AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CISF Constable Recruitment 2022: ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಮಾಹಿತಿ; ಸಿಐಎಸ್​ಎಫ್​​ನಲ್ಲಿವೆ 1149 ಖಾಲಿ ಹುದ್ದೆಗಳು

ಅರ್ಜಿ ಸಲ್ಲಿಸಲು ಇಚ್ಛೆ ಇರುವವರು ಮಾನ್ಯತೆ ಪಡೆದ ಯಾವುದೇ ಬೋರ್ಡ್​, ಯೂನಿವರ್ಸಿಟಿಯಲ್ಲಿ 12ನೇ  ತರಗತಿ ಅಥವಾ ಅದಕ್ಕೆ ಸಮಾನ ಇನ್ಯಾವುದೇ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

CISF Constable Recruitment 2022: ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಮಾಹಿತಿ; ಸಿಐಎಸ್​ಎಫ್​​ನಲ್ಲಿವೆ 1149 ಖಾಲಿ ಹುದ್ದೆಗಳು
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Jan 29, 2022 | 5:36 PM

Share

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF-Central Industrial Security Force)ನಲ್ಲಿ ಕಾನ್​ಸ್ಟೆಬಲ್​ ಮತ್ತು ಅಗ್ನಿ ಶಾಮಕ ವಿಭಾಗದಲ್ಲಿ ಹುದ್ದೆಗಳು ಖಾಲಿ ಇದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಸಿಐಎಸ್​ಎಫ್​​ನ ಅಧಿಕೃತ ವೆಬ್​ಸೈಟ್​ cisfrectt.in. ಗೆ ಭೇಟಿ ಕೊಟ್ಟು, ಆನ್​ಲೈನ್​ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಕೊನೇ ದಿನ 2022ರ ಮಾರ್ಚ್​ 4 ಆಗಿದೆ. ಒಟ್ಟಾರೆ 1149 ಹುದ್ದೆಗಳು ಖಾಲಿ ಇರುವುದಾಗಿ ಸಿಐಎಸ್​ಎಫ್​ ತಿಳಿಸಿದೆ.  

ಅರ್ಜಿ ಸಲ್ಲಿಸಲು ಇಚ್ಛೆ ಇರುವವರು ಮಾನ್ಯತೆ ಪಡೆದ ಯಾವುದೇ ಬೋರ್ಡ್​, ಯೂನಿವರ್ಸಿಟಿಯಲ್ಲಿ 12ನೇ  ತರಗತಿ ಅಥವಾ ಅದಕ್ಕೆ ಸಮಾನ ಇನ್ಯಾವುದೇ ಶೈಕ್ಷಣಿಕ ಅರ್ಹತೆ ಪಡೆದಿರಬೇಕು. ವಿಜ್ಞಾನ ವಿಷಯ ಓದಿರಬೇಕು. 18-23ವರ್ಷದವರೇ ಅರ್ಜಿ ಸಲ್ಲಿಸಬೇಕಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿದ ಬಳಿಕ, ಅವರಿಗೆ ದೈಹಿಕ ದಕ್ಷತೆ ಪರೀಕ್ಷೆ (PET), ದೈಹಿಕ ಪ್ರಮಾಣಿತ ಪರೀಕ್ಷೆ (PST), ಒಎಂಆರ್​/ಕಂಪ್ಯೂಟರ್​  ಆಧಾರಿತ ಲಿಖಿತ  ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಬಳಿಕ ದಾಖಲೀಕರಣ ಮತ್ತು ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ. ಉಳಿದಂತೆ ಎಲ್ಲ ಮಾಹಿತಿಗಳೂ ಕೂಡ ಸಿಐಎಸ್​ಎಫ್​​ನ ವೆಬ್​​ಸೈಟ್​​ನಲ್ಲಿ ಸಿಗಲಿವೆ.

ಅರ್ಜಿ ಶುಲ್ಕವೆಷ್ಟು? ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST) ಮತ್ತು ಮಾಜಿ ಸೈನಿಕ (ESM) ವರ್ಗ ಸೇರಿ, ಮೀಸಲಾತಿ ಕೆಟೆಗರಿಯಲ್ಲಿ ಬರುವವರು ಶುಲ್ಕ ಪಾವತಿಯಿಂದ ವಿನಾಯಿತಿ ಪಡೆಯುತ್ತಾರೆ.

ಇದನ್ನೂ ಓದಿ: ಕೇವಲ 29ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕ್ರಿಕೆಟಿಗ!

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!