BMRCL Recruitment 2024: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ

BMRCL Security Officers Recruitment 2024 : ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

BMRCL Recruitment 2024: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ
ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ

Updated on: Aug 20, 2024 | 5:41 PM

ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bangalore Metro Rail Corporation Limited -BMRCL) ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ, ಒಟ್ಟು ಹುದ್ದೆಗಳು – 58. ಸಂಬಳ: 32,000 ರೂಪಾಯಿ. ಈ ಹುದ್ದೆಗೆ ಆಫ್​​​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವರ ಹೀಗಿದೆ:
Bangalore Metro Rail Corporation Limited BMRCL Recruitment 2024
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)

ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)

ಕೆಲಸದ ಸ್ಥಳ: ಬೆಂಗಳೂರು

ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ

ಸಂಬಳ: 32,000 ರೂ, ಒಟ್ಟು ಹುದ್ದೆಗಳು 58

ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು.
ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ

ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ:

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭

ಅರ್ಜಿ ಪ್ರಕ್ರಿಯೆ ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024

ಈ ಹುದ್ದೆಯ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ: PDF

BMRCL ಸಂಸ್ಥೆಯ ಅಧಿಕೃತ ವೆಬ್ಸೈಟ್ english.bmrc.co.in

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us