UP Assembly Polls: ಯೋಗಿ ಆದಿತ್ಯನಾಥ್ ನನ್ನನ್ನು ಕೊಲ್ಲಲು ಪ್ಲಾನ್ ಮಾಡಿದ್ದಾರೆ; ಓಂ ಪ್ರಕಾಶ್ ರಾಜಭಾರ್ ಗಂಭೀರ ಆರೋಪ

Om Prakash Rajbhar: 'ಯೋಗಿ ಜೀ ನನ್ನನ್ನು ಕೊಲ್ಲಲು ಬಯಸುತ್ತಿದ್ದಾರೆ. ಅದಕ್ಕಾಗಿಯೇ ಬಿಜೆಪಿ ಮತ್ತು ಯೋಗಿ ಆದಿತ್ಯನಾಥ್ ಅವರ ಗೂಂಡಾಗಳನ್ನು ಕಪ್ಪು ಕೋಟ್‌ನಲ್ಲಿ ಅಲ್ಲಿಗೆ ಕಳುಹಿಸಲಾಗಿತ್ತು' ಎಂದು ಓಂ ಪ್ರಕಾಶ್ ರಾಜಭರ್ ಆರೋಪಿಸಿದ್ದಾರೆ.

UP Assembly Polls: ಯೋಗಿ ಆದಿತ್ಯನಾಥ್ ನನ್ನನ್ನು ಕೊಲ್ಲಲು ಪ್ಲಾನ್ ಮಾಡಿದ್ದಾರೆ; ಓಂ ಪ್ರಕಾಶ್ ರಾಜಭಾರ್ ಗಂಭೀರ ಆರೋಪ
ಓಂ ಪ್ರಕಾಶ್ ರಾಜಭಾರ್
Follow us
| Updated By: ಸುಷ್ಮಾ ಚಕ್ರೆ

Updated on: Feb 15, 2022 | 4:40 PM

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ನಡುವೆ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ (Om Prakash Rajbhar) ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಘಾತಕಾರಿ ಆರೋಪಗಳನ್ನು ಮಾಡಿದ್ದಾರೆ. ವಾರಾಣಸಿಯ ಶಿವಪುರ ಕ್ಷೇತ್ರದಿಂದ ಎಸ್​ಬಿಎಸ್​ಪಿ ಅಭ್ಯರ್ಥಿ ಅರವಿಂದ್ ರಾಜ್‌ಭರ್ ಸೋಮವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ರಾಜ್‌ಭರ್ ಆರೋಪಿಸಿದ್ದಾರೆ. ಹಾಗೇ, ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ನನ್ನನ್ನು ‘ಕೊಲ್ಲಲು’ ಪ್ಲಾನ್ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ‘ಯೋಗಿ ಜೀ ನನ್ನನ್ನು ಕೊಲ್ಲಲು ಬಯಸುತ್ತಿದ್ದಾರೆ. ಅದಕ್ಕಾಗಿಯೇ ಬಿಜೆಪಿ ಮತ್ತು ಯೋಗಿ ಆದಿತ್ಯನಾಥ್ ಅವರ ಗೂಂಡಾಗಳನ್ನು ಕಪ್ಪು ಕೋಟ್‌ನಲ್ಲಿ ಅಲ್ಲಿಗೆ ಕಳುಹಿಸಲಾಗಿತ್ತು’ ಎಂದು ಓಂ ಪ್ರಕಾಶ್ ರಾಜಭರ್ ಆರೋಪಿಸಿದ್ದಾರೆ.

ತನಗೆ ಮತ್ತು ಅರವಿಂದ್ ರಾಜ್‌ಭರ್‌ಗೆ ಭದ್ರತೆ ಒದಗಿಸುವಂತೆ ಓಂ ಪ್ರಕಾಶ್ ರಾಜ್‌ಭರ್ ಭಾರತ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ಮಾಜಿ ಮಿತ್ರ ಪಕ್ಷವಾಗಿರುವ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷವು ಪ್ರಸ್ತುತ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಮೈತ್ರಿಯೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಎಂಬುದು ಗಮನಾರ್ಹ.

ಸಮಾಜವಾದಿ ಪಕ್ಷದ ಮಿತ್ರ ಮತ್ತು ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ ಅವರು ಮಂಗಳವಾರ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಸ್ಫೋಟಕ ಆರೋಪವನ್ನು ಮಾಡಿದ್ದಾರೆ.

ಓಂ ಪ್ರಕಾಶ್ ರಾಜ್‌ಭರ್ ಅವರ ಎಸ್‌ಬಿಎಸ್‌ಪಿ 2017ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ರಾಜ್‌ಭರ್ ನಿರ್ಧರಿಸಿದ ನಂತರ ಎರಡು ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು.

ಇದನ್ನೂ ಓದಿ: ನಾನು ಪುನರಾಯ್ಕೆಯಾದರೆ ಮುಸ್ಲಿಮರು ತಿಲಕ ಧರಿಸುವಂತೆ ಮಾಡುತ್ತೇನೆ: ಉತ್ತರ ಪ್ರದೇಶದ ಬಿಜೆಪಿ ನಾಯಕ

Uttar Pradesh Polls 2022: ಉತ್ತರ ಪ್ರದೇಶ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಕರ್ಹಾಲ್‌ನಿಂದ ಸ್ಪರ್ಧಿಸುವುದು ಖಚಿತ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ