AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಬಂಧಿಯಾಗಿದೆ, ನಾನು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇನೆ ಎಂದ ಹರೀಶ್ ರಾವತ್; ಉತ್ತರಾಖಂಡ ಕಾಂಗ್ರೆಸ್​​ನಲ್ಲಿ ಎದುರಾಯಿತೇ ಸಂಕಷ್ಟ?

Harish Rawat ಯಾರ ಆದೇಶದ ಮೇರೆಗೆ ನಾನು ಈಜಬೇಕೋ ಆ ಪ್ರತಿನಿಧಿಗಳು ನನ್ನ ಕೈ-ಕಾಲುಗಳನ್ನು ಕಟ್ಟುತ್ತಿದ್ದಾರೆ. ಹಲವಾರು ಸಂದರ್ಭಗಳಲ್ಲಿ, ನಾನು ಸಾಕಷ್ಟು ಈಜಿದ್ದೇನೆ ಮತ್ತು ಇದು ವಿಶ್ರಾಂತಿ ಸಮಯ ಎಂದು ನನ್ನ ಮನಸ್ಸಿಗೆ ಅನಿಸಿತ್ತದೆ. ಆಗ ಇನ್ನೊಂದು ಧ್ವನಿ ಏಳುತ್ತದೆ...

ಕೈ ಬಂಧಿಯಾಗಿದೆ, ನಾನು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇನೆ ಎಂದ ಹರೀಶ್ ರಾವತ್; ಉತ್ತರಾಖಂಡ ಕಾಂಗ್ರೆಸ್​​ನಲ್ಲಿ ಎದುರಾಯಿತೇ ಸಂಕಷ್ಟ?
ಹರೀಶ್ ರಾವತ್
TV9 Web
| Edited By: |

Updated on: Dec 22, 2021 | 6:22 PM

Share

ಡೆಹ್ರಾಡೂನ್: ಉತ್ತರಾಖಂಡದ (Uttarakhand ) ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಚುನಾವಣಾ ಪ್ರಚಾರದ ಮುಖ್ಯಸ್ಥ ಹರೀಶ್ ರಾವತ್(Harish Rawat) ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ಪಕ್ಷದ ಸಂಘಟನೆಯು ತನಗೆ ಸಹಾಯ ಮಾಡುವ ಬದಲು ಅಡ್ಡಿಪಡಿಸುತ್ತಿದೆ ಎಂದು ಹೇಳಿದ್ದಾರೆ. ಉತ್ತರಾಖಂಡದಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆಗಳು (Assembly elections) ನಡೆಯಲಿದ್ದು ಈ ಟ್ವೀಟ್ ಹಲವಾರು ಊಹಾಪೋಹಗಳನ್ನು ಹುಟ್ಟುಹಾಕಿದೆ. ಫೇಸ್‌ಬುಕ್ ಪೋಸ್ಟ್‌ ಮತ್ತು ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಮಾಡಿದ ಸರಣಿ ಟ್ವೀಟ್‌ಗಳಲ್ಲಿ ರಾವತ್ ಅವರು “ಅಧಿಕಾರವು ಚುನಾವಣಾ ಸಾಗರದಲ್ಲಿ ಹಲವಾರು ಮೊಸಳೆಗಳನ್ನು ಬಿಟ್ಟದೆ. ನಾನು ಈಜಲೇ ಬೇಕು. ಪ್ರತಿನಿಧಿಗಳ ಆದೇಶದ ಮೇರೆಗೆ ನಾನು ಈಜುತ್ತಿದ್ದು ನನ್ನ ಕೈಕಟ್ಟಿ ಹಾಕಲಾಗಿದೆ ಎಂದಿದ್ದಾರೆ.  ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ತಮ್ಮ ಪೋಸ್ಟ್‌ಗಳ ಬಗ್ಗೆ ವಿವರಣೆ ನೀಡಲು ನಿರಾಕರಿಸಿದರು. ಚುನಾವಣೆಯ ಸಾಗರದಲ್ಲಿ ನಾನು ಹೇಗೆ ಈಜಬೇಕು ಎಂಬುದು ವಿಚಿತ್ರವಾಗಿದೆ. ಸಹಾಯಕ್ಕಾಗಿ ತನ್ನ ತೋಳುಗಳನ್ನು ಚಾಚುವ ಬದಲು, ಸಂಘಟನೆಯು ನನ್ನನ್ನು ನಿರ್ಲಕ್ಷಿಸುತ್ತಿದೆ ಅಥವಾ ನಕಾರಾತ್ಮಕ ಪಾತ್ರವನ್ನು ವಹಿಸುತ್ತಿದೆ. ನಾಯಕತ್ವವು ನಾನು ಈಜಬೇಕಾದ ಸಾಗರದಲ್ಲಿ ಹಲವಾರು ಮೊಸಳೆಗಳನ್ನು ಬಿಟ್ಟಿದೆ ಎಂದು ರಾವತ್ ಟ್ವೀಟ್ ಮಾಡಿದ್ದಾರೆ.

ಯಾರ ಆದೇಶದ ಮೇರೆಗೆ ನಾನು ಈಜಬೇಕೋ ಆ ಪ್ರತಿನಿಧಿಗಳು ನನ್ನ ಕೈ-ಕಾಲುಗಳನ್ನು ಕಟ್ಟುತ್ತಿದ್ದಾರೆ. ಹಲವಾರು ಸಂದರ್ಭಗಳಲ್ಲಿ, ನಾನು ಸಾಕಷ್ಟು ಈಜಿದ್ದೇನೆ ಮತ್ತು ಇದು ವಿಶ್ರಾಂತಿ ಸಮಯ ಎಂದು ನನ್ನ ಮನಸ್ಸಿಗೆ ಅನಿಸಿತ್ತದೆ. ಆಗ ಇನ್ನೊಂದು ಧ್ವನಿ ಏಳುತ್ತದೆ,  ನೀನು ಎಂದಿಗೂ ಅಸಹಾಯಕನಾಗಿರಬೇಡ ಮತ್ತು ಓಡಿಹೋಗಬೇಡ ಎಂದು ಕೇಳುತ್ತದೆ. ನಾನು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇನೆ. ಹೊಸ ವರ್ಷ ನನ್ನ ದಾರಿಯನ್ನು ತೋರಿಸಲಿ. ಭಗವಾನ್ ಕೇದಾರನಾಥ ನನಗೆ ದಾರಿ ತೋರಿಸುತ್ತಾನೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ಇನ್ನೊಂದು ಟ್ವೀಟ್ ಮಾಡಿದ್ದಾರೆ.

ಪೋಸ್ಟ್ ಮಾಡಿದ ನಿಮಿಷಗಳ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾವತ್ (73) ಅವರು ಪೋಸ್ಟ್‌ನಲ್ಲಿ ಹೇಳಿದ ಎಲ್ಲದರ ಬಗ್ಗೆ ನಂತರ ಮಾತನಾಡುವುದಾಗಿ ಹೇಳಿದರು. “ರಾಜ್ಯದಲ್ಲಿ ಉದ್ಯೋಗ ಸಮಸ್ಯೆ ಮತ್ತು ನಿರುದ್ಯೋಗಿಗಳು ಹೇಗೆ ನೋವಿನಲ್ಲಿದ್ದಾರೆ ಎಂಬುದರ ಕುರಿತು ಇಂದು ಪತ್ರಿಕಾಗೋಷ್ಠಿ ನಡೆದಿತ್ತು. ಇದಾದ ನಂತರ ನಾನು ಟ್ವೀಟ್‌ಗಳಲ್ಲಿ ಹೇಳಿರುವ ವಿಷಯಗಳ ಬಗ್ಗೆ ಇನ್ನೊಮ್ಮೆ ಮಾತನಾಡುತ್ತೇನೆ ಎಂದು ರಾವತ್ ಹೇಳಿದ್ದಾರೆ.

ಬಹುಕಾಲದಿಂದ ಗುಂಪುಗಾರಿಕೆಯಿಂದ ಸುಸ್ತಾಗಿರುವ ಉತ್ತರಾಖಂಡದಲ್ಲಿ ಕಾಂಗ್ರೆಸ್‌ಗೆ ರಾವತ್ ಅತ್ಯುತ್ತಮ ಭರವಸೆ ಎಂದು ಪರಿಗಣಿಸಲಾಗಿದೆ. ಕಾಂಗ್ರೆಸ್ ಪಕ್ಷವು ಚುನಾವಣೆಗೆ ಒಳಪಟ್ಟಿರುವ ರಾಜ್ಯಕ್ಕೆ ತನ್ನ ಸಿಎಂ ಮುಖವನ್ನು ಇನ್ನೂ ಘೋಷಿಸದಿದ್ದರೂ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ನ್ನು ರಾವತ್‌ ಮುನ್ನಡೆಸಲಿದ್ದಾರೆ ಎಂದು ಪಕ್ಷದ ಅನೇಕರು ನಂಬಿದ್ದಾರೆ.

‘ಉತ್ತರಾಖಂಡಿಯತ್’ ಅಥವಾ ಉತ್ತರಾಖಂಡದ ಜೋಷ್ ಇರುವ ರಾವತ್ ಪ್ರಾರಂಭಿಸಿದ ಸಂಭಾಷಣೆಯು ಪಕ್ಷಕ್ಕೆ ಸಹಾಯ ಮಾಡುತ್ತದೆ ಎಂದು ಕಾಂಗ್ರೆಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಥುರಾ ದತ್ ಜೋಶಿ ಇತ್ತೀಚೆಗೆ ಹೇಳಿದ್ದಾರೆ.

“ಹರೀಶ್ ರಾವತ್ ಅವರು ರಾಜ್ಯದಲ್ಲಿ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ ಮತ್ತು ಅವರು ರಾಜ್ಯದಲ್ಲಿ ತಮ್ಮ ವೈಯಕ್ತಿಕ ಮತಗಳಲ್ಲಿ ಸುಮಾರು 7 ರಿಂದ 10 ಪ್ರತಿಶತದಷ್ಟು ಹೊಂದಿದ್ದಾರೆ” ಎಂದು ಜೋಶಿ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಇತ್ತೀಚಿನ ಸಂವಾದದಲ್ಲಿ ಹೇಳಿದ್ದಾರೆ. “ನಾಳೆ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ಮುಖ್ಯವಲ್ಲ, ಅದು ಪಕ್ಷವು ನಿರ್ಧರಿಸಬೇಕಾದ ವಿಷಯ, ಆದರೆ ಈಗ ಮತ ಅವರಿಗೆ ಇರುತ್ತದೆ. ಇದು ಹೆಚ್ಚು ಮಹತ್ವದ್ದಾಗಿದೆ. ಹರೀಶ್ ರಾವತ್ ಅವರ ವಯಸ್ಸಿನ ಕಾರಣದಿಂದಾಗಿ ಇದು ಕೊನೆಯ ಚುನಾವಣೆಯಾಗಿರಬಹುದು ಎಂದು ಮತದಾರರಿಗೆ ತಿಳಿದಿರುವುದರಿಂದ ಇದು ಹೆಚ್ಚು ಮಹತ್ವದ್ದಾಗಿದೆ ಎಂದು ಜೋಶಿ ಹೇಳಿದರು.

ಇದನ್ನೂ ಓದಿ: Uttar Pradesh Election 2022: ದೀವಾರ್ ಸಿನಿಮಾ ಡೈಲಾಗ್​​ನಂತೆ ಮೇರೆ ಪಾಸ್ ಬಹನೇ ಹೈ ಎಂದ ಪ್ರಿಯಾಂಕಾ ಗಾಂಧಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ