AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMC Bank Recruitment 2024: ಬಿಎಂಸಿ ಬ್ಯಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ, ಬಾಂಬೆ ಮರ್ಕೆಂಟೈಲ್ ಕೋ- ಆಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳು ಖಾಲಿಯಿದೆ. ಇದೀಗ ಪ್ರೊಬೇಷನರಿ ಆಫೀಸರ್ (ಪಿಒ)/ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ) ಹುದ್ದೆಗಳು ಸೇರಿದಂತೆ 135 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತಾದ ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

BMC Bank Recruitment 2024: ಬಿಎಂಸಿ ಬ್ಯಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 06, 2024 | 6:13 PM

Share

ಬಾಂಬೆ ಮರ್ಕೆಂಟೈಲ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಪ್ರಮುಖ ಮಲ್ಟಿ ಸ್ಟೇಟ್ ಶೆಡ್ಯೂಲ್ಡ್ ಬ್ಯಾಂಕ್ ಗಳಲ್ಲಿ ಒಂದಾಗಿದೆ. ಹತ್ತು ರಾಜ್ಯಗಳಲ್ಲಿ 52 ಶಾಖೆಗಳನ್ನು ಹೊಂದಿದ್ದು, ಇದೀಗ ಖಾಲಿಯಿರುವ ಪ್ರೊಬೇಷನರಿ ಆಫೀಸರ್ (ಪಿಒ)/ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಡಿಸೆಂಬರ್ 25 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

* ನೇಮಕಾತಿ ಬ್ಯಾಂಕ್ : ಬಾಂಬೆ ಮರ್ಕೆಂಟೈಲ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್.

* ಹುದ್ದೆಗಳು : ಪ್ರೊಬೇಷನರಿ ಆಫೀಸರ್ (ಪಿಒ) ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ).

* ಒಟ್ಟು ಹುದ್ದೆಗಳ ಸಂಖ್ಯೆ : 135 ಹುದ್ದೆಗಳು

ವಿದ್ಯಾರ್ಹತೆ ಹಾಗೂ ವಯೋಮಿತಿ

* ಪ್ರೊಬೇಷನರಿ ಆಫೀಸರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ಪೂರ್ಣಗೊಳಿಸಬೇಕು ಹಾಗೂ ಕಂಪ್ಯೂಟರ್ ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು.

* ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯಸ್ಸು ದಾಟಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮವಿದ್ದು, ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ಸಿ ಹಾಗೂ ಎಸ್‌ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

* ಎಸ್ಎಸ್ಎಲ್‌ಸಿ ಅಂಕಪಟ್ಟಿ

* ಜನ್ಮ ಪ್ರಮಾಣಪತ್ರ

* ಆಧಾರ್ ಕಾರ್ಡ್

* ಪದವಿ ಅಂಕಪಟ್ಟಿ

* ಜಾತಿ ಪ್ರಮಾಣಪತ್ರ

ಆಯ್ಕೆ ಪ್ರಕ್ರಿಯೆ

* ಲಿಖಿತ ಪರೀಕ್ಷೆ

* ಸಂದರ್ಶನ

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-11-2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-12-2024

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?