AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧ; ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಭಾಷಣ

ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ಸದ್ಯ ಹಿಜಾಬ್ ಸಂಘರ್ಷವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರ ಮಾತುಗಳು ತುಂಬ ಮಹತ್ವ ಪಡೆದಿವೆ.

ದೇಶದ ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧ; ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಭಾಷಣ
ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on:Feb 10, 2022 | 2:22 PM

Share

ಇಂದು ಪ್ರಧಾನಮಂತ್ರಿ ಮೋದಿಯವರು (PM Narendra Modi) ಉತ್ತರ ಪ್ರದೇಶದಲ್ಲಿ (Uttar Pradesh Assembly Electioin) ತಮ್ಮ ಮೊದಲ ಭೌತಿಕ ಚುನಾವಣಾ ರ್ಯಾಲಿ ನಡೆಸಿದರು. ಈ ವೇಳೆ ಮುಸ್ಲಿಂ ಮಹಿಳೆಯರ ಬಗ್ಗೆ ಮಾತನಾಡಿದ ಅವರು, ಭಾರತದಲ್ಲಿ ಮುಸ್ಲಿಂ ಮಹಿಳೆಯರ ಹಕ್ಕು ಮತ್ತು ಅಭಿವೃದ್ಧಿಯನ್ನು ತಡೆಯಲು ಕೆಲವರು ಹೊಸಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಹಾಗೇ, ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮಹಿಳೆಯರ (Muslim Women) ಮೇಲಿನ ದೌರ್ಜನ್ಯ ತಡೆಯಲು ಇಲ್ಲಿ ಬಿಜೆಪಿ ಸರ್ಕಾರದ ಅಗತ್ಯವಿದೆ ಎಂದು ಹೇಳಿದರು.  ಬಿಜೆಪಿ ಸರ್ಕಾರ ಮುಸ್ಲಿಂ ಮಹಿಳೆಯರನ್ನು ತ್ರಿವಳಿ ತಲಾಖ್​​ನಿಂದ ಮುಕ್ತಗೊಳಿಸಿದೆ. ಅದಾದ ಬಳಿಕ ಅವರು ಬಹಿರಂಗವಾಗಿಯೇ ಮೋದಿ ಸರ್ಕಾರವನ್ನು ಬೆಂಬಲಿಸಲು ಶುರು ಮಾಡಿದರು. ಇದರಿಂದ ಪ್ರತಿಪಕ್ಷಗಳು ಆತಂಕಕ್ಕೀಡಾಗಿವೆ. ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣೆಗಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಇಂದಿನ ರ್ಯಾಲಿಯಲ್ಲಿ ಹೇಳಿದರು.   

ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ಸದ್ಯ ಹಿಜಾಬ್ ಸಂಘರ್ಷವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರ ಈ ಮಾತು ತುಂಬ ಮಹತ್ವ ಪಡೆದಿದೆ. ಕುಂದಾಪುರದ ಒಂದು ಕಾಲೇಜಿನಲ್ಲಿ ಹಿಜಾಬ್​ ಧರಿಸಿ ಕ್ಲಾಸಿಗೆ ಹೊರಟಿದ್ದ ಆರು ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು, ಗೇಟ್​ ಬಾಗಿಲು ಹಾಕಿದಾಗಿನಿಂದ ಶುರುವಾದ ವಿವಾದ ಇದೀಗ ಹೆಚ್ಚಾಗಿದೆ. ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಿ ಕ್ಲಾಸಿಗೆ ಬಂದರೆ, ನಾವೂ ಕೂಡ ಕೇಸರಿ ಶಾಲು ಹಾಕಿ ಬರುತ್ತೇವೆ ಎಂದು ಹಿಂದೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಇದೆಲ್ಲದರ ಮಧ್ಯೆ ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.  ಈ ಹಿಜಾಬ್​ ವಿವಾದವೀಗ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಹಿಜಾಬ್​ ಕಾರಣಕ್ಕೆ ಮುಸ್ಲಿಂ ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲಾಗುತ್ತಿದೆ ಎಂಬ ಆರೋಪ ಬಲವಾಗಿ ಕೇಳಿಬರುತ್ತಿದೆ.

ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ: ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಮಂತ್ರಿ, ಈ ಹಿಂದೆ ಉತ್ತರಪ್ರದೇಶವನ್ನು ಆಳಿದ ಸರ್ಕಾರಗಳು ಅವರ ಕುಟುಂಬದ ಹೊರತಾಗಿ ಇನ್ನೇನೂ ನೋಡಲೇ ಇಲ್ಲ. ಆ ಪಕ್ಷಗಳು ತಮ್ಮ ಕುಟುಂಬಕ್ಕಾಗಿ ಆಡಳಿತ ನಡೆಸಿದ್ದಾರೆಯೇ ಹೊರತು ಇಲ್ಲಿನ ಜನರನ್ನು ಕಾಳಜಿ ಮಾಡಲಿಲ್ಲ ಎಂದು ಹೇಳಿದರು.  ಸಿಎಂ ಯೋಗಿ ಆಡಳಿತವನ್ನು ಹೊಗಳಿದ ಪ್ರಧಾನಿ ಮೋದಿ, ಇಲ್ಲಿನ ಬಡವರಿಗೆ ಬಿಜೆಪಿ ಸರ್ಕಾರ ಮನೆಗಳನ್ನು ನೀಡಿದೆ. ಉತ್ತಮ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗಿನ ಚಿಕಿತ್ಸೆಯನ್ನು ಉಚಿತವಾಗಿ ನೀಡುತ್ತಿದೆ ಎಂದು ಹೇಳಿದರು. ಅಷ್ಟೇ ಅಲ್ಲ, ರೈತರ ಖಾತೆಗೆ ನೇರವಾಗಿ ಹೋಗಬೇಕು ಎಂದರೆ ಬಿಜೆಪಿ ಸರ್ಕಾರ ಮತ್ತೆ ಬರಬೇಕು ಎಂದೂ ಹೇಳಿದರು.

ಉತ್ತರಪ್ರದೇಶದಲ್ಲಿ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆ ಸಾರ್ವಜನಿಕ ಅಭಿವೃದ್ಧಿಗೆ ಪೂರಕವಾಗಿದೆ. ನಮ್ಮ ಡಬಲ್​ ಎಂಜಿನ್​ ಸರ್ಕಾರ ಯುಪಿಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದೆ. ರಸ್ತೆ ನಿರ್ಮಾಣದ ಮೂಲಕ ಸಂಪರ್ಕ ಅಭಿವೃದ್ಧಿಗೊಳಿಸಿದೆ ಎಂದು ಹೇಳಿದ ಪ್ರಧಾನಮಂತ್ರಿ, ಇಲ್ಲಿನ ಜನರು ಈ ಚುನಾವಣೆಯಲ್ಲಿ ಮತ ಹಾಕುವಾಗ ಎಚ್ಚರ ವಹಿಸಬೇಕು. ಯಾರು ನಿಮ್ಮ ಸಹೋದರಿ/ ಹೆಣ್ಣುಮಕ್ಕಳನ್ನ ಸುರಕ್ಷಿತ ಮಾಡುತ್ತಾರೋ, ಯಾರು  ಉತ್ತರ ಪ್ರದೇಶವನ್ನು ದಂಗೆ ಮುಕ್ತವನ್ನಾಗಿ ಮಾಡುತ್ತಾರೋ ಅವರಿಗೆ ಮತ ಹಾಕಬೇಕು ಎಂದು ಹೇಳಿದರು.

ಇದನ್ನೂ ಓದಿ:  ಲಖಿಂಪುರ ಖೇರಿ ಹಿಂಸಾಚಾರ; ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾಗೆ ಜಾಮೀನು ನೀಡಿದ ಅಲಹಾಬಾದ್​ ಹೈಕೋರ್ಟ್​

Published On - 1:46 pm, Thu, 10 February 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್