AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Bangalore Kannada Sahitya Parishad recruitment 2024: ಬೆಂಗಳೂರು ವಾಸಿಯವಾಗಿರುವ ಅರ್ಹ ಅರ್ಜಿದಾರರು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಯಿಂದ ಅರ್ಜಿಯನ್ನು ಜುಲೈ 15ರೊಳಗೆ ಪಡೆದು ಭರ್ತಿ ಮಾಡಿ, ಜುಲೈ 31ರೊಳಗೆ ಖುದ್ದಾಗಿ ಸಲ್ಲಿಸ ಬಹುದು, ಇಲ್ಲವೆ ‘ಅಧ್ಯರಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜ ಪೇಟೆ, ಬೆಂಗಳೂರು-18’ ಇಲ್ಲಿಗೆ ತಲಪುವಂತೆ ಕಳುಹಿಸಬೇಕು

ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಯಲ್ಲಿ ನೇಮಕಾತಿ, ಅರ್ಜಿ ಸಲ್ಲಿಸಿ
Follow us
ಸಾಧು ಶ್ರೀನಾಥ್​
|

Updated on:Jul 06, 2024 | 4:01 PM

ಬೆಂಗಳೂರು, ಜುಲೈನ 06: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಶತಮಾನವನ್ನು ಕಂಡಿರುವ ಕನ್ನಡಿಗರ ಮಾತೃಸಂಸ್ಥೆ. ರಾಜಾಶ್ರಯದಿಂದ ಹಿಡಿದು ಇಂದಿನ ಪ್ರಜಾಪ್ರಭುತ್ವದವರೆಗೂ ಕನ್ನಡ-ಕನ್ನಡಿಗ-ಕರ್ನಾಟಕದ ಹಿತವನ್ನು ಕಾಪಾಡುತ್ತಾ ಬಂದಿರುವುದು ಈ ಸಂಸ್ಥೆಯ ಹೆಗ್ಗಳಿಕೆ. ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ಕನ್ನಡದ ಸಾಂಸ್ಕೃತಿಕ ಇತಿಹಾಸವೇ ಆಗಿದೆ. ಇಂತಹ ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಕೇಂದ್ರ ಕಛೇರಿಯಲ್ಲಿ (Bangalore Kannada Sahitya Parishad) ಲಭ್ಯವಿರುವ ಕೆಳಕಂಡ ಹುದ್ದೆಗಳಿಗೆ (vacancies) ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ (Bangalore Kannada Sahitya Parishad recruitment 2024).

1. ಗಣಕ ಸಹಾಯಕರು – ಕಂಪ್ಯೂಟರಿನ ಪ್ರಾಥಮಿಕ ತಿಳಿವಳಿಕೆ ಹೊಂದಿರ ಬೇಕು, ಕನ್ನಡವನ್ನು ತಪ್ಪಿಲ್ಲದೆ ಬೆರಳಚ್ಚು ಮಾಡಲು ಬರಬೇಕು. ಪುಟ ವಿನ್ಯಾಸ – ಕಛೇರಿ ಪತ್ರ ವ್ಯವಹಾರದ ತಿಳಿವಳಿಕೆ ಅಪೇಕ್ಷಣೀಯ

Also Read: Bangalore Metro Recruitment 2024: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಹುದ್ದೆಗಳು, ಅರ್ಹತಾ ಮಾನದಂಡ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

2. ಕಛೇರಿ ಸಹಾಯಕರು – ಕಂಪ್ಯೂಟರಿನ ಪ್ರಾಥಮಿಕ ತಿಳಿವಳಿಕೆ, ಕನ್ನಡದಲ್ಲಿ ಸಂವಹನ ನಡೆಸುವ ಕೌಶಲ್ಯ, ಕಛೇರಿ ಕಾರ್ಯ ನಿರ್ವಹಣೆ ಕುರಿತ ತಿಳುವಳಿಕೆ ಅಪೇಕ್ಷಣೀಯ

3. ಲೆಕ್ಕ ಪತ್ರ ಸಹಾಯಕರು – ಕಂಪ್ಯೂಟರ್ ಜ್ಞಾನದ ಜೊತೆಗೆ ಟ್ಯಾಲಿ ಗೊತ್ತಿರ ಬೇಕು, ಲೆಕ್ಕ ಪತ್ರ ನಿರ್ವಹಿಸಿರುವ ಅನುಭವ ಇರಬೇಕು

4. ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣಗಳಿಗೆ ತಾಂತ್ರಿಕ ನಿರ್ವಾಹಕರು – ಸಭಾಂಗಣಗಳ ಧ್ವನಿ ಮತ್ತು ಬೆಳಕಿನ ನಿರ್ವಹಣೆಯಲ್ಲಿ ಪರಿಣಿತಿಯನ್ನು ಪಡೆದಿರಬೇಕು.

ಈ ಉದ್ಯೋಗವು ತಾತ್ಕಾಲಿಕವಾದದ್ದಾಗಿರುತ್ತದೆ. ಸಂಪೂರ್ಣವಾಗಿ ಕನ್ನಡವನ್ನು ಓದಲು – ಬರೆಯಲು ಮತ್ತು ಸಂವಹನ ನಡೆಸಲು ಬರುವವರಿಗೆ ಮಾತ್ರ ಅವಕಾಶ. ಇದು ಕನ್ನಡದ ಮೇಲಿನ ಪ್ರೀತಿ ಮತ್ತು ಗೌರವದಿಂದ ಮಾಡುವ ಕೆಲಸವಾಗಿದ್ದು ಇಲ್ಲಿ ಗೌರವ ಧನವನ್ನು ನೀಡಲಾಗುವುದು. ಯುವಕರಿಗೆ ಆದ್ಯತೆ ಇದ್ದರೂ ಇತ್ತೀಚೆಗೆ ನಿವೃತ್ತಿಯಾದವರೂ ಅರ್ಜಿ ಸಲ್ಲಿಸ ಬಹುದು, ಸಮಂಜಸ ವೃತ್ತಿ ಅನುಭವವನ್ನು ಇಂತಹ ಸಂದರ್ಭದಲ್ಲಿ ಪರಿಗಣಿಸಲಾಗುವುದು.

Also Read: Political Crime Thriller: ಭಾರತದ ಚೊಚ್ಚಲ ಲೈಂಗಿಕ ಹಗರಣದಿಂದಾಗಿ ಆ ನಾಯಕನಿಗೆ ಪ್ರಧಾನಿ ಖುರ್ಚಿ ಜಸ್ಟ್​​ ಮಿಸ್​ ಆಗಿತ್ತು! ಸಂಜಯ್​ ಗಾಂಧಿ ‘ಕೈ’ವಾಡ ಏನಿತ್ತು?

ಬೆಂಗಳೂರು ವಾಸಿಯವಾಗಿರುವ ಅರ್ಹ ಅರ್ಜಿದಾರರು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಯಿಂದ ಅರ್ಜಿಯನ್ನು ಜುಲೈ 15ರೊಳಗೆ ಪಡೆದು ಭರ್ತಿ ಮಾಡಿ, ಜುಲೈ 31ರೊಳಗೆ ಖುದ್ದಾಗಿ ಸಲ್ಲಿಸ ಬಹುದು, ಇಲ್ಲವೆ ‘ಅಧ್ಯರಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜ ಪೇಟೆ, ಬೆಂಗಳೂರು-18’ ಇಲ್ಲಿಗೆ ತಲಪುವಂತೆ ಕಳುಹಿಸಬೇಕು

ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:59 pm, Sat, 6 July 24

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ