AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Bank of India Recruitment 2024 : ಸೆಂಟ್ರಲ್ ಬ್ಯಾಂಕ್ ಆಫ್​​ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ ಆರಂಭ, ಇಲ್ಲಿದೆ ಮಾಹಿತಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಬ್ಯಾಂಕ್ ನಲ್ಲಿ 253 ವಿವಿಧ ಮ್ಯಾನೇಜರ್ ಹುದ್ದೆಗಳು ಖಾಲಿಯಿದ್ದು, ಹುದ್ದೆಗಳಿಗೆ ಸಂಬಂಧ ಪಟ್ಟಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ದಿನಾಂಕ ಸೇರಿದಂತೆ ಇತರೆ ಮಾಹಿತಿಯೂ ಈ ಕೆಳಗಿದೆ.

Central Bank of India Recruitment 2024 : ಸೆಂಟ್ರಲ್ ಬ್ಯಾಂಕ್ ಆಫ್​​ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ ಆರಂಭ, ಇಲ್ಲಿದೆ ಮಾಹಿತಿ
Central Bank of India Recruitment
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Nov 29, 2024 | 6:20 PM

ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿದ್ದು ಈಗಾಗಲೇ ಹುಡುಕಾಟ ನಡೆಸುತ್ತಿದ್ದರೆ, ಅಂತಹ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ಇದೀಗ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ವಿಶೇಷ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, 253 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಮುಂದಿನ ತಿಂಗಳು ಡಿಸೆಂಬರ್ 3 ರೊಳಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಪೂರ್ಣ ವಿವರ:

  • ಚೀಫ್ ಮ್ಯಾನೇಜರ್ – 10
  • ಸೀನಿಯರ್ ಮ್ಯಾನೇಜರ್ – 56
  • ಮ್ಯಾನೇಜರ್ – 162
  • ಅಸಿಸ್ಟಂಟ್ ಮ್ಯಾನೇಜರ್ – 25
  • ಒಟ್ಟು ಹುದ್ದೆಗಳ ಸಂಖ್ಯೆ – 253 ಹುದ್ದೆಗಳು
  • ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ/ ಬಿ.ಟೆಕ್/ ಎಂಸಿಎ/ ಪದವಿ / ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಹ ಅಭ್ಯರ್ಥಿಗಳಿರಬೇಕಾದ ವಯೋಮಿತಿ:

  • ಚೀಫ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 34 ವರ್ಷ, ಗರಿಷ್ಠ 40 ವರ್ಷ ಹಾಗೂ ಸೀನಿಯರ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 30 ವರ್ಷ, ಗರಿಷ್ಠ 38 ವರ್ಷ ವಯಸ್ಸು ಮೀರಿರಬಾರದು.
  • ಇನ್ನುಳಿದಂತೆ ಮ್ಯಾನೇಜರ್ ಹುದ್ದೆಗೆ ಕನಿಷ್ಠ 27 ವರ್ಷ, ಗರಿಷ್ಠ 33 ವರ್ಷ ಹಾಗೂ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 23 ವರ್ಷ, ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು.
  • ಅದಲ್ಲದೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

  • ಆನ್ಲೈನ್ ಪ್ಲಾಟ್ ಫಾರ್ಮ್ ಪರೀಕ್ಷೆ, ಸನ್ನಿವೇಶ ಆಧಾರಿತ ಪರೀಕ್ಷೆ ಹಾಗೂ ವೈಯುಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮೇಲ್ಕಂಡ ಹುದ್ದೆಗಳ ವೇತನ ಶ್ರೇಣಿ:

  •  ಚೀಫ್ ಮ್ಯಾನೇಜರ್ – ರೂ 102300-120940
  • ಸೀನಿಯರ್ ಮ್ಯಾನೇಜರ್- ರೂ 85920-105280
  • ಮ್ಯಾನೇಜರ್ – ರೂ 64820-93960
  • ಅಸಿಸ್ಟಂಟ್ ಮ್ಯಾನೇಜರ್- ರೂ 48480-85920

ಇದನ್ನೂ ಓದಿ: ರಾಜ್ಯದಲ್ಲಿ ಖಾಲಿಯಿರುವ 750 ಭೂಮಾಪಕರ ಹುದ್ದೆಗೆ ನೇಮಕಾತಿ ಆರಂಭ, ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:

  • ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ/ ಮಹಿಳಾ ಅಭ್ಯರ್ಥಿಗಳು – ರೂ. 175
  • ಉಳಿದ ಅಭ್ಯರ್ಥಿಗಳು – ರೂ. 850

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 18, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 03, 2024
  • ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ : ಡಿಸೆಂಬರ್ 14, 2024
  • ಸಂದರ್ಶನ ನಡೆಯುವ (ತಾತ್ಕಾಲಿಕ) ದಿನಾಂಕ : ಜನವರಿ 2ನೇ ವಾರ, 2025

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ