AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Assembly Elections 2022: ಲಕ್ಷ್ಮಿ ದೇವತೆ ಆನೆ, ಸೈಕಲ್ ಮೇಲೆ ಯಾರ ಮನೆಗೂ ಬರುವುದಿಲ್ಲ; ರಾಜನಾಥ್ ಸಿಂಗ್ ಟೀಕೆ

ನಾವು ಕೇವಲ ಸರ್ಕಾರ ರಚನೆಗಾಗಿ ರಾಜಕೀಯ ಮಾಡುತ್ತಿಲ್ಲ, ಸಮಾಜ ಮತ್ತು ದೇಶವನ್ನು ಕಟ್ಟಲು ರಾಜಕೀಯ ಮಾಡುತ್ತೇವೆ. ಆದ್ದರಿಂದ ನಾವು ಯಾವುದೇ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

UP Assembly Elections 2022: ಲಕ್ಷ್ಮಿ ದೇವತೆ ಆನೆ, ಸೈಕಲ್ ಮೇಲೆ ಯಾರ ಮನೆಗೂ ಬರುವುದಿಲ್ಲ; ರಾಜನಾಥ್ ಸಿಂಗ್ ಟೀಕೆ
ರಾಜನಾಥ್ ಸಿಂಗ್
TV9 Web
| Edited By: |

Updated on: Feb 22, 2022 | 6:05 PM

Share

ನವದೆಹಲಿ: “ಲಕ್ಷ್ಮಿ ದೇವಿಯು ಎಂದೂ ‘ಸೈಕಲ್‌’ ಅಥವಾ ‘ಆನೆ’ಯ ಮೇಲೆ ಕುಳಿತು ಯಾರ ಮನೆಗೂ ಭೇಟಿ ನೀಡುವುದಿಲ್ಲ. ಹಾಗೆಯೇ ಆಕೆ ಯಾರತ್ತಲೂ ತನ್ನ ‘ಕೈ’ ಬೀಸುವುದಿಲ್ಲ. ಲಕ್ಷ್ಮಿ ಮಾತೆ ಕೇವಲ ‘ಕಮಲ’ದ ಮೇಲೆ ಕುಳಿತು ಬರುತ್ತಾಳೆ. ಈ ಮಾತನ್ನು ನೀವು ಒಪ್ಪುತ್ತೀರಲ್ಲವೇ?” ಎಂದು ಗೋರಖ್‌ಪುರದಲ್ಲಿ (Gorakhur) ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಉತ್ತರ ಪ್ರದೇಶದ ಇತರೆ ಪಕ್ಷಗಳನ್ನು ಲೇವಡಿ ಮಾಡಿದ್ದಾರೆ.

ಇದೇ ವೇಳೆ ಬಿಜೆಪಿ ಸರ್ಕಾರದ ಸಾಧನೆಗಳನ್ನು ಎತ್ತಿ ಹಿಡಿದ ಸಚಿವ ರಾಜನಾಥ್ ಸಿಂಗ್, ಬಡವರಿಗೆ ವಾರ್ಷಿಕ 6,000 ರೂ. ಹಣ, ಉಚಿತ ಪಡಿತರ, ಹಲವಾರು ಜನರಿಗೆ ಉತ್ತಮವಾದ ಮನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ನಾವು ಕೇವಲ ಸರ್ಕಾರ ರಚನೆಗಾಗಿ ರಾಜಕೀಯ ಮಾಡುತ್ತಿಲ್ಲ. ನಾವು ಸಮಾಜ ಮತ್ತು ದೇಶವನ್ನು ಕಟ್ಟಲು ರಾಜಕೀಯ ಮಾಡುತ್ತೇವೆ. ಆದ್ದರಿಂದ ನಾವು ದೇಶದ ಒಳಿತಿಗಾಗಿ ಯಾವುದೇ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ” ಎಂದು ಹೇಳಿದ್ದಾರೆ.

“ಚುನಾವಣೆ ಬಂದಾಗ, ಎಲ್ಲಾ ರಾಜಕೀಯ ಪಕ್ಷಗಳು ಜನರಿಗೆ ದೊಡ್ಡ ಭರವಸೆಗಳನ್ನು ನೀಡುತ್ತವೆ. ಕಳೆದ 75 ವರ್ಷಗಳಲ್ಲಿ ‘ನೇತಾಸ್’ ಆ ಭರವಸೆಗಳನ್ನು ಈಡೇರಿಸಿದ್ದರೆ ಭಾರತ 10-20 ವರ್ಷಗಳ ಹಿಂದೆ ವಿಶ್ವದ ಅತ್ಯಂತ ಶಕ್ತಿಶಾಲಿ ದೇಶವಾಗಬಹುದಿತ್ತು” ಎಂದು ರಾಜನಾಥ್ ಸಿಂಗ್ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಈ ಹಿಂದೆ ಉತ್ತರ ಪ್ರದೇಶದ ಗೋಂಡಾದ ಕರ್ನಲ್‌ಗಂಜ್‌ನಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿವರ್ಷವೂ ಹೋಳಿ ಹುಣ್ಣಿಮೆ ಮತ್ತು ದೀಪಾವಳಿ ಹಬ್ಬಗಳಂದು ಉಚಿತವಾಗಿ ಎಲ್​​ಪಿಜಿ ಸಿಲಿಂಡರ್​ ನೀಡಲಾಗುವುದು ಎಂದು ಭರವಸೆ ನೀಡಿದ್ದರು.

ಇದನ್ನೂ ಓದಿ: UP Assembly Polls 2022: ಲಾಕ್​ಡೌನ್ ವೇಳೆ ಮೋದಿ, ಯೋಗಿ ಸರ್ಕಾರ ನಿಮ್ಮ ನೋವನ್ನು ನಿರ್ಲಕ್ಷ್ಯಿಸಿದೆ; ಸೋನಿಯಾ ಗಾಂಧಿ ಟೀಕೆ

UP Elections 2022: ಮೂರನೇ ಹಂತದ ಮತದಾನಕ್ಕೆ ಉತ್ತರ ಪ್ರದೇಶ ಸಜ್ಜು; ಈ ಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಹೇಗಿದೆ?

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!