AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HAL Schools Recruitment 2024: ಮಿಸ್​ ಮಾಡ್ಕೋಬೇಡಿ! ಪ್ರತಿಷ್ಠಿತ ಹೆಚ್​ಎಎಲ್ ಶಿಕ್ಷಣ ಸಂಸ್ಥೆಗೆ ಕನ್ನಡ ಟೀಚರ್ಸ್​​ ಬೇಕಾಗಿದ್ದಾರೆ, ಇಂದೇ ಅರ್ಜಿ ಸಲ್ಲಿಸಿ ​

Bangalore HAL Schools Recruitment 2024: ಕರ್ನಾಟಕದ ಹೆಮ್ಮೆಯ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯು ತನ್ನ ಶಾಲೆಗಳಲ್ಲಿ ಬೋಧಕ ವರ್ಗ ಮತ್ತು ಬೋಧಕೇತರ ವರ್ಗಕ್ಕೆ ಅನೇಕ ನೇಮಕಾತಿಗಳನ್ನು ಮಾಡಿಕೊಳ್ಳುವುದಾಗಿ ಹೆಚ್​ಎಎಲ್ ಶಿಕ್ಷಣ ಸಂಸ್ಥೆ ಇಂದು ಜಾಹಿರಾತು ಹೊರಡಿಸಿದೆ.

HAL Schools Recruitment 2024: ಮಿಸ್​ ಮಾಡ್ಕೋಬೇಡಿ! ಪ್ರತಿಷ್ಠಿತ ಹೆಚ್​ಎಎಲ್ ಶಿಕ್ಷಣ ಸಂಸ್ಥೆಗೆ ಕನ್ನಡ ಟೀಚರ್ಸ್​​ ಬೇಕಾಗಿದ್ದಾರೆ, ಇಂದೇ ಅರ್ಜಿ ಸಲ್ಲಿಸಿ ​
ಪ್ರತಿಷ್ಠಿತ ಹೆಚ್​ಎಎಲ್ ಶಿಕ್ಷಣ ಸಂಸ್ಥೆಗೆ ಕನ್ನಡ ಟೀಚರ್ಸ್​​ ಬೇಕಾಗಿದ್ದಾರೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 06, 2024 | 10:43 AM

Share

ಬೆಂಗಳೂರು, ಮಾರ್ಚ್​​ 6: ಕರ್ನಾಟಕದ ಹೆಮ್ಮೆಯ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಸಂಸ್ಥೆಯು ತನ್ನ ಶಾಲೆಗಳಲ್ಲಿ ಬೋಧಕ ವರ್ಗ ಮತ್ತು ಬೋಧಕೇತರ ವರ್ಗಕ್ಕೆ (Bangalore HAL Schools Recruitment 2024) ಅನೇಕ ನೇಮಕಾತಿಗಳನ್ನು ಮಾಡಿಕೊಳ್ಳುವುದಾಗಿ ಹೆಚ್​ಎಎಲ್ ಶಿಕ್ಷಣ ಸಂಸ್ಥೆ (HAL Education Committee) ಇಂದು ಜಾಹಿರಾತು ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಮಾಡಲು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ತಿಳಿಸಿದ್ದಾರೆ. ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 21.03.2024.

ಮುಂದಿನ ಶೈಕ್ಷಣಿಕ ವರ್ಷಕ್ಕೆ (AY 2024-25) ಅನ್ವಯವಾಗುವಂತೆ ಈ ರೆಕ್ರೂಟ್ಮೆಂಟ್ ನಡೆಯಲಿದೆ. ಬೆಂಗಳೂರಿನಲ್ಲಿರುವ HAL ಶಾಲೆಗಳಲ್ಲಿ (CBSE/ICSE/ State Board/Special School) ನಾನಾ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ನಡ ಶಿಕ್ಷಕರು ಸೆರಿದಂತೆ ನಾನಾ ವಿಷಯ ಪರಿಣತರ ನೇಮಕಾತಿ ನಡೆಯಲಿದೆ.

ಹೆಡ್ ಮಿಸ್ಟ್ರೆಸ್/ಮಾಸ್ಟರ್, ಸಹಾಯಕ ಮಿಸ್ಟ್ರೆಸ್/ಮಾಸ್ಟರ್ ಜೊತೆಗೆ ಕಛೇರಿ ಸೂಪರಿಂಟೆಂಡೆಂಟ್ (ಖಾತೆಗಳು), ತರಬೇತಿ ಪಡೆದ ಪದವೀಧರ ಶಿಕ್ಷಕ, ಸಲಹೆಗಾರ, ದೈಹಿಕ ಶಿಕ್ಷಣ, ನೃತ್ಯ, ನರ್ಸರಿ ಹುದ್ದೆಗಳಿಗೆ ನೇಮಕ ನಡೆಯಲಿದೆ.

HM ಹುದ್ದೆಯನ್ನು ನಿಯಮಿತ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ ಆದರೆ ಇತರ ಹುದ್ದೆಗಳು ಅಧಿಕಾರಾವಧಿಯ ಆಧಾರದ ಮೇಲೆ ಇರುತ್ತದೆ. ವಿದ್ಯಾರ್ಹತೆ, ವಯಸ್ಸು, ಅನುಭವ, ವೇತನ ಮತ್ತು ಅರ್ಜಿ ಸಲ್ಲಿಸುವ ವಿಧಾನದಂತಹ ವಿವರಗಳನ್ನು ಒಳಗೊಂಡಿರುವ ಅಧಿಸೂಚನೆಯನ್ನು ಶಾಲೆಯ ಈ ವೆಬ್‌ಸೈಟ್‌ಗಳಿಗೆ ಭೇಟಿ ನೀಡಬಹುದು.

www.halec.co.in , www.linps.co.in, www.halgnanajyotischool.co.in, www. .halpublicschool.com) ಮತ್ತು HAL ವೆಬ್‌ಸೈಟ್ (www.hal-india.co.in).

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ