AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.8 ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ

ಡಿಸೆಂಬರ್ 8 ರಂದು ನಡೆಯುವ ಕರ್ನಾಟಕ ಲೋಕಸೇವಾ ಆಯೋಗದ ಪಿಡಿಒ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ಮೆಟ್ರೋ ರೈಲು ನಿಗಮವು ಭಾನುವಾರದಂದು ಬೆಳಿಗ್ಗೆ 5:30 ರಿಂದ ರೈಲು ಸಂಚಾರ ಆರಂಭಿಸುವುದಾಗಿ ಘೋಷಿಸಿದೆ. ಇದು ಪರೀಕ್ಷಾರ್ಥಿಗಳಿಗೆ ಅನುಕೂಲವಾಗಲಿದೆ. ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಿಂದ ರೈಲುಗಳು 5:30 ಕ್ಕೆ ಹೊರಡಲಿವೆ.

ಡಿ.8 ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ
ಡಿ.8 ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ
Kiran Surya
| Edited By: |

Updated on: Dec 05, 2024 | 10:14 PM

Share

ಬೆಂಗಳೂರು, ಡಿಸೆಂಬರ್​​ 05: ಭಾನುವಾರ ಅಂದರೆ ಡಿ. 08ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ (pdo recruitment exam) ನಡೆಯಲಿದೆ. ಹೀಗಾಗಿ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡುವ ಮೂಲಕ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಭಾನುವಾರ ಬೆಳಿಗ್ಗೆ 7 ಗಂಟೆ ಬದಲಾಗಿ, ಬೆಳಿಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ.

ಪ್ರತಿ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಮೆಟ್ರೋ ರೈಲುಗಳು ಸಂಚಾರ ಮಾಡುತ್ತಿತ್ತು. ಆದರೆ ಪಿಡಿಓ ಪರೀಕ್ಷೆ ಹಿನ್ನೆಲೆ ಬೆಳಿಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಮಾಡುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಪ್ರಕಟಣೆಯಲ್ಲಿ ಏನಿದೆ?

ಡಿ. 08 ರಂದು (ಭಾನುವಾರ) ಕನಾಟಕ ಲೋಕಸೋವಾ ಆಯೋಗವು-ಪಂಚಾಯತ್​ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪರೀಕ್ಷೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಬಿಎಂಆರ್​ಸಿಎಲ್​ ಮೆಟ್ರೋ ರೈಲು ಸೇವೆಯನ್ನು ಬೆಳಿಗ್ಗೆ 07:00 ಗಂಟೆಗೆ ಬದಲಾಗಿ 05:30 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್​ ನಿಲ್ದಾಣಗಳಾದ ಮಾದಾವರ, ರೇಷ್ಮೆ ಸಂಸೆ, ಚಲ್ಲಘಟ್ಟ ಮತ್ತು ವೈಟ್​ ಫೀಲ್ಡ್​ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳಿಂದ ಪ್ರಾರಂಭಿಸಲಿದೆ. ಅಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕನಿಂದ ಎಲ್ಲಾ ನಾಲ್ಕು ದಿಕ್ಕಿಗೆ ಮೊದಲ ರೈಲು ಬೆಳಿಗ್ಗೆ 5:30 ಗಂಟೆಗೆ ಹೊರಡಿವೆ.

ಇದನ್ನೂ ಓದಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಜೂನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ

ಈ ಅವಧಿಯಲ್ಲಿ ಅಂದರ ಬೆಳಿಗ್ಗೆ 5.30 ರಿಂದ 7.00 ಗಂಟೆಯವರಗೆ ರೈಲುಗಳು 30 ನಿಮಿಷಗಳ ಅಂತರದಲ್ಲಿ ಚಲಿಸುತ್ತವೆ. ಬೆಳಿಗ್ಗೆ 7:00 ಗಂಟೆಯ ನಂತರ ಎಂದಿನಂತೆ ರೈಲುಗಳು ಚಲಿಸುತ್ತವೆ. ಸಾವಾಜನಿಕರು ಹಾಗೂ ಪರೀಕ್ಷೆಗೆ ಹೋಗುವ ಅಭ್ಯರ್ಥಿಗಳ ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕೆಂದು ಕೋರಲಾಗಿದೆ. ನಗದು ರಹಿತ ಪಾವತಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕ್ಯೂಆರ್​ ಟಿಕೆಟ್​ಗಳ ಮೂಲಕ ಟಿಕೆಟ್​ಗಳನ್ನು ಖರೀದಿಸಲು ಮೆಟ್ರೋ ನಿಗಮವು ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್​ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಡಿ. 08ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10ರಿಂದ 11:30 ರವರೆಗೆ ಪತ್ರಿಕೆ-1 ಸಾಮಾನ್ಯ ಜ್ಞಾನ, ಮಧ್ಯಾಹ್ನ 2ರಿಂದ 4ರ ವರೆಗೆ ಪ್ರತಿಕೆ-2, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್​, ಕಂಫ್ಯೂಟರ್​ ಜ್ಞಾನ ವಿಷಯದ ಕುರಿತು ಪರೀಕ್ಷೆ ನಡೆಯಲಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು