AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ಆಯ್ಕೆ ಆಯೋಗ (SSC) 7565 ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪಿಯುಸಿ ಪಾಸ್​​​ ಆದವರು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 18ರಿಂದ 25 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅಕ್ಟೋಬರ್ 21ರೊಳಗೆ ಆನ್‌ಲೈನ್​​ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿದೆ.

SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ
Constable
ಅಕ್ಷತಾ ವರ್ಕಾಡಿ
|

Updated on: Sep 23, 2025 | 6:03 PM

Share

ಸಿಬ್ಬಂದಿ ಆಯ್ಕೆ ಆಯೋಗವು (SSC) ಅಧಿಕೃತ ಅಧಿಸೂಚನೆಯ ಮೂಲಕ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 21ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

SSC ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)
  • ಹುದ್ದೆಗಳ ಸಂಖ್ಯೆ: 7565
  • ಉದ್ಯೋಗ ಸ್ಥಳ: ಭಾರತದಾದ್ಯಂತ
  • ಹುದ್ದೆ ಹೆಸರು: ಕಾನ್ಸ್‌ಟೇಬಲ್
  • ಸಂಬಳ: ತಿಂಗಳಿಗೆ ರೂ.21700-69100/-

SSC ಹುದ್ದೆಯ ವಿವರಗಳು:

ಪೋಸ್ಟ್‌ಗಳ ಸಂಖ್ಯೆ:

  • ಕಾನ್‌ಸ್ಟೆಬಲ್ (ಮಹಿಳೆ) -2496
  • ಕಾನ್‌ಸ್ಟೆಬಲ್ (ಪುರುಷ)- 5069

ಅರ್ಹತಾ ವಿವರಗಳು:

  • ಶೈಕ್ಷಣಿಕ ಅರ್ಹತೆ: SSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
  • ವಯಸ್ಸಿನ ಮಿತಿ: ಸಿಬ್ಬಂದಿ ಆಯ್ಕೆ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-ಜುಲೈ-2025 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

  • ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
  • SC/ST ಅಭ್ಯರ್ಥಿಗಳು: 05 ವರ್ಷಗಳು

ಅರ್ಜಿ ಶುಲ್ಕ:

SC/ST/ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆದರೆ ಇತರ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 100ರೂ. ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ದೈಹಿಕ ಪರೀಕ್ಷೆ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಇದನ್ನೂ ಓದಿ: ಸಹಕಾರಿ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ SSC ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.(7565-Constable-Posts-Advt-Details-SSC)
  • SSC ಕಾನ್ಸ್‌ಟೇಬಲ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್​ ಮೇಲೆ ಕ್ಲಿಕ್ ಮಾಡಿ.
  • SSC ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • SSC ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿಯ ಕಾಪಿಯನ್ನು ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 21
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ 22
  • ‘ಆನ್‌ಲೈನ್ ಅರ್ಜಿ ನಮೂನೆ ತಿದ್ದುಪಡಿಗಾಗಿ ವಿಂಡೋ’ ಮತ್ತು ತಿದ್ದುಪಡಿ ಶುಲ್ಕಗಳ ಆನ್‌ಲೈನ್ ಪಾವತಿ ದಿನಾಂಕಗಳು: ಅಕ್ಟೋಬರ್ 29 ರಿಂದ 31
  • ಕಂಪ್ಯೂಟರ್ ಆಧಾರಿತ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ: ಡಿಸೆಂಬರ್ 2025/ಜನವರಿ 2026

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ