AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರುದ್ಯೋಗಿಗಳಿಗೆ ಸುವರ್ಣವಕಾಶ: ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ತರಬೇತಿಗೆ ಅರ್ಜಿ ಆಹ್ವಾನ

ಮೊಬೈಲ್​ ರಿಪೇರಿ ರೀತಿ ನಿರುದ್ಯೋಗಿಗಳಿಗೆ ಚಕ್ರ(ಬೈಕ್) ವಾಹನ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿ ನೀಡಲಾಗುತ್ತಿದೆ. ಹಾಗಾಗಿ ಉದ್ಯೋಗ ನಿರೀಕ್ಷೆಯಲ್ಲಿರುವ ಆಸಕ್ತ ನಿರುದ್ಯೋಗಿ ಯುವಕರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಯಾರು ಅರ್ಜಿ ಸಲ್ಲಿಸಬಹುದು? ಯಾವಾಗಿನಿಂದ ಟ್ರೈನಿಂಗ್ ಶುರುವಾಗುತ್ತೆ? ಅರ್ಹತೆ ಏನು ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ ನೋಡಿ.

ನಿರುದ್ಯೋಗಿಗಳಿಗೆ ಸುವರ್ಣವಕಾಶ: ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ತರಬೇತಿಗೆ ಅರ್ಜಿ ಆಹ್ವಾನ
ಬೈಕ್
ರಮೇಶ್ ಬಿ. ಜವಳಗೇರಾ
|

Updated on: Jul 08, 2024 | 9:58 PM

Share

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಲಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ ವಯೋಮಾನವದವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ಇದನ್ನೂ ಓದಿ: ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು. ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ : 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ