AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಲವು ಅಂಚೆ ಮತಪತ್ರಗಳಿಗೆ ಗುರುತು ಹಾಕಿ, ಸಹಿ ಮಾಡಿದ ಒಬ್ಬ ಮತದಾರ; ಕಾಂಗ್ರೆಸ್​​ನಿಂದ ಟ್ವೀಟ್​

ಉತ್ತರಾಖಂಡ್​​ ವಿಧಾನಸಭೆ ಪ್ರತಿಪಕ್ಷ ನಾಯಕ ಪ್ರೀತಮ್​ ಸಿಂಗ್​ ಕೂಡ ಇದೇ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಸೇನಾ ಕೇಂದ್ರದಲ್ಲಿರುವ ವ್ಯಕ್ತಿಯೊಬ್ಬರು ಹಲವು ಮತಪತ್ರಗಳಿಗೆ ಗುರುತು ಮಾಡಿ, ಸಹಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Video: ಹಲವು ಅಂಚೆ ಮತಪತ್ರಗಳಿಗೆ ಗುರುತು ಹಾಕಿ, ಸಹಿ ಮಾಡಿದ ಒಬ್ಬ ಮತದಾರ; ಕಾಂಗ್ರೆಸ್​​ನಿಂದ ಟ್ವೀಟ್​
ಮತಪತ್ರಗಳಿಗೆ ಒಬ್ಬರೇ ಸಹಿ ಹಾಕುತ್ತಿರುವ ಫೋಟೋ
TV9 Web
| Edited By: |

Updated on: Feb 23, 2022 | 5:10 PM

Share

ಉತ್ತರಾಖಂಡ್​ ಕಾಂಗ್ರೆಸ್ ನಾಯಕ ಹರೀಶ್​ ರಾವತ್ (Harish Rawat) ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಶೇರ್​ ಮಾಡಿದ್ದಾರೆ. ಅದೊಂದು ಸೇನಾ ಕೇಂದ್ರ. ಅಲ್ಲೊಬ್ಬ ಮತದಾರ ಹಲವು ಅಂಚೆ ಮತಪತ್ರಗಳಿಗೆ (ಪೋಸ್ಟಲ್​ ಬ್ಯಾಲೆಟ್​ ಪೇಪರ್​)ಗುರುತು ಮತ್ತು ಸಹಿ ಮಾಡುವುದನ್ನು ನೋಡಬಹುದಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಹರೀಶ್​ ರಾವತ್​ ವಿಡಿಯೋವನ್ನು ಶೇರ್​ ಮಾಡಿಕೊಂಡು, ನಾನಿದನ್ನು ನಿಮ್ಮೆಲ್ಲರ ಗಮನಕ್ಕೆ ಇರಲಿ ಎಂದು ಶೇರ್​ ಮಾಡುತ್ತಿದ್ದೇನೆ. ಇಲ್ಲಿ ಒಬ್ಬನೇ ವ್ಯಕ್ತಿ ಹಲವು ಮತಪತ್ರಗಳಲ್ಲಿ ಪಕ್ಷಕ್ಕೆ ಗುರುತು ಹಾಕುವುದನ್ನು ಮತ್ತು ಸಹಿ ಹಾಕುವುದನ್ನು ನೋಡಬಹುದು. ಅಂದರೆ ಬೇರೆಯವರ ಹೆಸರಿಗೆ ಕಳಿಸಲಾದ ಮತಪತ್ರಕ್ಕೂ ಈ ವ್ಯಕ್ತಿಯೇ ಗುರುತು ಮಾಡುತ್ತಿದ್ದಾರೆ. ಅವರಂತೆಯೇ ಸಹಿಯನ್ನೂ ಮಾಡುತ್ತಿದ್ದಾರೆ. ಚುನಾವಣಾ ಆಯೋಗ ಇದನ್ನು ಗಮನಿಸಿ, ಕ್ರಮ ತೆಗೆದುಕೊಳ್ಳುತ್ತದೆಯೇ ಎಂದು ಕೇಳಿದ್ದಾರೆ.

ಈ ವಿಡಿಯೋ ಬಗ್ಗೆ ಮಾಧ್ಯಮದವರು ಪ್ರಶ್ನೆ ಎತ್ತಿದರೆ ಅದು ಯಾರು ಕಳಿಸಿದ್ದು, ಎಲ್ಲಿ ಸಿಕ್ಕಿದ್ದು ಎಂಬ ಮಾಹಿತಿಯನ್ನು ಹಂಚಿಕೊಳ್ಳಲು ಹರೀಶ್​ ರಾವತ್ ಅವರ ವಕ್ತಾರ ಸುರೇಂದ್ರ ಕುಮಾರ್ ನಿರಾಕರಿಸಿದ್ದಾರೆ. ಆದರೆ ಇದು ಉತ್ತರಾಖಂಡ್​​ನಲ್ಲಿ ನಡೆದ ಘಟನೆಯ ವಿಡಿಯೋ ಎಂದು ಹೇಳಿದ್ದಾರೆ. ವಿಡಿಯೋ ಬಗ್ಗೆ ಕಾಂಗ್ರೆಸ್​ ಪಕ್ಷ ಚುನಾವಣಾ ಆಯೋಗಕ್ಕೆ ಯಾವುದೇ ದೂರು ನೀಡಿಲ್ಲ. ಆದರೆ ಈ ಬಗ್ಗೆ ಆಯೋಗವೇ ಸುಮೊಟೊ ಪ್ರಕರಣ ಕೈಗೆತ್ತಿಕೊಳ್ಳಬಹುದು ಎಂದೂ ಹೇಳಿದ್ದಾರೆ.

ಉತ್ತರಾಖಂಡ್​​ ವಿಧಾನಸಭೆ ಪ್ರತಿಪಕ್ಷ ನಾಯಕ ಪ್ರೀತಮ್​ ಸಿಂಗ್​ ಕೂಡ ಇದೇ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಸೇನಾ ಕೇಂದ್ರದಲ್ಲಿರುವ ವ್ಯಕ್ತಿಯೊಬ್ಬರು ಹಲವು ಮತಪತ್ರಗಳಿಗೆ ಗುರುತು ಮಾಡಿ, ಸಹಿ ಹಾಕುತ್ತಿದ್ದಾರೆ. ಇದು ಪ್ರಜಾಪ್ರಭುತ್ವವನ್ನೇ ಅಣುಕಿಸಿದಂತಿದೆ. ತನಗೆ ಯಾವ ಪಕ್ಷ ಬೇಕೋ, ಅದೇ ಪಕ್ಷದ ಎದುರು ಎಲ್ಲ ಮತಪತ್ರಗಳಲ್ಲೂ ಗುರುತು ಹಾಕಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್​​ನದ್ದೇ ಟ್ರಿಕ್​ !:

ಹೀಗೆಂದು ಬಿಜೆಪಿ ಆರೋಪ ಮಾಡಿದೆ. ವಿಡಿಯೋಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಉತ್ತರಾಖಂಡ ಪ್ರಾದೇಶಿಕ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್​ ಚೌಹಾಣ್​, ಜನರನ್ನು ತಪ್ಪುದಾರಿಗೆ ಎಳೆಯಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್​ ಮನದಟ್ಟು ಮಾಡಿಕೊಂಡಿದೆ. ಈ ಹಿಂದೆ ಇವಿಎಂ ದುರ್ಬಳಕೆ ಬಗ್ಗೆ ಮಾತನಾಡುತ್ತಿತ್ತು. ಇದೀಗ ಮತಪತ್ರಗಳ ಬಗ್ಗೆಯೂ ತಕರಾರು ಎತ್ತುತ್ತಿದೆ. ಇವೆಲ್ಲ ಕಾಂಗ್ರೆಸ್​ನ ಹತಾಶೆಯ ತಂತ್ರಗಳಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ; ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವ ಮಾಹಿತಿ

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು