AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Elections 2022: ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಬಡವರಿಗೆ 1 ಕೆಜಿ ತುಪ್ಪ, ಉಚಿತ ರೇಷನ್; ಅಖಿಲೇಶ್ ಯಾದವ್ ಭರವಸೆ

ಎಸ್‌ಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಬಡವರಿಗೆ ಪಡಿತರ ನೀಡುತ್ತೇವೆ, ಅದರೊಂದಿಗೆ ವರ್ಷದಲ್ಲಿ ಸಾಸಿವೆ ಎಣ್ಣೆ ಹಾಗೂ ಎರಡು ಸಿಲಿಂಡರ್‌ಗಳನ್ನು ನೀಡುತ್ತೇವೆ. ಬಡವರ ಆರೋಗ್ಯ ಸುಧಾರಿಸಲು ಒಂದು ಕೆಜಿ ತುಪ್ಪವನ್ನು ಸಹ ನೀಡಲಾಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

Uttar Pradesh Elections 2022: ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಬಡವರಿಗೆ 1 ಕೆಜಿ ತುಪ್ಪ, ಉಚಿತ ರೇಷನ್; ಅಖಿಲೇಶ್ ಯಾದವ್ ಭರವಸೆ
ಅಖಿಲೇಶ್​ ಯಾದವ್
TV9 Web
| Edited By: |

Updated on: Feb 15, 2022 | 5:15 PM

Share

ರಾಯ್ ಬರೇಲಿ: ಉತ್ತರ ಪ್ರದೇಶದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಡವರಿಗೆ 5 ವರ್ಷಗಳ ಕಾಲ ಉಚಿತ ರೇಷನ್ ಜೊತೆಗೆ ಒಂದು ಕೆ.ಜಿ ತುಪ್ಪ ನೀಡುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಭರವಸೆ ನೀಡಿದ್ದಾರೆ. ‘ಈಗಾಗಲೇ ರೇಷನ್ ಪಡೆಯುತ್ತಿರುವ ಬಡವರಿಗೆ ಚುನಾವಣೆಯವರೆಗೂ ರೇಷನ್ ಸಿಗುತ್ತದೆ, ಚುನಾವಣೆ ನಂತರ ರೇಷನ್ ಸಿಗುವುದಿಲ್ಲ. ನವೆಂಬರ್​ವರೆಗೆ ರೇಷನ್ ನೀಡಬೇಕಿತ್ತು. ಆದರೆ, ಉತ್ತರ ಪ್ರದೇಶದ ಚುನಾವಣೆ ಘೋಷಣೆಯಾದ ಬಳಿಕ ಮಾರ್ಚ್​ವರೆಗೆ ನೀಡುವುದಾಗಿ ಘೋಷಿಸಲಾಗಿದೆ. ಬಿಜೆಪಿ ಸರ್ಕಾರ ತಾನು ನೀಡುತ್ತಿರುವ ಉಚಿತ ರೇಷನ್ ಯೋಜನೆಯನ್ನು ನಿಲ್ಲಿಸಲು ನಿರ್ಧರಿಸಿದೆ’ ಎಂದು ಅಖಿಲೇಶ್ ಯಾದವ್ ಟೀಕಿಸಿದ್ದಾರೆ.

ಇಂದು ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಖಿಲೇಶ್ ಯಾದವ್, ಮಾರ್ಚ್‌ನಲ್ಲಿ ಚುನಾವಣೆ ಮುಗಿಯುತ್ತದೆ ಎಂದು ತಿಳಿದಿರುವ ಕಾರಣ ದೆಹಲಿಯ ಬಜೆಟ್‌ನಲ್ಲಿ ಪಡಿತರಕ್ಕಾಗಿ ಹಣವನ್ನು ಮೀಸಲಿಟ್ಟಿಲ್ಲ. ಎಸ್‌ಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಬಡವರಿಗೆ ಪಡಿತರ ನೀಡುತ್ತೇವೆ, ಅದರೊಂದಿಗೆ ಸಾಸಿವೆ ಎಣ್ಣೆ ಹಾಗೂ ಎರಡು ಸಿಲಿಂಡರ್‌ಗಳನ್ನು ನೀಡುತ್ತೇವೆ. ಬಡವರ ಆರೋಗ್ಯ ಸುಧಾರಿಸಲು ಒಂದು ಕೆಜಿ ತುಪ್ಪವನ್ನು ಸಹ ನೀಡಲಾಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಬಿಜೆಪಿ ಸರ್ಕಾರವು ವಿತರಿಸುತ್ತಿರುವ ಪಡಿತರ ಗುಣಮಟ್ಟವು ಕಳಪೆಯಾಗಿದೆ ಮತ್ತು ಉಪ್ಪಿನಲ್ಲಿ ಗಾಜಿನ ಕಣಗಳು ಕಂಡುಬಂದಿರುವ ವರದಿಗಳಿವೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ 11 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ ಮತ್ತು ಎಸ್‌ಪಿ ಸರ್ಕಾರವು ಆ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಯುವಕರಿಗೆ ಉದ್ಯೋಗಗಳನ್ನು ಒದಗಿಸಲಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ನಾಯಕರು ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿದ್ದರು, ಅವರ ಹಿರಿಯ ನಾಯಕರು ಕರಪತ್ರ ಹಂಚುತ್ತಿದ್ದರು. ಆದರೆ ಕೆಲವು ಗ್ರಾಮಗಳಿಗೆ ಭೇಟಿ ನೀಡಿದಾಗ ಜನರು ಖಾಲಿ ಗ್ಯಾಸ್ ಸಿಲಿಂಡರ್‌ಗಳನ್ನು ತೋರಿಸಿದ ಕಾರಣ ಈಗ ಪ್ರಚಾರ ಸ್ಥಗಿತಗೊಳಿಸಲಾಗಿದೆ ಎಂದು ಯಾದವ್ ಟೀಕಿಸಿದ್ದಾರೆ.

ಹಾಗೇ, ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿ ಸರ್ಕಾರದ ಅಡಿಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ. ಈ ಡಬಲ್ ಇಂಜಿನ್ ಸರ್ಕಾರದಲ್ಲಿ ಭ್ರಷ್ಟಾಚಾರವೂ ದುಪ್ಪಟ್ಟಾಗಿದೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Uttar Pradesh Elections 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ದಾಳಿ

UP Assembly Polls: ಯೋಗಿ ಆದಿತ್ಯನಾಥ್ ನನ್ನನ್ನು ಕೊಲ್ಲಲು ಪ್ಲಾನ್ ಮಾಡಿದ್ದಾರೆ; ಓಂ ಪ್ರಕಾಶ್ ರಾಜಭಾರ್ ಗಂಭೀರ ಆರೋಪ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!