AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agricultural Engineering Careers: ಕೃಷಿ ಎಂಜಿನಿಯರಿಂಗ್‌ನಲ್ಲಿ ಹಲವು ಉದ್ಯೋಗವಕಾಶ; ತಿಂಗಳಿಗೆ ಲಕ್ಷ ಲಕ್ಷ ಸಂಬಳ!

ಕೃಷಿ ಎಂಜಿನಿಯರಿಂಗ್ ಕ್ಷೇತ್ರವು ಉತ್ತಮ ವೃತ್ತಿಪರ ಅವಕಾಶಗಳನ್ನು ನೀಡುತ್ತದೆ. ಬಿ.ಟೆಕ್, ಎಂ.ಟೆಕ್ ಮತ್ತು ಡಿಪ್ಲೊಮಾ ಕೋರ್ಸ್‌ಗಳ ಮೂಲಕ ಈ ಕ್ಷೇತ್ರವನ್ನು ಸೇರಬಹುದು. ಐಸಿಎಆರ್, ಐಐಟಿ-ಜೆಎಮ್ ಮತ್ತು ಐಐಟಿ ಜೀಇ ಮುಂತಾದ ಪರೀಕ್ಷೆಗಳ ಮೂಲಕ ಪ್ರವೇಶ ಪಡೆಯಬಹುದು. ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಉತ್ತಮ ಸಂಬಳ ಮತ್ತು ಉದ್ಯೋಗಾವಕಾಶಗಳಿವೆ. ಶಿಕ್ಷಣ, ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳಿವೆ.

Agricultural Engineering Careers: ಕೃಷಿ ಎಂಜಿನಿಯರಿಂಗ್‌ನಲ್ಲಿ ಹಲವು ಉದ್ಯೋಗವಕಾಶ; ತಿಂಗಳಿಗೆ ಲಕ್ಷ ಲಕ್ಷ ಸಂಬಳ!
Agricultural Engineering
ಅಕ್ಷತಾ ವರ್ಕಾಡಿ
|

Updated on:Apr 04, 2025 | 12:59 PM

Share

ನೀವು ಕೃಷಿ ಕ್ಷೇತ್ರದಲ್ಲಿ ನಿಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸಿದರೆ ಕೃಷಿ ಎಂಜಿನಿಯರಿಂಗ್‌ನಲ್ಲಿ ಹಲವು ಉತ್ತಮ ವೃತ್ತಿ ಆಯ್ಕೆಗಳಿವೆ. ಈ ಕ್ಷೇತ್ರದಲ್ಲಿ ಬಿ.ಟೆಕ್, ಎಂ.ಟೆಕ್ ಮತ್ತು ಡಿಪ್ಲೊಮಾ ಕೋರ್ಸ್‌ಗಳನ್ನು ಮಾಡಿದ ನಂತರ ನೀವು ಉತ್ತಮ ಉದ್ಯೋಗಗಳನ್ನು ಪಡೆಯಬಹುದು. ಆದ್ದರಿಂದ ಕೃಷಿ ಇಂಜಿನಿಯರಿಂಗ್ ಎಂದರೇನು?, ಅರ್ಹತೆಗಳೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಕೃಷಿ ಇಂಜಿನಿಯರಿಂಗ್ ಎಂದರೇನು?

ಕೃಷಿ ಎಂಜಿನಿಯರಿಂಗ್ ಎಂಬುದು ಕೃಷಿ ಉಪಕರಣಗಳು, ಯಂತ್ರೋಪಕರಣಗಳು ಮತ್ತು ಕೃಷಿ ಪ್ರಕ್ರಿಯೆಗಳ ವಿನ್ಯಾಸ, ನಿರ್ಮಾಣ ಮತ್ತು ಸುಧಾರಣೆಯೊಂದಿಗೆ ವ್ಯವಹರಿಸುವ ಶಾಖೆಯಾಗಿದೆ. ಇದರಲ್ಲಿ, ಎಂಜಿನಿಯರ್‌ಗಳು ಕೃಷಿಯಲ್ಲಿ ಬಳಸುವ ಯಂತ್ರಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುವ ರೀತಿಯಲ್ಲಿ ವಿನ್ಯಾಸಗೊಳಿಸುತ್ತಾರೆ. ಕೃಷಿ ಎಂಜಿನಿಯರ್‌ಗಳ ಮುಖ್ಯ ಉದ್ದೇಶವೆಂದರೆ ಕೃಷಿ ವಿಧಾನಗಳು ಮತ್ತು ಉತ್ಪಾದಕತೆಯನ್ನು ಸುಧಾರಿಸುವುದು, ಇದರಿಂದ ಬೆಳೆ ಇಳುವರಿ ಹೆಚ್ಚಾಗುತ್ತದೆ ಮತ್ತು ರೈತರು ಹೆಚ್ಚಿನ ಲಾಭವನ್ನು ಪಡೆಯುತ್ತಾರೆ.

ಕೃಷಿ ಎಂಜಿನಿಯರಿಂಗ್ ಪ್ರವೇಶಕ್ಕೆ ಅರ್ಹತೆ:

ನೀವು ಕೃಷಿ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಮಾಡಲು ಬಯಸಿದರೆ, ಪಿಯುಸಿಯಲ್ಲಿ ವಿಜ್ಞಾನ (ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ) ದೊಂದಿಗೆ ಕನಿಷ್ಠ ಶೇ. 50 ಅಂಕಗಳನ್ನು ಹೊಂದಿರಬೇಕು. ಬಿ.ಟೆಕ್ ನಂತರ ನೀವು 2 ವರ್ಷಗಳ ಕೋರ್ಸ್ ಆಗಿರುವ ಎಂ.ಟೆಕ್ ಅನ್ನು ಸಹ ಮಾಡಬಹುದು. ಇದಲ್ಲದೆ, ನೀವು 10 ಮತ್ತು 12 ನೇ ತರಗತಿಯ ನಂತರ 3 ವರ್ಷಗಳ ಡಿಪ್ಲೊಮಾ ಕೋರ್ಸ್ ಅನ್ನು ಸಹ ಮಾಡಬಹುದು.

ಇದನ್ನೂ ಓದಿ
Image
IFFCO ನಲ್ಲಿ ಪದವೀಧರರಿಗೆ ಉದ್ಯೋಗವಕಾಶ; ತಿಂಗಳಿಗೆ 33,000 ರೂ. ಸಂಬಳ
Image
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್​​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
Image
ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ; ಡಿಗ್ರಿ ಕಂಪ್ಲೀಟ್ ಆಗಿದ್ರೆ ಸಾಕು
Image
ಜೂ.ಇಂಜಿನಿಯರ್ ಹುದ್ದೆಗೆ ನೇಮಕಾತಿ; ಮಾ. 8 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭ

ಕೃಷಿ ಎಂಜಿನಿಯರಿಂಗ್‌ಗೆ ಪ್ರವೇಶ ಪಡೆಯುವುದು ಹೇಗೆ?

ನೀವು ಪಿಯುಸಿಯನ್ನು ವಿಜ್ಞಾನ ವಿಭಾಗದಲ್ಲಿ ಪೂರ್ಣಗೊಳಸಿದ ಬಳಿಕ ICAR (ಭಾರತೀಯ ಕೃಷಿ ಸಂಶೋಧನಾ ಮಂಡಳಿ) ಪ್ರವೇಶ ಪರೀಕ್ಷೆ (B.Tech ಮತ್ತು M.Tech), IIT-JAM (ಭಾರತೀಯ ತಂತ್ರಜ್ಞಾನ ಸಂಸ್ಥೆ ಜಂಟಿ ಪ್ರವೇಶ ಪರೀಕ್ಷೆ) (B.Tech ಮತ್ತು M.Tech), IIT JEE (B.Tech) ನಂತಹ ವಿವಿಧ ಕೃಷಿ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಿಗೆ ಹಾಜರಾಗಬಹುದು.

ಕೃಷಿ ಎಂಜಿನಿಯರಿಂಗ್ ಕೋರ್ಸ್ ಶುಲ್ಕ:

ಕೃಷಿ ಎಂಜಿನಿಯರಿಂಗ್ ಕೋರ್ಸ್‌ನ ಶುಲ್ಕವು ಕಾಲೇಜಿನ ಪ್ರಕಾರವನ್ನು ಅವಲಂಬಿಸಿರುತ್ತದೆ. ಯುಜಿ (ಬಿ.ಟೆಕ್) ಶುಲ್ಕ ಖಾಸಗಿ ಕಾಲೇಜುಗಳಲ್ಲಿ 1 ಲಕ್ಷದಿಂದ 12.40 ಲಕ್ಷ ರೂ.ವರೆಗೆ ಮತ್ತು ಸರ್ಕಾರಿ ಕಾಲೇಜುಗಳಲ್ಲಿ 36,000 ದಿಂದ 10.58 ಲಕ್ಷ ರೂ. ವರೆಗೆ ಇರುತ್ತದೆ. ಪಿಜಿ (ಎಂ.ಟೆಕ್) ಶುಲ್ಕ ಖಾಸಗಿ ಕಾಲೇಜುಗಳಲ್ಲಿ 60,000 ದಿಂದ ₹12.50 ಲಕ್ಷದವರೆಗೆ ಮತ್ತು ಸರ್ಕಾರಿ ಕಾಲೇಜುಗಳಲ್ಲಿ 24,000 ದಿಂದ 4.44 ಲಕ್ಷದವರೆಗೆ ಇರುತ್ತದೆ. ಅದೇ ಸಮಯದಲ್ಲಿ, ಡಿಪ್ಲೊಮಾ ಕೋರ್ಸ್‌ನ ಶುಲ್ಕವು ಖಾಸಗಿ ಕಾಲೇಜುಗಳಲ್ಲಿ 65,100 ರಿಂದ 1.55 ಲಕ್ಷದವರೆಗೆ ಮತ್ತು ಸರ್ಕಾರಿ ಕಾಲೇಜುಗಳಲ್ಲಿ 4,000 ರಿಂದ 33,300 ವರೆಗೆ ಇರುತ್ತದೆ.

ಇದನ್ನೂ ಓದಿ: ಪಿಯುಸಿ ಪಾಸ್ ಆದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗಾವಕಾಶ, 13 ಸಾವಿರ ಹುದ್ದೆಗಳಿಗೆ ನೇಮಕಾತಿ

ಕೃಷಿ ಎಂಜಿನಿಯರ್‌ಗಳಿಗೆ ವೃತ್ತಿ ಆಯ್ಕೆಗಳು:

ಕೃಷಿ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಹಲವು ಉದ್ಯೋಗಾವಕಾಶಗಳಿವೆ. ನೀವು ಆಹಾರ ಇಲಾಖೆ, ಸಂಶೋಧನಾ ಸಂಸ್ಥೆಗಳಂತಹ ಸರ್ಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡಬಹುದು. ಖಾಸಗಿ ಕಂಪನಿಗಳು ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಕೃಷಿ ಎಂಜಿನಿಯರ್‌ಗಳನ್ನು ನೇಮಿಸುತ್ತವೆ. ಕೃಷಿ ಎಂಜಿನಿಯರ್‌ಗಳು ಶಿಕ್ಷಣ ಕ್ಷೇತ್ರದಲ್ಲೂ ಕೆಲಸ ಮಾಡಬಹುದು.

ಕೃಷಿ ಎಂಜಿನಿಯರಿಂಗ್ ನಂತರ ಸಂಬಳ ಎಷ್ಟಿರುತ್ತದೆ?

ಕೃಷಿ ಎಂಜಿನಿಯರಿಂಗ್ ಪೂರ್ಣಗೊಂಡ ನಂತರ, ಆರಂಭಿಕ ವೇತನ ವರ್ಷಕ್ಕೆ 4 ಲಕ್ಷದಿಂದ 5 ಲಕ್ಷ ರೂ.ವರೆಗೆ ಇರಬಹುದು. 4-6 ವರ್ಷಗಳ ಅನುಭವದ ನಂತರ, ಕೃಷಿ ಎಂಜಿನಿಯರ್‌ಗಳು ವರ್ಷಕ್ಕೆ 6 ಲಕ್ಷದಿಂದ 10 ಲಕ್ಷ ಗಳಿಸಬಹುದು. ಆದ್ದರಿಂದ ಒಳ್ಳೆಯ ಸಂಬಳ ಸಿಗುವ ಕೃಷಿ ಎಂಜಿನಿಯರಿಂಗ್‌ ವೃತ್ತಿ ಜೀವನ ಆಯ್ದುಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Fri, 4 April 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ