Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Elections ಸ್ವಾಮಿ ಪ್ರಸಾದ್ ಮೌರ್ಯ, ಧರಂ ಸಿಂಗ್ ಸೈನಿ ಜತೆ 6 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

Samajwadi Party ಬಿಜೆಪಿಯ ವಿಕೆಟ್‌ಗಳು ಒಂದರ ಹಿಂದೆ ಒಂದರಂತೆ ಬೀಳುತ್ತಿವೆ, ಆದರೂ ನಮ್ಮ ಸಿಎಂಗೆ ಕ್ರಿಕೆಟ್ ಆಡುವುದು ಗೊತ್ತಿಲ್ಲ. ತಾವು ಹೋದಲ್ಲೆಲ್ಲಾ  ಸರ್ಕಾರ ರಚನೆಯಾಗುತ್ತದೆ  ಎಂದು ಸ್ವಾಮಿ ಪ್ರಸಾದ್ ಮೌರ್ಯ ಅವರು  ಹೇಳಿದಂತೆ, ಈ ಬಾರಿಯೂ ತಮ್ಮೊಂದಿಗೆ ಅಪಾರ ಸಂಖ್ಯೆಯ ನಾಯಕರನ್ನು ಕರೆತಂದರು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

Uttar Pradesh Elections ಸ್ವಾಮಿ ಪ್ರಸಾದ್ ಮೌರ್ಯ, ಧರಂ ಸಿಂಗ್ ಸೈನಿ ಜತೆ 6 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ
ಬಿಜೆಪಿ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರಿದ ಶಾಸಕರು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 14, 2022 | 4:51 PM

ಲಖನೌ: ಈ ವಾರದ ಆರಂಭದಲ್ಲಿ ಬಿಜೆಪಿ ತೊರೆದ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya) , ಧರಂ ಸಿಂಗ್ ಸೈನಿ (Dharam Singh Saini) ಮತ್ತು ಇತರ ಐದು ಶಾಸಕರನ್ನು ಸಮಾಜವಾದಿ ಪಕ್ಷವು ಶುಕ್ರವಾರ ಪಕ್ಷಕ್ಕೆ ಸ್ವಾಗತಿಸಿದೆ. ಬಿಜೆಪಿಯಿಂದ ನಾಯಕರು ಒಬ್ಬರ ಹಿಂದೆ ಒಬ್ಬರು ರಾಜೀನಾಮೆ ನೀಡುತ್ತಿದ್ದು ಸಮಾಜವಾದಿ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav), “ವಿಕೆಟ್ಸ್  ಗಿರ್ ರಹೇ ಹೈ (ವಿಕೆಟ್‌ಗಳು ಬೀಳುತ್ತಿವೆ)” ಎಂದು ಹೇಳಿದರು. ಭಗವತಿ ಸಾಗರ್ (ಕಾನ್ಪುರದ ಬಿಲ್ಹೌರ್), ರೋಷನ್‌ಲಾಲ್ ವರ್ಮಾ (ಶಹಜಹಾನ್‌ಪುರದ ತಿಲ್ಹಾರ್), ವಿನಯ್ ಶಕ್ಯಾ (ಔರೈಯಾದಲ್ಲಿ ಬಿಧುನಾ), ಬ್ರಿಜೇಶ್ ಪ್ರಜಾಪತಿ (ಬಹ್ರೈಚ್‌ನಲ್ಲಿ ತಿಂದವಾರಿ) ಮತ್ತು ಮುಖೇಶ್ ವರ್ಮಾ (ಫಿರೋಜಾಬಾದ್‌ನ ಶಿಕೋಹಾಬಾದ್) ಎಸ್‌ಪಿಗೆ ಸೇರ್ಪಡೆಯಾದ ಐವರು ಬಿಜೆಪಿ ಶಾಸಕರು. ಅಪ್ನಾ ದಳ (ಸೋನೆಲಾಲ್) ಶಾಸಕ ಅಮರ್ ಸಿಂಗ್ ಚೌಧರಿ ಕೂಡ ಎಸ್‌ಪಿಗೆ ಸೇರ್ಪಡೆಗೊಂಡರು. ಉತ್ತರ ಪ್ರದೇಶದ ಚುನಾವಣೆಯ ಮುಂಬರುವ ಹಂತ 1 ಕ್ಕೆ ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ. 58 ವಿಧಾನಸಭಾ ಕ್ಷೇತ್ರಗಳಿಗೆ ನಾಮನಿರ್ದೇಶನ ಪ್ರಕ್ರಿಯೆಯು ಅಧಿಸೂಚನೆ ಹೊರಡಿಸುವುದರೊಂದಿಗೆ ಪ್ರಾರಂಭವಾಗುತ್ತದೆ.

ಫೆಬ್ರವರಿ 14 ರಂದು ಪಂಜಾಬ್, ಉತ್ತರಾಖಂಡ ಮತ್ತು ಗೋವಾ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ 403 ಶಾಸಕರನ್ನು ಆಯ್ಕೆ ಮಾಡಲು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.

ಬಿಜೆಪಿಯ ವಿಕೆಟ್‌ಗಳು ಒಂದರ ಹಿಂದೆ ಒಂದರಂತೆ ಬೀಳುತ್ತಿವೆ, ಆದರೂ ನಮ್ಮ ಸಿಎಂಗೆ ಕ್ರಿಕೆಟ್ ಆಡುವುದು ಗೊತ್ತಿಲ್ಲ. ತಾವು ಹೋದಲ್ಲೆಲ್ಲಾ  ಸರ್ಕಾರ ರಚನೆಯಾಗುತ್ತದೆ  ಎಂದು ಸ್ವಾಮಿ ಪ್ರಸಾದ್ ಮೌರ್ಯ ಅವರು  ಹೇಳಿದಂತೆ, ಈ ಬಾರಿಯೂ ತಮ್ಮೊಂದಿಗೆ ಅಪಾರ ಸಂಖ್ಯೆಯ ನಾಯಕರನ್ನು ಕರೆತಂದರು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಡಿಜಿಟಲ್ ಇಂಡಿಯಾ ದೋಷವನ್ನು ಯಾರೂ ಮರೆಯಲು ಸಾಧ್ಯವಿಲ್ಲ. ರೈಡ್ ಬೇರೆಡೆ ನಡೆಯಬೇಕಿತ್ತು ಆದರೆ ಅವರ ಮನೆಯಲ್ಲಿಯೇ ಕೊನೆಗೊಂಡಿದೆ. ನಾವು ವಿಧಾನಸಭೆ ಚುನಾವಣೆಗಾಗಿ ಕಾಯುತ್ತಿದ್ದೆವು. ಸಮಾಜವಾದಿ ಮತ್ತು ಅಂಬೇಡ್ಕರ್‌ವಾದಿ ಒಗ್ಗೂಡಿರುವುದರಿಂದ ಸೈಕಲ್ ತುಂಬಾ ಪ್ರಬಲವಾಗಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ  ಅಖಿಲೇಶ್.

ಕಳೆದ ಐದು ವರ್ಷಗಳಲ್ಲಿ ಒಬಿಸಿಗಳು, ದಲಿತರು ಶೋಷಣೆಗೆ ಒಳಗಾಗಿದ್ದಾರೆ – ಧರಂ ಸಿಂಗ್ ಸೈನಿ 

“ಕಳೆದ 5 ವರ್ಷಗಳಲ್ಲಿ ರಾಜಕೀಯ, ಆರ್ಥಿಕತೆ, ಉದ್ಯೋಗ ಮತ್ತು ಮೀಸಲಾತಿ ಕ್ಷೇತ್ರದಲ್ಲಿ ಒಬಿಸಿಗಳು ಮತ್ತು ದಲಿತರು ಸಂಪೂರ್ಣವಾಗಿ ಶೋಷಣೆಗೆ ಒಳಗಾಗಿದ್ದಾರೆ, ಈ ಹಿನ್ನೆಲೆಯಲ್ಲಿ ನಾವು ಹಿಂದುಳಿದ, ದಲಿತ ಜನರು ಮಕರ ಸಂಕ್ರಾಂತಿಯ ಸಮಯದಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿದ್ದೇವೆ ಎಂದು ಧರಂ ಸಿಂಗ್ ಸೈನಿ ಶುಕ್ರವಾರ ಹೇಳಿದ್ದಾರೆ.

‘ಬಿಜೆಪಿಯ ಅಂತ್ಯ ಬರೆಯಲಾಗುತ್ತಿದೆ’ – ಸ್ವಾಮಿ ಪ್ರಸಾದ್ ಮೌರ್ಯ 

“ಜನವರಿ 14, ಮಕರ ಸಂಕ್ರಾಂತಿ ಸಂದರ್ಭದಲ್ಲಿ, ಬಿಜೆಪಿಯ ಅಂತ್ಯವನ್ನು ಬರೆಯಲಾಗುತ್ತಿದೆ” ಎಂದು ಸ್ವಾಮಿ ಪ್ರಸಾದ್ ಮೌರ್ಯ ಅವರು ಶುಕ್ರವಾರ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಾಗ ಹೇಳಿದರು. ಅಧಿಕಾರ ಹಿಡಿಯಲು ಬಿಜೆಪಿ,  ಬಡವರು, ದಲಿತರು ಮತ್ತು ಒಬಿಸಿಗಳನ್ನು ವಂಚಿಸಿದೆ ಎಂದು ಅವರು ಕಿಡಿಕಾರಿದರು. ಸ್ವಾಮಿ ಪ್ರಸಾದ್ ಮೌರ್ಯ ಅಥವಾ ಕೇಶವ್ ಮೌರ್ಯ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಬಿಜೆಪಿ ಈ ಹಿಂದೆ ಚರ್ಚಿಸಿತ್ತು ಆದರೆ ನಂತರ ಅವರು ಆದಿತ್ಯನಾಥ ಅವರನ್ನು ಕರೆತಂದಿತು ಎಂದು ಅವರು ಹೇಳಿದರು.

ಇದನ್ನೂ ಓದಿ: ನೀವೆಲ್ಲರೂ ಸಾಯುತ್ತೀರಿ: ದ್ವೇಷ ಭಾಷಣ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುತ್ತಿದ್ದಂತೆ ಪೊಲೀಸರ ವಿರುದ್ಧ ಗುಡುಗಿದ ಯತಿ ನರಸಿಂಹಾನಂದ

Published On - 4:23 pm, Fri, 14 January 22

ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್