AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CISF Constable Recruitment 2022: ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಮಾಹಿತಿ; ಸಿಐಎಸ್​ಎಫ್​​ನಲ್ಲಿವೆ 1149 ಖಾಲಿ ಹುದ್ದೆಗಳು

ಅರ್ಜಿ ಸಲ್ಲಿಸಲು ಇಚ್ಛೆ ಇರುವವರು ಮಾನ್ಯತೆ ಪಡೆದ ಯಾವುದೇ ಬೋರ್ಡ್​, ಯೂನಿವರ್ಸಿಟಿಯಲ್ಲಿ 12ನೇ  ತರಗತಿ ಅಥವಾ ಅದಕ್ಕೆ ಸಮಾನ ಇನ್ಯಾವುದೇ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

CISF Constable Recruitment 2022: ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಮಾಹಿತಿ; ಸಿಐಎಸ್​ಎಫ್​​ನಲ್ಲಿವೆ 1149 ಖಾಲಿ ಹುದ್ದೆಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 29, 2022 | 5:36 PM

Share

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF-Central Industrial Security Force)ನಲ್ಲಿ ಕಾನ್​ಸ್ಟೆಬಲ್​ ಮತ್ತು ಅಗ್ನಿ ಶಾಮಕ ವಿಭಾಗದಲ್ಲಿ ಹುದ್ದೆಗಳು ಖಾಲಿ ಇದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಸಿಐಎಸ್​ಎಫ್​​ನ ಅಧಿಕೃತ ವೆಬ್​ಸೈಟ್​ cisfrectt.in. ಗೆ ಭೇಟಿ ಕೊಟ್ಟು, ಆನ್​ಲೈನ್​ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಕೊನೇ ದಿನ 2022ರ ಮಾರ್ಚ್​ 4 ಆಗಿದೆ. ಒಟ್ಟಾರೆ 1149 ಹುದ್ದೆಗಳು ಖಾಲಿ ಇರುವುದಾಗಿ ಸಿಐಎಸ್​ಎಫ್​ ತಿಳಿಸಿದೆ.  

ಅರ್ಜಿ ಸಲ್ಲಿಸಲು ಇಚ್ಛೆ ಇರುವವರು ಮಾನ್ಯತೆ ಪಡೆದ ಯಾವುದೇ ಬೋರ್ಡ್​, ಯೂನಿವರ್ಸಿಟಿಯಲ್ಲಿ 12ನೇ  ತರಗತಿ ಅಥವಾ ಅದಕ್ಕೆ ಸಮಾನ ಇನ್ಯಾವುದೇ ಶೈಕ್ಷಣಿಕ ಅರ್ಹತೆ ಪಡೆದಿರಬೇಕು. ವಿಜ್ಞಾನ ವಿಷಯ ಓದಿರಬೇಕು. 18-23ವರ್ಷದವರೇ ಅರ್ಜಿ ಸಲ್ಲಿಸಬೇಕಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿದ ಬಳಿಕ, ಅವರಿಗೆ ದೈಹಿಕ ದಕ್ಷತೆ ಪರೀಕ್ಷೆ (PET), ದೈಹಿಕ ಪ್ರಮಾಣಿತ ಪರೀಕ್ಷೆ (PST), ಒಎಂಆರ್​/ಕಂಪ್ಯೂಟರ್​  ಆಧಾರಿತ ಲಿಖಿತ  ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಬಳಿಕ ದಾಖಲೀಕರಣ ಮತ್ತು ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ. ಉಳಿದಂತೆ ಎಲ್ಲ ಮಾಹಿತಿಗಳೂ ಕೂಡ ಸಿಐಎಸ್​ಎಫ್​​ನ ವೆಬ್​​ಸೈಟ್​​ನಲ್ಲಿ ಸಿಗಲಿವೆ.

ಅರ್ಜಿ ಶುಲ್ಕವೆಷ್ಟು? ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST) ಮತ್ತು ಮಾಜಿ ಸೈನಿಕ (ESM) ವರ್ಗ ಸೇರಿ, ಮೀಸಲಾತಿ ಕೆಟೆಗರಿಯಲ್ಲಿ ಬರುವವರು ಶುಲ್ಕ ಪಾವತಿಯಿಂದ ವಿನಾಯಿತಿ ಪಡೆಯುತ್ತಾರೆ.

ಇದನ್ನೂ ಓದಿ: ಕೇವಲ 29ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕ್ರಿಕೆಟಿಗ!

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!