AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CISF Constable Recruitment 2022: ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಮಾಹಿತಿ; ಸಿಐಎಸ್​ಎಫ್​​ನಲ್ಲಿವೆ 1149 ಖಾಲಿ ಹುದ್ದೆಗಳು

ಅರ್ಜಿ ಸಲ್ಲಿಸಲು ಇಚ್ಛೆ ಇರುವವರು ಮಾನ್ಯತೆ ಪಡೆದ ಯಾವುದೇ ಬೋರ್ಡ್​, ಯೂನಿವರ್ಸಿಟಿಯಲ್ಲಿ 12ನೇ  ತರಗತಿ ಅಥವಾ ಅದಕ್ಕೆ ಸಮಾನ ಇನ್ಯಾವುದೇ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

CISF Constable Recruitment 2022: ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಮಾಹಿತಿ; ಸಿಐಎಸ್​ಎಫ್​​ನಲ್ಲಿವೆ 1149 ಖಾಲಿ ಹುದ್ದೆಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 29, 2022 | 5:36 PM

Share

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF-Central Industrial Security Force)ನಲ್ಲಿ ಕಾನ್​ಸ್ಟೆಬಲ್​ ಮತ್ತು ಅಗ್ನಿ ಶಾಮಕ ವಿಭಾಗದಲ್ಲಿ ಹುದ್ದೆಗಳು ಖಾಲಿ ಇದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಸಿಐಎಸ್​ಎಫ್​​ನ ಅಧಿಕೃತ ವೆಬ್​ಸೈಟ್​ cisfrectt.in. ಗೆ ಭೇಟಿ ಕೊಟ್ಟು, ಆನ್​ಲೈನ್​ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಕೊನೇ ದಿನ 2022ರ ಮಾರ್ಚ್​ 4 ಆಗಿದೆ. ಒಟ್ಟಾರೆ 1149 ಹುದ್ದೆಗಳು ಖಾಲಿ ಇರುವುದಾಗಿ ಸಿಐಎಸ್​ಎಫ್​ ತಿಳಿಸಿದೆ.  

ಅರ್ಜಿ ಸಲ್ಲಿಸಲು ಇಚ್ಛೆ ಇರುವವರು ಮಾನ್ಯತೆ ಪಡೆದ ಯಾವುದೇ ಬೋರ್ಡ್​, ಯೂನಿವರ್ಸಿಟಿಯಲ್ಲಿ 12ನೇ  ತರಗತಿ ಅಥವಾ ಅದಕ್ಕೆ ಸಮಾನ ಇನ್ಯಾವುದೇ ಶೈಕ್ಷಣಿಕ ಅರ್ಹತೆ ಪಡೆದಿರಬೇಕು. ವಿಜ್ಞಾನ ವಿಷಯ ಓದಿರಬೇಕು. 18-23ವರ್ಷದವರೇ ಅರ್ಜಿ ಸಲ್ಲಿಸಬೇಕಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿದ ಬಳಿಕ, ಅವರಿಗೆ ದೈಹಿಕ ದಕ್ಷತೆ ಪರೀಕ್ಷೆ (PET), ದೈಹಿಕ ಪ್ರಮಾಣಿತ ಪರೀಕ್ಷೆ (PST), ಒಎಂಆರ್​/ಕಂಪ್ಯೂಟರ್​  ಆಧಾರಿತ ಲಿಖಿತ  ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಬಳಿಕ ದಾಖಲೀಕರಣ ಮತ್ತು ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ. ಉಳಿದಂತೆ ಎಲ್ಲ ಮಾಹಿತಿಗಳೂ ಕೂಡ ಸಿಐಎಸ್​ಎಫ್​​ನ ವೆಬ್​​ಸೈಟ್​​ನಲ್ಲಿ ಸಿಗಲಿವೆ.

ಅರ್ಜಿ ಶುಲ್ಕವೆಷ್ಟು? ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST) ಮತ್ತು ಮಾಜಿ ಸೈನಿಕ (ESM) ವರ್ಗ ಸೇರಿ, ಮೀಸಲಾತಿ ಕೆಟೆಗರಿಯಲ್ಲಿ ಬರುವವರು ಶುಲ್ಕ ಪಾವತಿಯಿಂದ ವಿನಾಯಿತಿ ಪಡೆಯುತ್ತಾರೆ.

ಇದನ್ನೂ ಓದಿ: ಕೇವಲ 29ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕ್ರಿಕೆಟಿಗ!

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ