ತರ ಪ್ರದೇಶದ ಕೆಲವು ಭಯೋತ್ಪಾದಕರೂ ಸೇರಿದ್ದಾರೆ. ಮತ್ತು ಅವರಲ್ಲಿ ಒಬ್ಬರ ಕುಟುಂಬವು ಸಮಾಜವಾದಿ ಪಕ್ಷದ ಮುಖ್ಯಸ್ಥರೊಂದಿಗೆ ಪಕ್ಷಕ್ಕೆ ಮತ ಕೇಳುತ್ತಿರುವುದು ಕಂಡುಬಂದಿದೆ ಎಂದು ಯುಪಿ ಸಿಎಂ ಹೇಳಿದ್ದಾರೆ. ಸಮಾಜವಾದಿ ಪಕ್ಷ ಭಯೋತ್ಪಾದಕರು ಮತ್ತು ದರೋಡೆಕೋರರನ್ನು ರಕ್ಷಿಸುತ್ತಿದೆ ಎಂದು ಯೋಗಿ ಆದಿತ್ಯನಾಥ ಆರೋಪಿಸುವುದು ಇದೇ ಮೊದಲಲ್ಲ.

ಅಹಮದಾಬಾದ್ ಸ್ಫೋಟ ಪ್ರಕರಣದಲ್ಲಿ 38 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ನಂತರ ಯುಪಿ ಮುಖ್ಯಮಂತ್ರಿಯ ದಾಳಿಗಳು ತೀಕ್ಷ್ಣವಾಗಿವೆ. ಕೆಲವು ದಿನಗಳ ಹಿಂದೆ ಪಿಲಿಭಿತ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ, ಯೋಗಿ ಆದಿತ್ಯನಾಥ್ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥರನ್ನು 2008 ರ ಅಹಮದಾಬಾದ್ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳಲ್ಲಿ ಒಬ್ಬರ ಜತೆ ನಂಟು ಇದೆ ಎಂದು ಆರೋಪಿಸಿದ್ದರು.

ಅಹಮದಾಬಾದ್ ನ್ಯಾಯಾಲಯವು (2008) ಸರಣಿ ಸ್ಫೋಟ ಪ್ರಕರಣದಲ್ಲಿ 38 ಭಯೋತ್ಪಾದಕರಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಿತು. ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆಯನ್ನು ನೀಡಲಾಯಿತು. ಅವರಲ್ಲಿ ಉತ್ತರ ಪ್ರದೇಶದ ಕೆಲವು ಭಯೋತ್ಪಾದಕರೂ ಸೇರಿದ್ದಾರೆ. ಮತ್ತು ಅವರಲ್ಲಿ ಒಬ್ಬರ ಕುಟುಂಬವು ಸಮಾಜವಾದಿ ಪಕ್ಷದ  ಮುಖ್ಯಸ್ಥರೊಂದಿಗೆ ಪಕ್ಷಕ್ಕೆ ಮತ ಕೇಳುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶ ತನ್ನ 403 ಸದಸ್ಯರ ವಿಧಾನಸಭೆಯನ್ನು ಆಯ್ಕೆ ಮಾಡಲು ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮೊದಲ ಮೂರು ಹಂತಗಳು ಫೆಬ್ರವರಿ 10, 14 ಮತ್ತು 20 ರಂದು ನಡೆದವು. ನಾಲ್ಕನೇ ಹಂತವು ಬುಧವಾರ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: Samantha: ಕೀಳು ಭಾಷೆಯಲ್ಲಿ ಸಮಂತಾಗೆ ಪ್ರಶ್ನಿಸಿದ ಅಭಿಮಾನಿ; ನಟಿಯ ಉತ್ತರ ಏನಿತ್ತು?

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ