AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ನಲ್ಲಿ ಪ್ರಧಾನಿ ಮೋದಿ V/S ರಾಹುಲ್ ಗಾಂಧಿ; ಚುನಾವಣಾ ಪ್ರಚಾರದ ಹೊತ್ತಲ್ಲಿ ಬಿಪಿನ್​ ರಾವತ್​ರನ್ನು ಸ್ಮರಿಸಿದ ಪ್ರಧಾನಮಂತ್ರಿ

ಇನ್ನೊಂದೆಡೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡ ಇಂದು ಉತ್ತರಾಖಂಡ್​ನಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಹರಿದ್ವಾರ ಜಿಲ್ಲೆಯ ಮಂಗಳೌರ್​​ನಲ್ಲಿ ರ್ಯಾಲಿ ನಡೆಸಿದ ರಾಹುಲ್ ಗಾಂಧಿ ನಾನು ಪ್ರಧಾನಿ ಮೋದಿಗೆ ಹೆದರುವುದಿಲ್ಲ ಎಂದರು.

ಉತ್ತರಾಖಂಡ್​​ನಲ್ಲಿ ಪ್ರಧಾನಿ ಮೋದಿ V/S ರಾಹುಲ್ ಗಾಂಧಿ; ಚುನಾವಣಾ ಪ್ರಚಾರದ ಹೊತ್ತಲ್ಲಿ ಬಿಪಿನ್​ ರಾವತ್​ರನ್ನು ಸ್ಮರಿಸಿದ ಪ್ರಧಾನಮಂತ್ರಿ
ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
TV9 Web
| Updated By: Lakshmi Hegde|

Updated on:Feb 10, 2022 | 7:25 PM

Share

ಫೆ.14ರಂದು ಉತ್ತರಾಖಂಡ್​ನಲ್ಲಿ ವಿಧಾನಸಭೆ ಚುನಾವಣೆ (Uttarakhand Election 2022) ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಲ್ಲಿ ಚುನಾವಣಾ ಪ್ರಚಾರ ನಡೆಸಿದರು, ಉತ್ತರಾಖಂಡ್​​ನ ಶ್ರೀನಗರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಲಿಕಾಪ್ಟರ್​ ದುರಂತದಲ್ಲಿ ಮಡಿದ ಸಿಡಿಎಸ್ ಬಿಪಿನ್​ ರಾವತ್​ರನ್ನು ನೆನಪಿಸಿಕೊಂಡರು. ಹಾಗೇ, ಪ್ರತಿಪಕ್ಷ ಕಾಂಗ್ರೆಸ್​ ಬಿಪಿನ್​ ರಾವತ್ ಹೆಸರಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ. ಅದಕ್ಕೆ ತಕ್ಕ ಶಾಸ್ತಿ ಮಾಡಬೇಕು. ಈ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್​ಗೆ ಪಾಠ ಕಲಿಸಬೇಕು ಎಂದು ಹೇಳಿದರು. 

ಹಿಂದೆ ಬಿಪಿನ್​ ರಾವತ್​ ನೇತೃತ್ವದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆದಾಗ ಕಾಂಗ್ರೆಸ್ ಅದನ್ನು ಅನುಮಾನಿಸಿತ್ತು. ಈ ಮೂಲಕ ಬಿಪಿನ್​ ರಾವತ್​ರಿಗೆ ಅವಮಾನ ಮಾಡಿತ್ತು.  ಆದರೆ ಈಗ ಅವರ ಹೆಸರು ಬಳಸಿಕೊಂಡು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಹೇಳಿದ ಪ್ರಧಾನಿ ಮೋದಿ,  ಸಿಡಿಎಸ್ ಆಗಿದ್ದ ರಾವತ್​ ಅವರು ಪೌರಿ ಗರ್ವಾಲ್​​ನ ಧೀರ ಪುತ್ರ.  ಉತ್ತರಾಖಂಡ್​ ಜನರಿಗೆ ಪರ್ವತದಷ್ಟು ಧೈರ್ಯ ಮಾತ್ರವಲ್ಲ, ಹಿಮಾಲಯದಷ್ಟು ಉನ್ನತವಾದ ಚಿಂತನೆಯನ್ನು ಹೊಂದಿರುತ್ತಾರೆ ಎಂದು ತೋರಿಸಿಕೊಟ್ಟವರು ಎಂದು ಹೇಳಿದರು. ಹಾಗೇ, ಉತ್ತರಾಖಂಡ್ ಅಭಿವೃದ್ಧಿಗಾಗಿ ಕೇಂದ್ರ ಬಿಜೆಪಿ ಮತ್ತು ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತಾಪಿಸಿದರು.

ನನಗೆ ಪ್ರಧಾನಿ ಮೋದಿಯವರ ಬಗ್ಗೆ ಯಾವ ಭಯವೂ ಇಲ್ಲ: ರಾಹುಲ್ ಗಾಂಧಿ

ಇನ್ನೊಂದೆಡೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡ ಇಂದು ಉತ್ತರಾಖಂಡ್​ನಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಹರಿದ್ವಾರ ಜಿಲ್ಲೆಯ ಮಂಗಳೌರ್​​ನಲ್ಲಿ ರ್ಯಾಲಿ ನಡೆಸಿದ ರಾಹುಲ್ ಗಾಂಧಿ,  ಪ್ರಧಾನಿ ಮೋದಿಯವರು ಇತ್ತೀಚೆಗೆ ಒಂದು ಸಂದರ್ಶನ ಕೊಟ್ಟಿದ್ದಾರೆ. ಅದರಲ್ಲಿ ರಾಹುಲ್ ಗಾಂಧಿಯವರು ಮಾತು ಕೇಳುವುದಿಲ್ಲ ಎಂದಿದ್ದಾರೆ. ನಾನ್ಯಾಕೆ ಅವರ ಮಾತು ಕೇಳಬೇಕು. ನಾನು ಅವರ ಮಾತನ್ನು ಕೇಳುವುದಿಲ್ಲ ಎಂಬುದು ಸತ್ಯ ಕೂಡ. ನನಗೆ ಅವರ ಬಗ್ಗೆಯಾಗಲೀ, ಅವರು ಉಪಯೋಗಿಸುವ ಅಸ್ತ್ರಗಳಾದ ಸಿಬಿಐ, ಇಡಿ ಬಗ್ಗೆಯಾಗಲೀ ಯಾವ ಭಯವೂ ಇಲ್ಲ. ಪ್ರಧಾನಿ ಮೋದಿಯವರ ಅಹಂಕಾರ ನೋಡಿದರೆ ನನಗೆ ನಗು ಬರುತ್ತದೆ ಎಂದರು ಹೇಳಿದರು. ಅಲ್ಲದೆ, ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಮುಖ್ಯ ಕಾರಣ, ರೈತರ ಹೋರಾಟ ಮತ್ತು ಕಾಂಗ್ರೆಸ್ ಎಂದು ರಾಹುಲ್​ ಗಾಂಧಿ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಕಚೇರಿ, ಸೋನಿಯಾ ಗಾಂಧಿ ಮನೆಯ ಬಾಡಿಗೆ ಇನ್ನೂ ಪಾವತಿಯಾಗಿಲ್ಲ; ಆರ್​ಟಿಐನಲ್ಲಿ ಬಹಿರಂಗ

Published On - 7:20 pm, Thu, 10 February 22

Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು