AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಪಟೂರಿನಲ್ಲಿ ವಿದ್ಯುತ್ ವ್ಯತ್ಯಯ

ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ವ್ಯಾಸಂಗ ವೇತನ ಅಥವಾ ಫೆಲೋಶಿಪ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ 28 ರವರೆಗೆ ವಿಸ್ತರಿಸಲಾಗಿದೆ.

Tumkur:  ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಪಟೂರಿನಲ್ಲಿ ವಿದ್ಯುತ್ ವ್ಯತ್ಯಯ
ತುಮಕೂರು: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಪಟೂರಿನಲ್ಲಿ ವಿದ್ಯುತ್ ವ್ಯತ್ಯಯ
TV9 Web
| Edited By: |

Updated on:Feb 22, 2022 | 8:23 AM

Share

ತುಮಕೂರು: ತುಮಕೂರು ನಗರದ (tumkur) ಮತ್ತು ಗ್ರಾಮಾಂತರ, ಮಧುಗಿರಿ ಹಾಗೂ ಕೊರಟಗೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ, ಮಿನಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗೌರವ ಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ವೆಬ್ ಸೈಟ್ anganwadirecruit.kar.nic.in ಮೂಲಕ ಮಾರ್ಚ್ 19 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಗಳಿರುವ ಗ್ರಾಮಗಳ ವಿವರ ನಿಗದಿಪಡಿಸಿದ ಹುದ್ದೆಗಳ ಸಂಖ್ಯೆ ಮತ್ತು ಇತರೆ ಎಲ್ಲ ಮಾಹಿತಿಯನ್ನು ವೆಬ್ ಸೈಟ್ ಮೂಲಕ ಪಡೆಯಬಹುದು. ಮಾಹಿತಿಗೆ ಸೂಚಿಸಿರುವ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯನ್ನ ಸಂಪರ್ಕಿಸಬಹುದು (anganwadi worker).

ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ: ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ವ್ಯಾಸಂಗ ವೇತನ ಅಥವಾ ಫೆಲೋಶಿಪ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ 28 ರವರೆಗೆ ವಿಸ್ತರಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್ ಡಿ ಅಧ್ಯಯನದಲ್ಲಿ ತೊಡಗಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ 1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂ ನೀಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಆನ್ ಲೈನ್ ಅರ್ಜಿ ಪ್ರತಿ ಮತ್ತು ಧೃಡೀಕೃತ ದಾಖಲೆಗಳನ್ನು ಮಾರ್ಚ್ 3 ಒಳಗಾಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯ ಜಿಲ್ಲಾ ಕಚೇರಿಗೆ ಸಲ್ಲಿಸಬಹುದು. ಮಾಹಿತಿಗೆ ವೆಬ್ ಸೈಟ್ http://www.bcwd.Karnataka.gov.in ಅಥವಾ ಸಹಾಯವಾಣಿ 080-8050770004 ಸಂಪರ್ಕಿಸಬಹುದು.

ವಿದ್ಯುತ್ ವ್ಯತ್ಯಯ: ತುಮಕೂರು ಜಿಲ್ಲೆ ತಿಪಟೂರು ಬೆಸ್ಕಾಂ ಉಪವಿಭಾಗ ವ್ಯಾಪ್ತಿಯ 110 11 ಕೆವಿ ನೊಣವಿನಕೆರೆ ಉಪಸ್ಥಾವರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುವುದರಿಂದ ಫೆಬ್ರವರಿ ಇಂದು ಬೆಳಿಗ್ಗೆ 10 ರಿಂದ ಸಂಜೆ 6 ರವೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ತಾಲೂಕಿನ ಕೈದಾಳ, ನಲ್ಲಿಕೆರೆ, ಗುಂಗುರಮಳೆ, ಆಲ್ಬೂರು, ಬರುಡೇಘಟ್ಟ, ನೊಣವಿನಕೆರೆ, ಮಸವನಘಟ್ಟ, ರಾಯಶೆಟ್ಟಿಹಳ್ಳಿ, ಕರೀಕೆರೆ, ಸೂಗೂರು, ವೆಂಗಟಾಪುರ, ಕೋಡಿಹಳ್ಳಿ ಪೂರಕಗಳ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಬೆಸ್ಕಾಂನೊಂದಿಗೆ ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ. -ಮಹೇಶ್, ಟಿವಿ9, ತುಮಕೂರು

Also Read: Sugarcane festival: ಆಲೆಮನೆ ಹಬ್ಬದ ಸವಿಯಲ್ಲಿ ಮಿಂದೆದ್ದ ಸ್ಥಳೀಯರು, ವಿಶೇಷ ಖಾದ್ಯಗಳ ರುಚಿ ಸವಿದು ಫುಲ್ ಕುಶ್!

Also Read: Guru: ಸಾವಿರಾರು ಸೂರ್ಯ-ಚಂದ್ರರು ಹುಟ್ಟಿ ಬಂದರೂ ಹೃದಯದೊಳಗಿನ ಅಜ್ಞಾನದ ಕತ್ತಲೆ ಹೋಗಲಾಡಿಸಲು ಸಾಧ್ಯವಿಲ್ಲ!

Published On - 8:23 am, Tue, 22 February 22

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ