AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMC Bank Recruitment 2024: ಬಿಎಂಸಿ ಬ್ಯಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ, ಬಾಂಬೆ ಮರ್ಕೆಂಟೈಲ್ ಕೋ- ಆಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳು ಖಾಲಿಯಿದೆ. ಇದೀಗ ಪ್ರೊಬೇಷನರಿ ಆಫೀಸರ್ (ಪಿಒ)/ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ) ಹುದ್ದೆಗಳು ಸೇರಿದಂತೆ 135 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತಾದ ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

BMC Bank Recruitment 2024: ಬಿಎಂಸಿ ಬ್ಯಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 06, 2024 | 6:13 PM

Share

ಬಾಂಬೆ ಮರ್ಕೆಂಟೈಲ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಪ್ರಮುಖ ಮಲ್ಟಿ ಸ್ಟೇಟ್ ಶೆಡ್ಯೂಲ್ಡ್ ಬ್ಯಾಂಕ್ ಗಳಲ್ಲಿ ಒಂದಾಗಿದೆ. ಹತ್ತು ರಾಜ್ಯಗಳಲ್ಲಿ 52 ಶಾಖೆಗಳನ್ನು ಹೊಂದಿದ್ದು, ಇದೀಗ ಖಾಲಿಯಿರುವ ಪ್ರೊಬೇಷನರಿ ಆಫೀಸರ್ (ಪಿಒ)/ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಡಿಸೆಂಬರ್ 25 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

* ನೇಮಕಾತಿ ಬ್ಯಾಂಕ್ : ಬಾಂಬೆ ಮರ್ಕೆಂಟೈಲ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್.

* ಹುದ್ದೆಗಳು : ಪ್ರೊಬೇಷನರಿ ಆಫೀಸರ್ (ಪಿಒ) ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ).

* ಒಟ್ಟು ಹುದ್ದೆಗಳ ಸಂಖ್ಯೆ : 135 ಹುದ್ದೆಗಳು

ವಿದ್ಯಾರ್ಹತೆ ಹಾಗೂ ವಯೋಮಿತಿ

* ಪ್ರೊಬೇಷನರಿ ಆಫೀಸರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ಪೂರ್ಣಗೊಳಿಸಬೇಕು ಹಾಗೂ ಕಂಪ್ಯೂಟರ್ ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು.

* ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯಸ್ಸು ದಾಟಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮವಿದ್ದು, ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ಸಿ ಹಾಗೂ ಎಸ್‌ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

* ಎಸ್ಎಸ್ಎಲ್‌ಸಿ ಅಂಕಪಟ್ಟಿ

* ಜನ್ಮ ಪ್ರಮಾಣಪತ್ರ

* ಆಧಾರ್ ಕಾರ್ಡ್

* ಪದವಿ ಅಂಕಪಟ್ಟಿ

* ಜಾತಿ ಪ್ರಮಾಣಪತ್ರ

ಆಯ್ಕೆ ಪ್ರಕ್ರಿಯೆ

* ಲಿಖಿತ ಪರೀಕ್ಷೆ

* ಸಂದರ್ಶನ

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-11-2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-12-2024

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!