AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ತಂದೆಗೆ ನಿಷ್ಠರಾಗಿಲ್ಲದ ಅಖಿಲೇಶ್​​​​ನ್ನು ನೀವು ನಂಬುತ್ತೀರಾ? ಅವರು ಔರಂಗಜೇಬ್‌ನಂತೆ: ಶಿವರಾಜ್ ಸಿಂಗ್ ಚೌಹಾಣ್

ಡಿಯೋರಿಯಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಚೌಹಾಣ್, "ತನ್ನ ತಂದೆಗೆ ನಿಷ್ಠರಾಗಿಲ್ಲದ" ಯಾರನ್ನಾದರೂ ನಂಬಬಹುದೇ ಎಂದು ಮತದಾರರಲ್ಲಿ ಕೇಳಿದರು. 2017 ರಲ್ಲಿ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷದ ನಿಯಂತ್ರಣಕ್ಕಾಗಿ..

ತನ್ನ ತಂದೆಗೆ ನಿಷ್ಠರಾಗಿಲ್ಲದ ಅಖಿಲೇಶ್​​​​ನ್ನು ನೀವು  ನಂಬುತ್ತೀರಾ? ಅವರು ಔರಂಗಜೇಬ್‌ನಂತೆ: ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Feb 20, 2022 | 7:00 PM

Share

ಲಖನೌ: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಭಾನುವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರನ್ನು ಮೊಘಲ್ ಚಕ್ರವರ್ತಿ ಔರಂಗಜೇಬ್‌ಗೆ ಹೋಲಿಸಿದ್ದಾರೆ.ಉತ್ತರ ಪ್ರದೇಶದ (UP elections) ಡಿಯೋರಿಯಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಚೌಹಾಣ್, “ತನ್ನ ತಂದೆಗೆ ನಿಷ್ಠರಾಗಿಲ್ಲದ” ಯಾರನ್ನಾದರೂ ನಂಬಬಹುದೇ ಎಂದು ಮತದಾರರಲ್ಲಿ ಕೇಳಿದರು. 2017 ರಲ್ಲಿ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷದ ನಿಯಂತ್ರಣಕ್ಕಾಗಿ ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಅಖಿಲೇಶ್ ಜಗಳವಾಡಿದ್ದರು ಎಂದು ಹೇಳಿದ್ದಾರೆ. 2016 ರಲ್ಲಿ ಯಾದವ್ ಕುಟೂಂ ಪಕ್ಷದ ಮುಖ್ಯಸ್ಥರನ್ನು ನಿರ್ಧರಿಸುವಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದರು ಮತ್ತು ಪಕ್ಷದ ಚುನಾವಣಾ ಚಿಹ್ನೆಯನ್ನು ಉಳಿಸಿಕೊಳ್ಳುವ ಬಗ್ಗೆ ಜಗಳ ನಡೆದಿತ್ತು. 2017 ರವರೆಗೆ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್ ಅಂತಿಮವಾಗಿ ಪಕ್ಷದ ಮುಖ್ಯಸ್ಥರಾದರು. “ಅಖಿಲೇಶ್ ಇಂದಿನ ಔರಂಗಜೇಬ್. ತನ್ನ ತಂದೆಗೆ ನಿಷ್ಠನಾಗದವನು, ಅವನು ನಿಮಗೆ ಹೇಗೆ ನಿಷ್ಠನಾಗಿರುತ್ತಾನೆ? ಮುಲಾಯಂ ಸಿಂಗ್ ಅವರೇ ಹಾಗೆ ಹೇಳಿದ್ದಾರೆ,” ಇಂದು ಮೂರನೇ ಹಂತದ ಮತದಾನ ನಡೆದ ಉತ್ತರ ಪ್ರದೇಶದ ರ್ಯಾಲಿಯಲ್ಲಿ ಚೌಹಾಣ್ ಹೇಳಿದರು.  ಔರಂಗಜೇಬ್ ತನ್ನ ತಂದೆಯನ್ನು ಜೈಲಿಗೆ ತಳ್ಳಿದನು, ಅವನ ಸಹೋದರರನ್ನು ಕೊಂದನು. ಅಖಿಲೇಶ್ ಮಾಡಿದ ರೀತಿಯಲ್ಲಿ ಯಾರೂ ತಮ್ಮನ್ನು ಅವಮಾನಿಸಿಲ್ಲ ಎಂದು ಮುಲಾಯಂ ಜಿ ಹೇಳುತ್ತಾರೆ, ”ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಹೇಳಿದ್ದಾರೆ.  ಮುಲಾಯಂ ಸಿಂಗ್ ಯಾದವ್ ನಡುವಿನ ಭಿನ್ನಾಭಿಪ್ರಾಯ 2016 ರಲ್ಲಿ 2017 ರ ವರೆಗೆ ಮುಂದವರಿದ ನಂತರ  ತಮ್ಮ ಮಗನೊಂದಿಗೆ ಯಾವುದೇ ವಿವಾದವಿಲ್ಲ ಮತ್ತು ಅವರು “ಸಮಸ್ಯೆಗಳನ್ನು ಪರಿಹರಿಸುತ್ತಾರೆ” ಎಂದು ಹೇಳಿದ್ದರು. ಹಿರಿಯ ಯಾದವ್ ಅವರು 25 ವರ್ಷಗಳ ಹಿಂದೆ ಸ್ಥಾಪಿಸಿದ ಸಮಾಜವಾದಿ ಪಕ್ಷದ ಚಿಹ್ನೆಯಾದ “ಸೈಕಲ್” ಗೆ ಹಕ್ಕು ಸಾಧಿಸಿದ್ದರು.

ಉತ್ತರ ಪ್ರದೇಶ ಇಂದು ಮತದಾನ ನಡೆಯುವ ಸ್ಥಾನಗಳು ಯುಪಿಯ ಪಶ್ಚಿಮ, ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿವೆ. 2017 ರಲ್ಲಿ, ಈ 59 ಸ್ಥಾನಗಳಲ್ಲಿ ಬಿಜೆಪಿ 49 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಸಮಾಜವಾದಿ ಪಕ್ಷವು 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ ಮತ್ತು ಮಾಯಾವತಿಯವರ ಬಹುಜನ ಸಮಾಜವಾದಿ ಪಕ್ಷ ಯಾವುದೇ ಸ್ಥಾನ ಗಳಿಸಿಲ್ಲ.

ಅಖಿಲೇಶ್ ಯಾದವ್ ಅವರು ತಮ್ಮ ಮೊದಲ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಯಾದವ್ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯಲ್ಲಿರುವ ಕರ್ಹಾಲ್ ಸ್ಥಾನದ ಮೇಲೆ ಎಲ್ಲರ ಕಣ್ಣುಗಳಿವೆ. ಇವರ ವಿರುದ್ಧ ಬಿಜೆಪಿ ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರನ್ನು ಕಣಕ್ಕಿಳಿಸಿದೆ. ಸಮಾಜವಾದಿ ಪಕ್ಷವು 1992 ರಲ್ಲಿ ಪಕ್ಷವು ಪ್ರಾರಂಭವಾದಾಗಿನಿಂದ ಕೇವಲ ಒಂದು ಬಾರಿ ಈ ಸ್ಥಾನವನ್ನು ಕಳೆದುಕೊಂಡಿದೆ.

ಇದನ್ನೂ ಓದಿ: ಇವಿಎಂನಲ್ಲಿ ಸಮಾಜವಾದಿ ಪಕ್ಷದ ಬಟನ್ ಒತ್ತಿದರೆ ಬಿಜೆಪಿ ಸ್ಲಿಪ್ ಬರುತ್ತಿದೆ: ಸಮಾಜವಾದಿ ಪಕ್ಷ ಆರೋಪ

Published On - 6:55 pm, Sun, 20 February 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?