AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Assembly Elections 2022: ಲಕ್ಷ್ಮಿ ದೇವತೆ ಆನೆ, ಸೈಕಲ್ ಮೇಲೆ ಯಾರ ಮನೆಗೂ ಬರುವುದಿಲ್ಲ; ರಾಜನಾಥ್ ಸಿಂಗ್ ಟೀಕೆ

ನಾವು ಕೇವಲ ಸರ್ಕಾರ ರಚನೆಗಾಗಿ ರಾಜಕೀಯ ಮಾಡುತ್ತಿಲ್ಲ, ಸಮಾಜ ಮತ್ತು ದೇಶವನ್ನು ಕಟ್ಟಲು ರಾಜಕೀಯ ಮಾಡುತ್ತೇವೆ. ಆದ್ದರಿಂದ ನಾವು ಯಾವುದೇ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

UP Assembly Elections 2022: ಲಕ್ಷ್ಮಿ ದೇವತೆ ಆನೆ, ಸೈಕಲ್ ಮೇಲೆ ಯಾರ ಮನೆಗೂ ಬರುವುದಿಲ್ಲ; ರಾಜನಾಥ್ ಸಿಂಗ್ ಟೀಕೆ
ರಾಜನಾಥ್ ಸಿಂಗ್
TV9 Web
| Edited By: |

Updated on: Feb 22, 2022 | 6:05 PM

Share

ನವದೆಹಲಿ: “ಲಕ್ಷ್ಮಿ ದೇವಿಯು ಎಂದೂ ‘ಸೈಕಲ್‌’ ಅಥವಾ ‘ಆನೆ’ಯ ಮೇಲೆ ಕುಳಿತು ಯಾರ ಮನೆಗೂ ಭೇಟಿ ನೀಡುವುದಿಲ್ಲ. ಹಾಗೆಯೇ ಆಕೆ ಯಾರತ್ತಲೂ ತನ್ನ ‘ಕೈ’ ಬೀಸುವುದಿಲ್ಲ. ಲಕ್ಷ್ಮಿ ಮಾತೆ ಕೇವಲ ‘ಕಮಲ’ದ ಮೇಲೆ ಕುಳಿತು ಬರುತ್ತಾಳೆ. ಈ ಮಾತನ್ನು ನೀವು ಒಪ್ಪುತ್ತೀರಲ್ಲವೇ?” ಎಂದು ಗೋರಖ್‌ಪುರದಲ್ಲಿ (Gorakhur) ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಉತ್ತರ ಪ್ರದೇಶದ ಇತರೆ ಪಕ್ಷಗಳನ್ನು ಲೇವಡಿ ಮಾಡಿದ್ದಾರೆ.

ಇದೇ ವೇಳೆ ಬಿಜೆಪಿ ಸರ್ಕಾರದ ಸಾಧನೆಗಳನ್ನು ಎತ್ತಿ ಹಿಡಿದ ಸಚಿವ ರಾಜನಾಥ್ ಸಿಂಗ್, ಬಡವರಿಗೆ ವಾರ್ಷಿಕ 6,000 ರೂ. ಹಣ, ಉಚಿತ ಪಡಿತರ, ಹಲವಾರು ಜನರಿಗೆ ಉತ್ತಮವಾದ ಮನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ನಾವು ಕೇವಲ ಸರ್ಕಾರ ರಚನೆಗಾಗಿ ರಾಜಕೀಯ ಮಾಡುತ್ತಿಲ್ಲ. ನಾವು ಸಮಾಜ ಮತ್ತು ದೇಶವನ್ನು ಕಟ್ಟಲು ರಾಜಕೀಯ ಮಾಡುತ್ತೇವೆ. ಆದ್ದರಿಂದ ನಾವು ದೇಶದ ಒಳಿತಿಗಾಗಿ ಯಾವುದೇ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ” ಎಂದು ಹೇಳಿದ್ದಾರೆ.

“ಚುನಾವಣೆ ಬಂದಾಗ, ಎಲ್ಲಾ ರಾಜಕೀಯ ಪಕ್ಷಗಳು ಜನರಿಗೆ ದೊಡ್ಡ ಭರವಸೆಗಳನ್ನು ನೀಡುತ್ತವೆ. ಕಳೆದ 75 ವರ್ಷಗಳಲ್ಲಿ ‘ನೇತಾಸ್’ ಆ ಭರವಸೆಗಳನ್ನು ಈಡೇರಿಸಿದ್ದರೆ ಭಾರತ 10-20 ವರ್ಷಗಳ ಹಿಂದೆ ವಿಶ್ವದ ಅತ್ಯಂತ ಶಕ್ತಿಶಾಲಿ ದೇಶವಾಗಬಹುದಿತ್ತು” ಎಂದು ರಾಜನಾಥ್ ಸಿಂಗ್ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಈ ಹಿಂದೆ ಉತ್ತರ ಪ್ರದೇಶದ ಗೋಂಡಾದ ಕರ್ನಲ್‌ಗಂಜ್‌ನಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿವರ್ಷವೂ ಹೋಳಿ ಹುಣ್ಣಿಮೆ ಮತ್ತು ದೀಪಾವಳಿ ಹಬ್ಬಗಳಂದು ಉಚಿತವಾಗಿ ಎಲ್​​ಪಿಜಿ ಸಿಲಿಂಡರ್​ ನೀಡಲಾಗುವುದು ಎಂದು ಭರವಸೆ ನೀಡಿದ್ದರು.

ಇದನ್ನೂ ಓದಿ: UP Assembly Polls 2022: ಲಾಕ್​ಡೌನ್ ವೇಳೆ ಮೋದಿ, ಯೋಗಿ ಸರ್ಕಾರ ನಿಮ್ಮ ನೋವನ್ನು ನಿರ್ಲಕ್ಷ್ಯಿಸಿದೆ; ಸೋನಿಯಾ ಗಾಂಧಿ ಟೀಕೆ

UP Elections 2022: ಮೂರನೇ ಹಂತದ ಮತದಾನಕ್ಕೆ ಉತ್ತರ ಪ್ರದೇಶ ಸಜ್ಜು; ಈ ಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಹೇಗಿದೆ?

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ