AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Success Story: ಕಾಲನ್ನೇ ಕೈಯಾಗಿಸಿಕೊಂಡು JRF ಪರೀಕ್ಷೆ ಬರೆದು 2ನೇ ರ‍್ಯಾಂಕ್ ಪಡೆದ ಯುವತಿ

ಹುಟ್ಟಿನಿಂದಲೇ ಕೈಗಳನ್ನು ಕಳೆದುಕೊಂಡಿದ್ದ ಅಂಕಿತಾ ತೋಪಾಲ್, ತನ್ನ ಅಂಗವೈಕಲ್ಯವನ್ನು ಮೆಟ್ಟಿನಿಂತು JRF ಪರೀಕ್ಷೆ ಬರೆದು ಉತ್ತೀರ್ಣರಾಗುವುದು ಮಾತ್ರವಲ್ಲದೆ, ರಾಷ್ಟ್ರ ಮಟ್ಟದಲ್ಲಿ ಎರಡನೇ ರ‍್ಯಾಂಕ್ ಪಡೆಯುವ ಮೂಲಕ ಲಕ್ಷಾಂತರ ಯುವಪೀಳಿಗೆಗೆ ಮಾದರಿಯಾಗಿದ್ದಾಳೆ. ಅಂಕಿತಾಳ ಸಾಧನೆಯಿಂದ ಆಕೆಯ ಕುಟುಂಬ ಮಾತ್ರವಲ್ಲದೇ ಇಡೀ ಗ್ರಾಮದಲ್ಲಿ ಸಂತೋಷದ ವಾತಾವರಣ ಮೂಡಿದೆ.

Success Story: ಕಾಲನ್ನೇ ಕೈಯಾಗಿಸಿಕೊಂಡು JRF ಪರೀಕ್ಷೆ ಬರೆದು 2ನೇ ರ‍್ಯಾಂಕ್ ಪಡೆದ ಯುವತಿ
Ankita Topal
ಅಕ್ಷತಾ ವರ್ಕಾಡಿ
|

Updated on: Feb 28, 2025 | 12:41 PM

Share

ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿದ್ದರೂ ಕೂಡ ಛಲ ಬಿಡದೇ ತನ್ನ ಕಾಲನ್ನೇ ಕೈಯಾಗಿಸಿಕೊಂಡು ಪರೀಕ್ಷೆ ಬರೆದು ಎರಡನೇ ರ‍್ಯಾಂಕ್ ಪಡೆಯುವ ಇಡೀ ದೇಶಕ್ಕೆ ಮಾದರಿಯಾಗಿದ್ದಾಳೆ ಅಂಕಿತಾ ತೋಪಾಲ್. ಉತ್ತರಾಖಂಡದ ಚಮೋಲಿಯ ದಿಡೋಲಿ ಗ್ರಾಮದ ನಿವಾಸಿ ಅಂಕಿತಾ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಅಂದರೆ NTA ಆಯೋಜಿಸಿದ್ದ JRF (ಜೂನಿಯರ್ ರಿಸರ್ಚ್ ಫೆಲೋಶಿಪ್) ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಎರಡನೇ ಸ್ಥಾನ:

ವರದಿಗಳ ಪ್ರಕಾರ, ಹುಟ್ಟಿನಿಂದಲೇ ಅಂಕಿತಾಗೆ ಎರಡೂ ಕೈಗಳಿಲ್ಲ. ಬಾಲ್ಯದಿಂದಲೂ ತನ್ನ ಕಾಲನ್ನೇ ಕೈಗಳ ರೀತಿಯಲ್ಲಿ ಬಳಸುತ್ತಿದ್ದಳು. ಕಲಿಕೆಯಲ್ಲಿ ಟಾಪರ್​ ಆಗಿದ್ದ ಅಂಕಿತಾ ಕಳೆದ ಎರಡು ವರ್ಷಗಳಿಂದ JRF ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿದ್ದಳು. ತನ್ನ ಅಂಗವೈಕಲ್ಯವನ್ನು ಮೆಟ್ಟಿನಿಂತು JRF ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಮಾತ್ರವಲ್ಲದೆ, ಅಖಿಲ ಭಾರತ ಮಟ್ಟದಲ್ಲಿ ಎರಡನೇ ರ‍್ಯಾಂಕ್ ಪಡೆಯುವ ಮೂಲಕ ಲಕ್ಷಾಂತರ ಯುವಪೀಳಿಗೆಗೆ ಮಾದರಿಯಾಗಿದ್ದಾಳೆ.

ಗ್ರಾಮದಲ್ಲೇ ಸಂತೋಷದ ವಾತಾವರಣ:

ಅಂಕಿತಾ ಅವರ ತಂದೆ ಪ್ರೇಮ್ ಸಿಂಗ್ ತೋಪಾಲ್ ತೆಹ್ರಿ ಜಿಲ್ಲೆಯ ಐಟಿಐನಲ್ಲಿ ಬೋಧಕರಾಗಿ ಕೆಲಸ ಮಾಡುತ್ತಿದ್ದಾರೆ. ಅಂಕಿತಾಳ ಶಿಕ್ಷಣದ ಬಗ್ಗೆ ಹೇಳುವುದಾದರೆ, ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ (ಪಿಜಿ) ಪಡೆದಿದ್ದಾರೆ ಮತ್ತು ಈಗ ಜೆಆರ್‌ಎಫ್ ಪರೀಕ್ಷೆಯಲ್ಲಿ ಈ ಸಾಧನೆ ಮಾಡುವ ಮೂಲಕ ಇಡೀ ಉತ್ತರಾಖಂಡಕ್ಕೆ ಕೀರ್ತಿ ತಂದಿದ್ದಾರೆ. ಅಂಕಿತಾಳ ಸಾಧನೆಯಿಂದ ಆಕೆಯ ಕುಟುಂಬ ಮಾತ್ರವಲ್ಲದೇ ಇಡೀ ಗ್ರಾಮವೇ ಸಂತೋಷದಿಂದ ಮಿಂದೆದ್ದಿದೆ.

ಇದನ್ನೂ ಓದಿ: ಬಡತನವನ್ನು ಮೆಟ್ಟಿನಿಂತು ಸಹೋದರಿಯರ ಸಾಧನೆ; ಅಕ್ಕ IAS, ತಂಗಿ IPS ಅಧಿಕಾರಿ

ಜೆಆರ್‌ಎಫ್ ಪರೀಕ್ಷೆ ಎಂದರೇನು?

JRF (ಜೂನಿಯರ್ ರಿಸರ್ಚ್ ಫೆಲೋಶಿಪ್) ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಅಂದರೆ NTA ಆಯೋಜಿಸುತ್ತದೆ. ಈ ಪರೀಕ್ಷೆಯು ವರ್ಷಕ್ಕೆ ಎರಡು ಬಾರಿ ಜೂನ್ ಮತ್ತು ಡಿಸೆಂಬರ್/ಜನವರಿಯಲ್ಲಿ ನಡೆಯುತ್ತದೆ. ಇದು ರಾಷ್ಟ್ರೀಯ ಅರ್ಹತಾ ಪರೀಕ್ಷೆಯಾಗಿದ್ದು, ಇದರಲ್ಲಿ ಉತ್ತೀರ್ಣರಾದ ನಂತರ, ಅಭ್ಯರ್ಥಿಗಳು ಯಾವುದೇ ಕೇಂದ್ರೀಯ ವಿಶ್ವವಿದ್ಯಾಲಯ ಅಥವಾ ಅದರ ಅಡಿಯಲ್ಲಿರುವ ಶಿಕ್ಷಣ ಸಂಸ್ಥೆಗಳಿಂದ ತಮ್ಮ ಆಯ್ಕೆಯ ವಿಷಯದ ಕುರಿತು ಸಂಶೋಧನೆ ಪಿಎಚ್‌ಡಿ ಮಾಡಲು ಅವಕಾಶವನ್ನು ಪಡೆಯುತ್ತಾರೆ. ಈ ಸಂಶೋಧನೆಗೆ ಭಾರತ ಸರ್ಕಾರವು ಹಣವನ್ನು ಸಹ ಒದಗಿಸುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ