AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಯಾಕೆ ಬಹಿರಂಗ ಮಾಡುತ್ತಿಲ್ಲ?; ಬಿಜೆಪಿ ಪ್ರಶ್ನೆ 

ಸಮಾಜವಾದಿ ಪಕ್ಷದ ಮೂಲಗಳು ಹೇಳುವಂತೆ ಅಭ್ಯರ್ಥಿಗಳ ಪಟ್ಟಿಯನ್ನು ಬಹಿರಂಗಗೊಳಿಸಿದರೆ, ಬಿಜೆಪಿಯು ಅವುಗಳನ್ನು ಬಳಸಿಕೊಂಡು ಚುನಾವಣೆಯನ್ನು ಮತ್ತಷ್ಟು ಧ್ರುವೀಕರಣಗೊಳಿಸಲು ಮುಸ್ಲಿಂ ಅಭ್ಯರ್ಥಿಗಳ ಹೆಸರನ್ನು ಹೈಲೈಟ್ ಮಾಡುವ ಮೂಲಕ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ದಾಖಲೆಗಳನ್ನು ಪ್ರಸಾರ ಮಾಡುತ್ತದೆ.

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಯಾಕೆ ಬಹಿರಂಗ ಮಾಡುತ್ತಿಲ್ಲ?; ಬಿಜೆಪಿ ಪ್ರಶ್ನೆ 
ಯೋಗಿ ಆದಿತ್ಯನಾಥ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 24, 2022 | 6:04 PM

Share

ಲಖನೌ: ಉತ್ತರ ಪ್ರದೇಶ ಚುನಾವಣೆಯಲ್ಲಿ ಅಖಿಲೇಶ್ ಯಾದವ್ (Akhilesh Yadav) ಅವರ ಸಮಾಜವಾದಿ (Samajwadi Party) ಪಕ್ಷದಿಂದ ಕಠಿಣ ಹೋರಾಟವನ್ನು ಎದುರಿಸುತ್ತಿರುವ ಬಿಜೆಪಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ವಿರುದ್ಧ ಅಭ್ಯರ್ಥಿಗಳ ಪಟ್ಟಿಯ ವಿಷಯದಲ್ಲಿ ವಾಗ್ದಾಳಿ ನಡೆಸಿದೆ. ರಾಜ್ಯದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಭಾನುವಾರ ಟ್ವೀಟ್ ಮಾಡಿದ್ದು, ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಏಕೆ ಬಹಿರಂಗಗೊಳಿಸುತ್ತಿಲ್ಲ ಮತ್ತು ಪಕ್ಷ ಯಾಕೆ ಹೆದರುತ್ತಿದೆ ಎಂದು ಅಖಿಲೇಶ್ ಯಾದವ್​​ಗೆ ಕೇಳಿದ್ದಾರೆ. ಬಿಜೆಪಿಯ ಇತ್ತೀಚಿನ ದಾಳಿಗಳು 3 ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ರಾಜ್ಯದ ಪಶ್ಚಿಮ ಭಾಗದಿಂದ ಪ್ರಾರಂಭವಾಗುವ ನಿರ್ಣಾಯಕ ರಾಜ್ಯ ಚುನಾವಣೆಯನ್ನು ಧ್ರುವೀಕರಣಗೊಳಿಸುವ ಮತ್ತೊಂದು ಪ್ರಯತ್ನವಾಗಿದೆ ಎಂದು ಸಮಾಜವಾದಿ ಪಕ್ಷದ ಮೂಲಗಳು ತಿಳಿಸಿವೆ. 2017 ರ ಚುನಾವಣೆಯಲ್ಲಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬಿಜೆಪಿ, ರಾಜ್ಯದ ಪಶ್ಚಿಮ ಭಾಗದಲ್ಲಿ ಗರಿಷ್ಠ ಪರಿಣಾಮವನ್ನು ಬೀರಿದ ದೀರ್ಘಕಾಲದ ರೈತರ ಆಂದೋಲನದ ನಂತರ ಹಿನ್ನಡೆ ಅನುಭವಿಸುತ್ತಿದೆ. ಮುಖ್ಯಮಂತ್ರಿ ಆದಿತ್ಯನಾಥ ಸೇರಿದಂತೆ ಉತ್ತರ ಪ್ರದೇಶದ ಬಿಜೆಪಿಯ ಉನ್ನತ ನಾಯಕರಿಂದ ಅಲ್ಪಸಂಖ್ಯಾತರ ವಿರುದ್ಧವಾಗಿ ಕಂಡುಬರುವ ತೀಕ್ಷ್ಣವಾದ ಕಾಮೆಂಟ್‌ಗಳು ಕಳೆದ ವಾರದಲ್ಲಿ ತೀವ್ರಗೊಂಡಿದೆ. ತಮ್ಮ ಟ್ವಿಟರ್ ಟೈಮ್‌ಲೈನ್‌ನಲ್ಲಿ, ರಾಜ್ಯದ ಮುಖ್ಯಮಂತ್ರಿ ಕಳೆದ ವಾರದಲ್ಲಿ 6 ಬಾರಿ “ದಂಗಾ” ಅಥವಾ “ಗಲಭೆ” ಎಂದು ಉಲ್ಲೇಖಿಸಿದ್ದಾರೆ.

ಸಮಾಜವಾದಿ ಪಕ್ಷದ ಮೂಲಗಳು ಹೇಳುವಂತೆ ಅಭ್ಯರ್ಥಿಗಳ ಪಟ್ಟಿಯನ್ನು ಬಹಿರಂಗಗೊಳಿಸಿದರೆ, ಬಿಜೆಪಿಯು ಅವುಗಳನ್ನು ಬಳಸಿಕೊಂಡು ಚುನಾವಣೆಯನ್ನು ಮತ್ತಷ್ಟು ಧ್ರುವೀಕರಣಗೊಳಿಸಲು ಮುಸ್ಲಿಂ ಅಭ್ಯರ್ಥಿಗಳ ಹೆಸರನ್ನು ಹೈಲೈಟ್ ಮಾಡುವ ಮೂಲಕ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ದಾಖಲೆಗಳನ್ನು ಪ್ರಸಾರ ಮಾಡುತ್ತದೆ. ಎಸ್‌ಪಿ-ಆರ್‌ಎಲ್‌ಡಿ ಮೈತ್ರಿಕೂಟವು ಚುನಾವಣೆಯ 1 ನೇ ಹಂತದ ಮತದಾನದಲ್ಲಿ 58 ಪಶ್ಚಿಮ ಉತ್ತರ ಪ್ರದೇಶದ ಸ್ಥಾನಗಳಿಗೆ 13 ಮುಸ್ಲಿಂ ಅಭ್ಯರ್ಥಿಗಳನ್ನು ಹೆಸರಿಸಿದೆ.

ಜನವರಿ 13 ರಂದು, ಸಮಾಜವಾದಿ ಪಕ್ಷವು ಮೈತ್ರಿಯಿಂದ 29 ಅಭ್ಯರ್ಥಿಗಳ ಹೆಸರುಗಳೊಂದಿಗೆ ಸಾಮಾಜಿಕ ಮಾಧ್ಯಮ ಮತ್ತು ಪತ್ರಿಕೆಗಳಿಗೆ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿತು ಆದರೆ ಹೆಚ್ಚಿನ ಟಿಕೆಟ್ ಗಳನ್ನು ನೀಡಿದ್ದರೂ, ಪಟ್ಟಿಗಳನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಹಾಕಲಾಗಿಲ್ಲ.

ಅಲಿಗಢ್‌ನ ಕೊಯಿಲ್ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿ ಅಜ್ಜು ಇಶಾಕ್, ಲಖನೌದಿಂದ ದೂರವಾಣಿ ಕರೆ ಮೂಲಕ ತಮ್ಮ ಉಮೇದುವಾರಿಕೆಯನ್ನು ತಿಳಿಸಲಾಗಿದೆ ಎಂದು ಹೇಳಿದರು. ಅಡಗಿಸಿಡುವುದಕ್ಕೆ ಏನಿದೆ? ಎಂದು ಹೇಳಿದ ಇಶಾಕ್,ಅಭ್ಯರ್ಥಿಯ ಹೆಸರುಗಳು ಹೇಗಾದರೂ ಸಾರ್ವಜನಿಕವಾಗುತ್ತವೆ. ಬಿಜೆಪಿಯವರೇ ತಮ್ಮ ಅಸಾಮರ್ಥ್ಯವನ್ನು ಅಡಗಿಸಲು ಬಯಸುತ್ತಿದ್ದಾರೆ,” ಎಂದು ತಿರುಗೇಟು ನೀಡಿದರು.

ಪಶ್ಚಿಮ ಉತ್ತರ ಪ್ರದೇಶದ ಹಾಪುರ್‌ನಲ್ಲಿ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ದೇವೇಂದ್ರ ಜಖಡ್, “ನಮ್ಮ ಪಟ್ಟಿಗಳಿಗೂ ಬಿಜೆಪಿಗೂ ಏನು ಸಂಬಂಧ? ಬಿಜೆಪಿಯು ಚುನಾವಣೆಯನ್ನು ಧ್ರುವೀಕರಣಗೊಳಿಸಲು ಬಯಸುತ್ತದೆ ಆದರೆ ನಾವು ಅವರಿಗೆ ಹೆದರುವುದಿಲ್ಲ ಎಂದು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಪಂಜಾಬ್‌: 65 ಸ್ಥಾನಗಳಲ್ಲಿ ಬಿಜೆಪಿ, 37 ಸ್ಥಾನಗಳಲ್ಲಿ ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಸ್ಪರ್ಧೆ

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ