AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP polls ರಾಮಾಯಣದಲ್ಲಿ ಲಂಕೇಶ್‌ನಂತೆ ಸಮಾಜವಾದಿ ಪಕ್ಷ ದಂಗೇಶ್: ಯೋಗಿ ಆದಿತ್ಯನಾಥ

“ಸಮಾಜವಾದಿ ಪಕ್ಷವು ಮಾಫಿಯಾಗಳು ಮತ್ತು ಭಯೋತ್ಪಾದಕರನ್ನು ರಕ್ಷಿಸಿತು. ಈಗ ಉತ್ತರ ಪ್ರದೇಶದಲ್ಲಿ ಗಲಭೆಗಳು ಮತ್ತು ಕರ್ಫ್ಯೂಗಳಿಲ್ಲ. ಅವರು (ಹಿಂದಿನ ಸರ್ಕಾರಗಳು) ಕರ್ಫ್ಯೂಗಳನ್ನು ವಿಧಿಸಿದರು. ಆದರೆ ನಾವು ಕನ್ವರ್ ಯಾತ್ರೆಯನ್ನು ಮಾಡಿದೆವು

UP polls ರಾಮಾಯಣದಲ್ಲಿ ಲಂಕೇಶ್‌ನಂತೆ ಸಮಾಜವಾದಿ ಪಕ್ಷ ದಂಗೇಶ್: ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ
TV9 Web
| Edited By: |

Updated on: Feb 22, 2022 | 6:09 PM

Share

ಲಖನೌ: ಉತ್ತರಪ್ರದೇಶದ (Uttar Pradesh) ಬಹ್ರೈಚ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಅಖಿಲೇಶ್ ಯಾದವ್ (Akhilesh Yadav) ನೇತೃತ್ವದ ಸಮಾಜವಾದಿ ಪಕ್ಷದ ವಿರುದ್ಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath)ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಸಮಾಜವಾದಿ ಪಕ್ಷವನ್ನು ‘ದಂಗೇಶ್’ (ಗಲಭೆ ನಡೆಸುವವರು) ಎಂದು ಆದಿತ್ಯನಾಥ ಕರೆದಿದ್ದಾರೆ.“ಸಮಾಜವಾದಿ ಪಕ್ಷವು ಮಾಫಿಯಾಗಳು ಮತ್ತು ಭಯೋತ್ಪಾದಕರನ್ನು ರಕ್ಷಿಸಿತು. ಈಗ ಉತ್ತರ ಪ್ರದೇಶದಲ್ಲಿ ಗಲಭೆಗಳು ಮತ್ತು ಕರ್ಫ್ಯೂಗಳಿಲ್ಲ. ಅವರು (ಹಿಂದಿನ ಸರ್ಕಾರಗಳು) ಕರ್ಫ್ಯೂಗಳನ್ನು ವಿಧಿಸಿದರು. ಆದರೆ ನಾವು ಕನ್ವರ್ ಯಾತ್ರೆಯನ್ನು ಮಾಡಿದೆವು. ರಾಮಾಯಣದಲ್ಲಿ ‘ಲಂಕೇಶ್’ ಅಂತ ನೀವು ಕೇಳಿರಬೇಕು. ಅದೇ ರೀತಿ ಸಮಾಜವಾದಿ ಪಕ್ಷವನ್ನು ದಂಗೇಶ್ ಎಂದು ಕರೆಯಬೇಕು” ಎಂದು ಆದಿತ್ಯನಾಥ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.ಅಹಮದಾಬಾದ್ ನ್ಯಾಯಾಲಯವು (2008) ಸರಣಿ ಸ್ಫೋಟ ಪ್ರಕರಣದಲ್ಲಿ 38 ಭಯೋತ್ಪಾದಕರಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಿತು. ತಪ್ಪಿತಸ್ಥರಿಗೆ ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆಯನ್ನು ನೀಡಲಾಯಿತು. ಅವರಲ್ಲಿ ಉತ್ತರ ಪ್ರದೇಶದ ಕೆಲವು ಭಯೋತ್ಪಾದಕರೂ ಸೇರಿದ್ದಾರೆ. ಮತ್ತು ಅವರಲ್ಲಿ ಒಬ್ಬರ ಕುಟುಂಬವು ಸಮಾಜವಾದಿ ಪಕ್ಷದ ಮುಖ್ಯಸ್ಥರೊಂದಿಗೆ ಪಕ್ಷಕ್ಕೆ ಮತ ಕೇಳುತ್ತಿರುವುದು ಕಂಡುಬಂದಿದೆ ಎಂದು ಯುಪಿ ಸಿಎಂ ಹೇಳಿದ್ದಾರೆ. ಸಮಾಜವಾದಿ ಪಕ್ಷ ಭಯೋತ್ಪಾದಕರು ಮತ್ತು ದರೋಡೆಕೋರರನ್ನು ರಕ್ಷಿಸುತ್ತಿದೆ ಎಂದು ಯೋಗಿ ಆದಿತ್ಯನಾಥ ಆರೋಪಿಸುವುದು ಇದೇ ಮೊದಲಲ್ಲ.

ಅಹಮದಾಬಾದ್ ಸ್ಫೋಟ ಪ್ರಕರಣದಲ್ಲಿ 38 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ನಂತರ ಯುಪಿ ಮುಖ್ಯಮಂತ್ರಿಯ ದಾಳಿಗಳು ತೀಕ್ಷ್ಣವಾಗಿವೆ. ಕೆಲವು ದಿನಗಳ ಹಿಂದೆ ಪಿಲಿಭಿತ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ, ಯೋಗಿ ಆದಿತ್ಯನಾಥ್ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥರನ್ನು 2008 ರ ಅಹಮದಾಬಾದ್ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳಲ್ಲಿ ಒಬ್ಬರ ಜತೆ ನಂಟು ಇದೆ ಎಂದು ಆರೋಪಿಸಿದ್ದರು.

ಅಹಮದಾಬಾದ್ ನ್ಯಾಯಾಲಯವು (2008) ಸರಣಿ ಸ್ಫೋಟ ಪ್ರಕರಣದಲ್ಲಿ 38 ಭಯೋತ್ಪಾದಕರಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಿತು. ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆಯನ್ನು ನೀಡಲಾಯಿತು. ಅವರಲ್ಲಿ ಉತ್ತರ ಪ್ರದೇಶದ ಕೆಲವು ಭಯೋತ್ಪಾದಕರೂ ಸೇರಿದ್ದಾರೆ. ಮತ್ತು ಅವರಲ್ಲಿ ಒಬ್ಬರ ಕುಟುಂಬವು ಸಮಾಜವಾದಿ ಪಕ್ಷದ  ಮುಖ್ಯಸ್ಥರೊಂದಿಗೆ ಪಕ್ಷಕ್ಕೆ ಮತ ಕೇಳುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶ ತನ್ನ 403 ಸದಸ್ಯರ ವಿಧಾನಸಭೆಯನ್ನು ಆಯ್ಕೆ ಮಾಡಲು ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮೊದಲ ಮೂರು ಹಂತಗಳು ಫೆಬ್ರವರಿ 10, 14 ಮತ್ತು 20 ರಂದು ನಡೆದವು. ನಾಲ್ಕನೇ ಹಂತವು ಬುಧವಾರ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: Samantha: ಕೀಳು ಭಾಷೆಯಲ್ಲಿ ಸಮಂತಾಗೆ ಪ್ರಶ್ನಿಸಿದ ಅಭಿಮಾನಿ; ನಟಿಯ ಉತ್ತರ ಏನಿತ್ತು?

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು