AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agniveer Recruitment 2023: ಅಗ್ನಿವೀರರ ನೇಮಕಾತಿ, ಆನ್​ಲೈನ್ ಅರ್ಜಿ ಸಲ್ಲಿಸಲು ಇಂದೇ ಕೊನೆಯ ಅವಕಾಶ

ಭಾರತೀಯ ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಅಗ್ನಿವೀರ್ ನೇಮಕಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇಂದು ಕೊನೆಯ ಅವಕಾಶವಾಗಿದೆ. ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳು ಈ ನೇಮಕಾತಿಗಾಗಿ ಫಾರ್ಮ್ ಅನ್ನು ಭರ್ತಿ ಮಾಡಬಹುದು.

Agniveer Recruitment 2023: ಅಗ್ನಿವೀರರ ನೇಮಕಾತಿ, ಆನ್​ಲೈನ್ ಅರ್ಜಿ ಸಲ್ಲಿಸಲು ಇಂದೇ ಕೊನೆಯ ಅವಕಾಶ
ಅಗ್ನಿವೀರರು
Follow us
ನಯನಾ ರಾಜೀವ್
|

Updated on: Mar 20, 2023 | 12:21 PM

ಭಾರತೀಯ ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಅಗ್ನಿವೀರ್ ನೇಮಕಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇಂದು ಕೊನೆಯ ಅವಕಾಶವಾಗಿದೆ. ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳು ಈ ನೇಮಕಾತಿಗಾಗಿ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಇದನ್ನು ಮಾಡಲು, ಅವರು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು, ವಿಳಾಸ joinindianarmy.nic.in ಅರ್ಜಿಗಳು ಆನ್​ಲೈನ್​ನಲ್ಲಿ ಮಾತ್ರ ಲಭ್ಯವಿದೆ. ಬೇರೆ ಯಾವುದೇ ವಿಧಾನಗಳ ಮೂಲಕ ಕಳುಹಿಸಿದ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಕೊನೆಯ ದಿನಾಂಕವನ್ನು  ವಿಸ್ತರಿಸಲಾಗಿತ್ತು ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ 2023 ಕ್ಕೆ ಮೊದಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 15 ಆಗಿತ್ತು, ನಂತರ ಅದನ್ನು ಮಾರ್ಚ್ 20, 2023 ಕ್ಕೆ ವಿಸ್ತರಿಸಲಾಯಿತು. ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ನೇರ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ, ಆದ್ದರಿಂದ ವಿಳಂಬ ಮಾಡಬೇಡಿ ಮತ್ತು ತಕ್ಷಣ ಅರ್ಜಿ ಸಲ್ಲಿಸಿ.

ಮತ್ತಷ್ಟು ಓದಿ: DHFWS Chitradurga Recruitment 2023: 12 ನರ್ಸ್, ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ

ರಕ್ಷಣಾ ಸಚಿವಾಲಯದ ಅಗ್ನಿಪಥ (Agneepath) ಯೋಜನೆ ಅಡಿ ಭಾರತೀಯ ಸೇನೆಗೆ (Indian Army) ಅಗ್ನಿ ವೀರರ (Agniveer) ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು,  ಭಾರತೀಯ ಸೇನೆಯಲ್ಲಿ ಅಗ್ನಿವೀರ್ ತಾಂತ್ರಿಕ, ಅಗ್ನಿವೀರ್ ಕ್ಲರ್ಕ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸೇನೆಯಲ್ಲಿ ಕಾರ್ಯ ನಿರ್ವಹಿಸುವ ಇಚ್ಛೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ (Online) ಮೂಲಕ ಸಲ್ಲಿಸಬಹುದಾಗಿದೆ.

ಇತರೆ ಮಾಹಿತಿ ಈ ನೇಮಕಾತಿ ಅಭಿಯಾನದ ಮೂಲಕ ಅಗ್ನಿವೀರ್ (ಸಾಮಾನ್ಯ ಕರ್ತವ್ಯ), ಅಗ್ನಿವೀರ್ (ತಾಂತ್ರಿಕ), ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್, ಅಗ್ನಿವೀರ್ ಟ್ರೇಡ್ಸ್‌ಮ್ಯಾನ್ ಇತ್ಯಾದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಹುದ್ದೆಗೆ ಅನುಗುಣವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ವಿಭಿನ್ನವಾಗಿರುತ್ತದೆ. ಕೆಲವರಿಗೆ 10ನೇ ತರಗತಿ ಉತ್ತೀರ್ಣರಾದವರು ಮಾನ್ಯತೆ ಪಡೆದ ಮಂಡಳಿಯಿಂದ ಅರ್ಜಿ ಸಲ್ಲಿಸಿದರೆ, ಕೆಲವರಿಗೆ 10+2 ಮಾದರಿಯಿಂದ 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಪ್ರತಿ ಪೋಸ್ಟ್ ಬಗ್ಗೆ ಹೆಚ್ಚು ವಿವರವಾದ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ ಸೂಚನೆಯನ್ನು ಪರಿಶೀಲಿಸುವುದು ಉತ್ತಮ. ವಯಸ್ಸಿನ ಮಿತಿಗೆ ಸಂಬಂಧಿಸಿದಂತೆ, ಈ ಹುದ್ದೆಗಳಿಗೆ ವಯೋಮಿತಿಯನ್ನು 17 ರಿಂದ 21 ವರ್ಷಗಳಿಗೆ ನಿಗದಿಪಡಿಸಲಾಗಿದೆ.

ಆಯ್ಕೆ ಹೇಗೆ ನಡೆಯಲಿದೆ, ಶುಲ್ಕ ಎಷ್ಟು? ಈ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಆನ್‌ಲೈನ್ ಲಿಖಿತ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ. ಇದು ಮೊದಲ ಹಂತವಾಗಿದ್ದು, ಉತ್ತೀರ್ಣರಾದಲ್ಲಿ ಅಭ್ಯರ್ಥಿಗಳನ್ನು ಮುಂದಿನ ಹಂತದಲ್ಲಿ ಅಂದರೆ ನೇಮಕಾತಿಯಲ್ಲಿ ಸೇರಿಸಲಾಗುತ್ತದೆ. ಎರಡೂ ಹಂತಗಳನ್ನು ದಾಟಿದವರ ಆಯ್ಕೆ ಮಾತ್ರ ಅಂತಿಮವಾಗಿರುತ್ತದೆ. ಪೂರ್ವ ಪರೀಕ್ಷೆಯು ಶಾರ್ಟ್‌ಲಿಸ್ಟ್‌ಗಾಗಿದ್ದರೂ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂ 250 ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಉದ್ಯೋಗದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ