AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yogi Adityanath ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಯೋಗಿ ಸರ್ಕಾರ: ಜನತೆಗೆ ಧನ್ಯವಾದ ತಿಳಿಸಿದ ಆದಿತ್ಯನಾಥ

ನಮ್ಮನ್ನು ಬಹುಮತದಿಂದ ಗೆಲ್ಲಿಸಿದ ಜನರಿಗೆ ನಾನು ಕೃತಜ್ಞನಾಗಿದ್ದೇನೆ.ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಾವು ಯುಪಿ, ಗೋವಾ, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಸರ್ಕಾರಗಳನ್ನು ರಚಿಸುತ್ತೇವೆ ಎಂದು ಯೋಗಿ ಆದಿತ್ಯನಾಥ ಹೇಳಿದ್ದಾರೆ.

Yogi Adityanath ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಯೋಗಿ ಸರ್ಕಾರ: ಜನತೆಗೆ ಧನ್ಯವಾದ ತಿಳಿಸಿದ ಆದಿತ್ಯನಾಥ
ಯೋಗಿ ಆದಿತ್ಯನಾಥ
TV9 Web
| Edited By: |

Updated on:Mar 10, 2022 | 6:33 PM

Share

ಲಖನೌ: ಉತ್ತರ ಪ್ರದೇಶ ವಿಧಾನಭಾ ಚುನಾವಣೆಯಲ್ಲಿ(UPPolls) ಬಿಜೆಪಿ (BJP) ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ ಶುರುವಾಗಿದೆ. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಸಿಎಂ ಯೋಗಿ ಆದಿತ್ಯನಾಥ (Yogi Adityanath) ಭಾಷಣ ಮಾಡಿದ್ದು ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಚಂಡ ಬಹುಮತ ಸಿಕ್ಕಿದೆ. ಬಿಜೆಪಿ ಬೆಂಬಲಿಸಿದ ಉತ್ತರ ಪ್ರದೇಶದ ಜನತೆಗೆ ಧನ್ಯವಾದ, ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ. ರಾಜ್ಯದಲ್ಲಿ 7 ಹಂತದ ಚುನಾವಣೆ ಶಾಂತಿಯುತವಾಗಿ ನಡೆದಿದೆ. ಇದು ಒಂದು ದೊಡ್ಡ ಪೂರ್ವನಿದರ್ಶನವನ್ನು ತೋರಿಸುತ್ತದೆ.ರಾಜ್ಯದ ವೈಶಾಲ್ಯತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರೂ ಉತ್ತರ ಪ್ರದೇಶದ  ಮೇಲೆ ಕಣ್ಣಿಟ್ಟಿದ್ದರು. ನಮ್ಮನ್ನು ಬಹುಮತದಿಂದ ಗೆಲ್ಲಿಸಿದ ಜನರಿಗೆ ನಾನು ಕೃತಜ್ಞನಾಗಿದ್ದೇನೆ. ಲಖನೌದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ನಾಯಕರೊಂದಿಗೆ ವೇದಿಕೆಯಲ್ಲಿ ಬಿಜೆಪಿ ವಿಜಯವನ್ನು ಆಚರಿಸಿದ ನಂತರ,  ಯೋಗಿ ಆದಿತ್ಯನಾಥ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದರು. ಇಂದು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಯುಪಿ, ಉತ್ತರಾಖಂಡ, ಮಣಿಪುರ ಮತ್ತು ಗೋವಾದಲ್ಲಿ ಜನಾದೇಶ ಪಡೆದಿದೆ. ಈ ನಾಲ್ಕು ರಾಜ್ಯಗಳಲ್ಲಿ ಜನರು ನಮಗೆ ಆಶೀರ್ವಾದ ನೀಡಿದ್ದಾರೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಾವು ಯುಪಿ, ಗೋವಾ, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಸರ್ಕಾರಗಳನ್ನು ರಚಿಸುತ್ತೇವೆ. ಉತ್ಸಾಹದ ನಡುವೆ, ನಾವು ಗಮನಹರಿಸಬೇಕು ನಾವು ಕೋವಿಡ್ ವಿರುದ್ಧ ಹೋರಾಡುತ್ತಿದ್ದಾಗ, ಅವರು (ವಿರೋಧ) ನಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದರು.ನಮ್ಮನ್ನು ಗೆಲ್ಲಿಸುವ ಮೂಲಕ ಜನರು ಮತ್ತೊಮ್ಮೆ ರಾಷ್ಟ್ರೀಯತೆ, ಉತ್ತಮ ಆಡಳಿತಕ್ಕಾಗಿ ಮತ ಹಾಕಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಕೆಲಸ ಮಾಡುವುದನ್ನು ಮುಂದುವರಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಯೋಗಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ ಎಂ-ವೈ ಸಮೀಕರಣ; ಭರವಸೆಗಳು ಜನಮನ ಗೆದ್ದದ್ದು ಹೇಗೆ?

Published On - 6:12 pm, Thu, 10 March 22

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ