AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊಸಿಲಲ್ಲಿರುವ ಉತ್ತರ ಪ್ರದೇಶದಲ್ಲಿ ಸಾಲುಸಾಲು ಯೋಜನೆಗಳನ್ನು ಲೋಕಾರ್ಪಣೆ ಮಾಡಲು ಬಿರುಸಿನ ಸಿದ್ಧತೆ

ನವೆಂಬರ್ 25ರಂದು ಗ್ರೇಟರ್​ ನೋಯ್ಡಾಕ್ಕೆ ಭೇಟಿ ನೀಡಲಿರುವ ಮೋದಿ ಮೆಗಾ ನೊಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಚುನಾವಣೆ ಹೊಸಿಲಲ್ಲಿರುವ ಉತ್ತರ ಪ್ರದೇಶದಲ್ಲಿ ಸಾಲುಸಾಲು ಯೋಜನೆಗಳನ್ನು ಲೋಕಾರ್ಪಣೆ ಮಾಡಲು ಬಿರುಸಿನ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Nov 17, 2021 | 5:32 PM

Share

ಲಖನೌ: ಚುನಾವಣೆ ಹೊಸಿಲಲ್ಲಿರುವ ಉತ್ತರ ಪ್ರದೇಶಕ್ಕೆ ಪೂರ್ವಾಂಚಲ ಎಕ್ಸ್​ಪ್ರೆಸ್​ವೇ ಬಿಜೆಪಿ ಕೊಡುತ್ತಿರುವ ಕೊನೆಯ ಕೊಡುಗೆಯಲ್ಲ. ಇಂಥ ಇನ್ನಷ್ಟು ಯೋಜನೆಗಳ ಸಾಲು ಸಿದ್ಧಗೊಂಡಿದ್ದು, ಒಂದೊಂದಾಗಿ ಅನಾವರಣಗೊಳ್ಳಲಿವೆ. ಮುಂದಿನ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕನಿಷ್ಠ ಮೂರು ಮುಖ್ಯ ಯೋಜನೆಗಳಿಗೂ ಭೂಮಿಪೂಜೆ ನೆರವೇರಿಸಲಿದ್ದಾರೆ. ನವೆಂಬರ್ 25ರಂದು ಗ್ರೇಟರ್​ ನೋಯ್ಡಾಕ್ಕೆ ಭೇಟಿ ನೀಡಲಿರುವ ಮೋದಿ ಮೆಗಾ ನೊಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಅಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿಯೂ ಮಾತನಾಡುತ್ತಾರೆ.

ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೀರತ್​ನಿಂದ ಪ್ರಯಾಗ್​ರಾಜ್ ಸಂಪರ್ಕಿಸುವ 594 ಕಿಮೀ ಅಂತರದ ಗಂಗಾ ಎಕ್ಸ್​ಪ್ರೆಸ್​ವೇ ಮೂಲಕ ಪೂರ್ವ ಉತ್ತರ ಪ್ರದೇಶವನ್ನು ಪಶ್ಚಿಮ ಉತ್ತರ ಪ್ರದೇಶದೊಂದಿಗೆ ಬೆಸೆಯಲಾಗುವುದು. ಈ ಯೋಜನೆಗೆ ಇನ್ನು ಕೆಲವೇ ದಿನಗಳಲ್ಲಿ ಚಾಲನೆ ಸಿಗದಲಿದೆ. ಇಟಾ-ಚಿತ್ರಕೂಟ ಮಾರ್ಗದ ಬುಂದೇಲಖಂಡ ಎಕ್ಸ್​ಪ್ರೆಸ್​ವೇ ಕಾಮಗಾರಿಗೂ ಹೊಸ ವೇಗ ಸಿಗಲಿದೆ ಎಂದು ಘೋಷಿಸಿದ್ದರು.

ಗಂಗಾ ಎಕ್ಸ್​ಪ್ರೆಸ್​ವೇ ಯೋಜನೆಯ ತಾಂತ್ರಿಕ ಬಿಡ್​ಗಳನ್ನು ಮೂರು ದಿನಗಳ ಹಿಂದೆ ತೆರೆಯಲಾಗಿದೆ. ಅಂತಿಮ ಬಿಡ್​ಗಳನ್ನು ಮುಂದಿನ ವಾರ ತೆರೆಯಲಾಗುವುದು. ಯಶಸ್ವಿ ಬಿಡ್ಡರ್ ಯಾರು ಎಂಬುದು ಅಂತಿಮವಾದ ತಕ್ಷಣ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಯೋಜನೆಗೆ ಬೇಕಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಶೇ 94ರಷ್ಟು ಮುಕ್ತಾಯವಾಗಿದೆ. ಹಾಲಿ ಚಾಲ್ತಿಯಲ್ಲಿರುವ ಲಖನೌ-ಆಗ್ರಾ ಎಕ್ಸ್​ವೇ ಮಾರ್ಗವನ್ನು ಇದು ಹಲವೆಡೆ ಅಡ್ಡಲಾಗಿ ಹಾದು ಹೋಗುತ್ತದೆ. ಈ ಯೋಜನೆಗೆ ಸುಮಾರು ₹ 36,000 ಕೋಟಿ ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ.

ಬುಂದೇಲಖಂಡ್ ಎಕ್ಸ್​ಪ್ರೆಸ್ ವೇ ಯೋಜನೆಯ ಶೇ 76ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಡಿಸೆಂಬರ್ ಮಾಸಾಂತ್ಯದ ಒಳಗೆ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಆಲೋಚನೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರಕ್ಕೆ ಇದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ಲಖನೌ-ಆಗ್ರಾ ಎಕ್ಸ್​ಪ್ರೆಸ್​ವೇ ಮಾರ್ಗಕ್ಕೆ ಇದು ಹಲವೆಡೆ ಅಡ್ಡಲಾಗಿ ಹಾದುಹೋಗುತ್ತದೆ. ಗೋರಖ್​ಪುರದಲ್ಲಿ ರಸಗೊಬ್ಬರ ಕಾರ್ಖಾನೆ ಮತ್ತು ಏಮ್ಸ್​ ಆಸ್ಪತ್ರೆಯ ಸಂಕೀರ್ಣವನ್ನೂ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ಸಮಾರಂಭ ಡಿಸೆಂಬರ್ 5ರಂದು ನಡೆಯಬಹುದು ಎಂದು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿದೆ.

ಅಖಿಲೇಶ್ ಯಾದವ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚಾಲನೆ ನೀಡಿದ್ದ ಯೋಜನೆಗಳನ್ನು ಮಾತ್ರ ಯೋಗಿ ಆದಿತ್ಯನಾಥ್ ಸರ್ಕಾರವು ಉದ್ಘಾಟಿಸುತ್ತಿದೆ ಎಂದು ಉತ್ತರ ಪ್ರದೇಶದ ಪ್ರಮುಖ ಪ್ರತಿಪಕ್ಷ ಸಮಾಜವಾದಿ ಪಕ್ಷ ಆರೋಪಿಸಿದೆ. ಆದರೆ ಬಿಜೆಪಿ ಈ ಹೇಳಿಕೆಗಳನ್ನು ಒಪ್ಪುತ್ತಿಲ್ಲ. ಈ ಎಲ್ಲ ಯೋಜನೆಗಳ ಶ್ರೇಯವು ಕೇಂದ್ರದ ಮೋದಿ ಸರ್ಕಾರ ಮತ್ತು ರಾಜ್ಯದ ಯೋಗಿ ಸರ್ಕಾರಕ್ಕೆ ಸೇರಬೇಕು. ಬೇರೆ ಯಾರೂ ಇದರಲ್ಲಿ ಪಾಲುದಾರರಲ್ಲ ಎಂದು ಬಿಜೆಪಿ ಹೇಳುತ್ತಿದೆ.

ಇದನ್ನೂ ಓದಿ: Purvanchal Expressway Inaguration: ಉತ್ತರ ಪ್ರದೇಶದಲ್ಲಿ 22,500 ಕೋಟಿ ವೆಚ್ಚದ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಇದನ್ನೂ ಓದಿ: ಉತ್ತರ ಪ್ರದೇಶ ಸರ್ಕಾರದಿಂದ ಹೊಸ ಯೋಜನೆ; ಹಸುಗಳಿಗೆ ಆಂಬುಲೆನ್ಸ್ ಸೇವೆ ಒದಗಿಸಲು ನಿರ್ಧಾರ

Published On - 5:31 pm, Wed, 17 November 21

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ