AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ನಲ್ಲಿ ಪ್ರಧಾನಿ ಮೋದಿ V/S ರಾಹುಲ್ ಗಾಂಧಿ; ಚುನಾವಣಾ ಪ್ರಚಾರದ ಹೊತ್ತಲ್ಲಿ ಬಿಪಿನ್​ ರಾವತ್​ರನ್ನು ಸ್ಮರಿಸಿದ ಪ್ರಧಾನಮಂತ್ರಿ

ಇನ್ನೊಂದೆಡೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡ ಇಂದು ಉತ್ತರಾಖಂಡ್​ನಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಹರಿದ್ವಾರ ಜಿಲ್ಲೆಯ ಮಂಗಳೌರ್​​ನಲ್ಲಿ ರ್ಯಾಲಿ ನಡೆಸಿದ ರಾಹುಲ್ ಗಾಂಧಿ ನಾನು ಪ್ರಧಾನಿ ಮೋದಿಗೆ ಹೆದರುವುದಿಲ್ಲ ಎಂದರು.

ಉತ್ತರಾಖಂಡ್​​ನಲ್ಲಿ ಪ್ರಧಾನಿ ಮೋದಿ V/S ರಾಹುಲ್ ಗಾಂಧಿ; ಚುನಾವಣಾ ಪ್ರಚಾರದ ಹೊತ್ತಲ್ಲಿ ಬಿಪಿನ್​ ರಾವತ್​ರನ್ನು ಸ್ಮರಿಸಿದ ಪ್ರಧಾನಮಂತ್ರಿ
ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
TV9 Web
| Edited By: |

Updated on:Feb 10, 2022 | 7:25 PM

Share

ಫೆ.14ರಂದು ಉತ್ತರಾಖಂಡ್​ನಲ್ಲಿ ವಿಧಾನಸಭೆ ಚುನಾವಣೆ (Uttarakhand Election 2022) ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಲ್ಲಿ ಚುನಾವಣಾ ಪ್ರಚಾರ ನಡೆಸಿದರು, ಉತ್ತರಾಖಂಡ್​​ನ ಶ್ರೀನಗರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಲಿಕಾಪ್ಟರ್​ ದುರಂತದಲ್ಲಿ ಮಡಿದ ಸಿಡಿಎಸ್ ಬಿಪಿನ್​ ರಾವತ್​ರನ್ನು ನೆನಪಿಸಿಕೊಂಡರು. ಹಾಗೇ, ಪ್ರತಿಪಕ್ಷ ಕಾಂಗ್ರೆಸ್​ ಬಿಪಿನ್​ ರಾವತ್ ಹೆಸರಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ. ಅದಕ್ಕೆ ತಕ್ಕ ಶಾಸ್ತಿ ಮಾಡಬೇಕು. ಈ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್​ಗೆ ಪಾಠ ಕಲಿಸಬೇಕು ಎಂದು ಹೇಳಿದರು. 

ಹಿಂದೆ ಬಿಪಿನ್​ ರಾವತ್​ ನೇತೃತ್ವದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆದಾಗ ಕಾಂಗ್ರೆಸ್ ಅದನ್ನು ಅನುಮಾನಿಸಿತ್ತು. ಈ ಮೂಲಕ ಬಿಪಿನ್​ ರಾವತ್​ರಿಗೆ ಅವಮಾನ ಮಾಡಿತ್ತು.  ಆದರೆ ಈಗ ಅವರ ಹೆಸರು ಬಳಸಿಕೊಂಡು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಹೇಳಿದ ಪ್ರಧಾನಿ ಮೋದಿ,  ಸಿಡಿಎಸ್ ಆಗಿದ್ದ ರಾವತ್​ ಅವರು ಪೌರಿ ಗರ್ವಾಲ್​​ನ ಧೀರ ಪುತ್ರ.  ಉತ್ತರಾಖಂಡ್​ ಜನರಿಗೆ ಪರ್ವತದಷ್ಟು ಧೈರ್ಯ ಮಾತ್ರವಲ್ಲ, ಹಿಮಾಲಯದಷ್ಟು ಉನ್ನತವಾದ ಚಿಂತನೆಯನ್ನು ಹೊಂದಿರುತ್ತಾರೆ ಎಂದು ತೋರಿಸಿಕೊಟ್ಟವರು ಎಂದು ಹೇಳಿದರು. ಹಾಗೇ, ಉತ್ತರಾಖಂಡ್ ಅಭಿವೃದ್ಧಿಗಾಗಿ ಕೇಂದ್ರ ಬಿಜೆಪಿ ಮತ್ತು ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತಾಪಿಸಿದರು.

ನನಗೆ ಪ್ರಧಾನಿ ಮೋದಿಯವರ ಬಗ್ಗೆ ಯಾವ ಭಯವೂ ಇಲ್ಲ: ರಾಹುಲ್ ಗಾಂಧಿ

ಇನ್ನೊಂದೆಡೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡ ಇಂದು ಉತ್ತರಾಖಂಡ್​ನಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಹರಿದ್ವಾರ ಜಿಲ್ಲೆಯ ಮಂಗಳೌರ್​​ನಲ್ಲಿ ರ್ಯಾಲಿ ನಡೆಸಿದ ರಾಹುಲ್ ಗಾಂಧಿ,  ಪ್ರಧಾನಿ ಮೋದಿಯವರು ಇತ್ತೀಚೆಗೆ ಒಂದು ಸಂದರ್ಶನ ಕೊಟ್ಟಿದ್ದಾರೆ. ಅದರಲ್ಲಿ ರಾಹುಲ್ ಗಾಂಧಿಯವರು ಮಾತು ಕೇಳುವುದಿಲ್ಲ ಎಂದಿದ್ದಾರೆ. ನಾನ್ಯಾಕೆ ಅವರ ಮಾತು ಕೇಳಬೇಕು. ನಾನು ಅವರ ಮಾತನ್ನು ಕೇಳುವುದಿಲ್ಲ ಎಂಬುದು ಸತ್ಯ ಕೂಡ. ನನಗೆ ಅವರ ಬಗ್ಗೆಯಾಗಲೀ, ಅವರು ಉಪಯೋಗಿಸುವ ಅಸ್ತ್ರಗಳಾದ ಸಿಬಿಐ, ಇಡಿ ಬಗ್ಗೆಯಾಗಲೀ ಯಾವ ಭಯವೂ ಇಲ್ಲ. ಪ್ರಧಾನಿ ಮೋದಿಯವರ ಅಹಂಕಾರ ನೋಡಿದರೆ ನನಗೆ ನಗು ಬರುತ್ತದೆ ಎಂದರು ಹೇಳಿದರು. ಅಲ್ಲದೆ, ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಮುಖ್ಯ ಕಾರಣ, ರೈತರ ಹೋರಾಟ ಮತ್ತು ಕಾಂಗ್ರೆಸ್ ಎಂದು ರಾಹುಲ್​ ಗಾಂಧಿ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಕಚೇರಿ, ಸೋನಿಯಾ ಗಾಂಧಿ ಮನೆಯ ಬಾಡಿಗೆ ಇನ್ನೂ ಪಾವತಿಯಾಗಿಲ್ಲ; ಆರ್​ಟಿಐನಲ್ಲಿ ಬಹಿರಂಗ

Published On - 7:20 pm, Thu, 10 February 22

Follow Us
Web contact
Web contact

TV9 Kannada

Read More
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ