AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Bangalore Kannada Sahitya Parishad recruitment 2024: ಬೆಂಗಳೂರು ವಾಸಿಯವಾಗಿರುವ ಅರ್ಹ ಅರ್ಜಿದಾರರು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಯಿಂದ ಅರ್ಜಿಯನ್ನು ಜುಲೈ 15ರೊಳಗೆ ಪಡೆದು ಭರ್ತಿ ಮಾಡಿ, ಜುಲೈ 31ರೊಳಗೆ ಖುದ್ದಾಗಿ ಸಲ್ಲಿಸ ಬಹುದು, ಇಲ್ಲವೆ ‘ಅಧ್ಯರಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜ ಪೇಟೆ, ಬೆಂಗಳೂರು-18’ ಇಲ್ಲಿಗೆ ತಲಪುವಂತೆ ಕಳುಹಿಸಬೇಕು

ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಯಲ್ಲಿ ನೇಮಕಾತಿ, ಅರ್ಜಿ ಸಲ್ಲಿಸಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 06, 2024 | 4:01 PM

Share

ಬೆಂಗಳೂರು, ಜುಲೈನ 06: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಶತಮಾನವನ್ನು ಕಂಡಿರುವ ಕನ್ನಡಿಗರ ಮಾತೃಸಂಸ್ಥೆ. ರಾಜಾಶ್ರಯದಿಂದ ಹಿಡಿದು ಇಂದಿನ ಪ್ರಜಾಪ್ರಭುತ್ವದವರೆಗೂ ಕನ್ನಡ-ಕನ್ನಡಿಗ-ಕರ್ನಾಟಕದ ಹಿತವನ್ನು ಕಾಪಾಡುತ್ತಾ ಬಂದಿರುವುದು ಈ ಸಂಸ್ಥೆಯ ಹೆಗ್ಗಳಿಕೆ. ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ಕನ್ನಡದ ಸಾಂಸ್ಕೃತಿಕ ಇತಿಹಾಸವೇ ಆಗಿದೆ. ಇಂತಹ ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಕೇಂದ್ರ ಕಛೇರಿಯಲ್ಲಿ (Bangalore Kannada Sahitya Parishad) ಲಭ್ಯವಿರುವ ಕೆಳಕಂಡ ಹುದ್ದೆಗಳಿಗೆ (vacancies) ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ (Bangalore Kannada Sahitya Parishad recruitment 2024).

1. ಗಣಕ ಸಹಾಯಕರು – ಕಂಪ್ಯೂಟರಿನ ಪ್ರಾಥಮಿಕ ತಿಳಿವಳಿಕೆ ಹೊಂದಿರ ಬೇಕು, ಕನ್ನಡವನ್ನು ತಪ್ಪಿಲ್ಲದೆ ಬೆರಳಚ್ಚು ಮಾಡಲು ಬರಬೇಕು. ಪುಟ ವಿನ್ಯಾಸ – ಕಛೇರಿ ಪತ್ರ ವ್ಯವಹಾರದ ತಿಳಿವಳಿಕೆ ಅಪೇಕ್ಷಣೀಯ

Also Read: Bangalore Metro Recruitment 2024: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಹುದ್ದೆಗಳು, ಅರ್ಹತಾ ಮಾನದಂಡ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

2. ಕಛೇರಿ ಸಹಾಯಕರು – ಕಂಪ್ಯೂಟರಿನ ಪ್ರಾಥಮಿಕ ತಿಳಿವಳಿಕೆ, ಕನ್ನಡದಲ್ಲಿ ಸಂವಹನ ನಡೆಸುವ ಕೌಶಲ್ಯ, ಕಛೇರಿ ಕಾರ್ಯ ನಿರ್ವಹಣೆ ಕುರಿತ ತಿಳುವಳಿಕೆ ಅಪೇಕ್ಷಣೀಯ

3. ಲೆಕ್ಕ ಪತ್ರ ಸಹಾಯಕರು – ಕಂಪ್ಯೂಟರ್ ಜ್ಞಾನದ ಜೊತೆಗೆ ಟ್ಯಾಲಿ ಗೊತ್ತಿರ ಬೇಕು, ಲೆಕ್ಕ ಪತ್ರ ನಿರ್ವಹಿಸಿರುವ ಅನುಭವ ಇರಬೇಕು

4. ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣಗಳಿಗೆ ತಾಂತ್ರಿಕ ನಿರ್ವಾಹಕರು – ಸಭಾಂಗಣಗಳ ಧ್ವನಿ ಮತ್ತು ಬೆಳಕಿನ ನಿರ್ವಹಣೆಯಲ್ಲಿ ಪರಿಣಿತಿಯನ್ನು ಪಡೆದಿರಬೇಕು.

ಈ ಉದ್ಯೋಗವು ತಾತ್ಕಾಲಿಕವಾದದ್ದಾಗಿರುತ್ತದೆ. ಸಂಪೂರ್ಣವಾಗಿ ಕನ್ನಡವನ್ನು ಓದಲು – ಬರೆಯಲು ಮತ್ತು ಸಂವಹನ ನಡೆಸಲು ಬರುವವರಿಗೆ ಮಾತ್ರ ಅವಕಾಶ. ಇದು ಕನ್ನಡದ ಮೇಲಿನ ಪ್ರೀತಿ ಮತ್ತು ಗೌರವದಿಂದ ಮಾಡುವ ಕೆಲಸವಾಗಿದ್ದು ಇಲ್ಲಿ ಗೌರವ ಧನವನ್ನು ನೀಡಲಾಗುವುದು. ಯುವಕರಿಗೆ ಆದ್ಯತೆ ಇದ್ದರೂ ಇತ್ತೀಚೆಗೆ ನಿವೃತ್ತಿಯಾದವರೂ ಅರ್ಜಿ ಸಲ್ಲಿಸ ಬಹುದು, ಸಮಂಜಸ ವೃತ್ತಿ ಅನುಭವವನ್ನು ಇಂತಹ ಸಂದರ್ಭದಲ್ಲಿ ಪರಿಗಣಿಸಲಾಗುವುದು.

Also Read: Political Crime Thriller: ಭಾರತದ ಚೊಚ್ಚಲ ಲೈಂಗಿಕ ಹಗರಣದಿಂದಾಗಿ ಆ ನಾಯಕನಿಗೆ ಪ್ರಧಾನಿ ಖುರ್ಚಿ ಜಸ್ಟ್​​ ಮಿಸ್​ ಆಗಿತ್ತು! ಸಂಜಯ್​ ಗಾಂಧಿ ‘ಕೈ’ವಾಡ ಏನಿತ್ತು?

ಬೆಂಗಳೂರು ವಾಸಿಯವಾಗಿರುವ ಅರ್ಹ ಅರ್ಜಿದಾರರು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಯಿಂದ ಅರ್ಜಿಯನ್ನು ಜುಲೈ 15ರೊಳಗೆ ಪಡೆದು ಭರ್ತಿ ಮಾಡಿ, ಜುಲೈ 31ರೊಳಗೆ ಖುದ್ದಾಗಿ ಸಲ್ಲಿಸ ಬಹುದು, ಇಲ್ಲವೆ ‘ಅಧ್ಯರಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜ ಪೇಟೆ, ಬೆಂಗಳೂರು-18’ ಇಲ್ಲಿಗೆ ತಲಪುವಂತೆ ಕಳುಹಿಸಬೇಕು

ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:59 pm, Sat, 6 July 24

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ