AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC CSE ನಾಗರಿಕ ಸೇವಾ ಪರೀಕ್ಷೆ; ಇನ್ನೊಂದು ಅವಕಾಶ ನೀಡಲು ಕೇಂದ್ರ ಸಮ್ಮತಿ

ನಾಗರಿಕ ಸೇವಾ ಪರೀಕ್ಷೆಗಳಲ್ಲಿ (Civil Service Examination - CSE) ಪಾಲ್ಗೊಳ್ಳಲು 2020 ಕೊನೆಯ ಅವಕಾಶವಾಗಿದ್ದ, ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ಒಪ್ಪಿಕೊಂಡಿದೆ.

UPSC CSE ನಾಗರಿಕ ಸೇವಾ ಪರೀಕ್ಷೆ; ಇನ್ನೊಂದು ಅವಕಾಶ ನೀಡಲು ಕೇಂದ್ರ ಸಮ್ಮತಿ
UPSC Recruitment 2021
Ghanashyam D M | ಡಿ.ಎಂ.ಘನಶ್ಯಾಮ
| Edited By: ರಶ್ಮಿ ಕಲ್ಲಕಟ್ಟ|

Updated on:Feb 05, 2021 | 6:12 PM

Share

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (Union Public Service Commission – UPSC) ನಡೆಸುವ ನಾಗರಿಕ ಸೇವಾ ಪರೀಕ್ಷೆಗಳಲ್ಲಿ (Civil Service Examination – CSE) ಪಾಲ್ಗೊಳ್ಳಲು 2020 ಕೊನೆಯ ಅವಕಾಶವಾಗಿದ್ದ, ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ಒಪ್ಪಿಕೊಂಡಿದೆ. ಕೋವಿಡ್-19 ಪಿಡುಗಿನಿಂದಾಗಿ ಪರೀಕ್ಷೆಗೆ ಸರಿಯಾಗಿ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗದ ಸಾವಿರಾರು ಮಂದಿಯ ಉತ್ತಮ ನೌಕರಿ ಕನಸಿಗೆ ಇದರಿಂದ ಮರುಜೀವ ಬಂದಂತೆ ಆಗಿದೆ.

ಈ ನಿಯಮ ಸಡಿಲಿಕೆಯು ನಾಗರಿಕ ಸೇವಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಇನ್ನೊಂದು ಅವಕಾಶ ಒದಗಿಸಲು ಮಾತ್ರ ಸೀಮಿತವಾಗಿರುತ್ತದೆ. CSE-2021ಕ್ಕೆ ಮಾತ್ರ ಈ ಸಡಿಲಿಕೆ ಊರ್ಜಿತದಲ್ಲಿರುತ್ತದೆ. ನಾಗರಿಕ ಸೇವಾ ಪರೀಕ್ಷೆ ತೆಗೆದುಕೊಳ್ಳಲು 2020 ಕೊನೆಯ ಅವಕಾಶವಾಗಿದ್ದ ಮತ್ತು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಮಾತ್ರ ಈ ವಿನಾಯ್ತಿ ಅನ್ವಯವಾಗುತ್ತದೆ ಎಂದು ಕೇಂದ್ರ ಸರ್ಕಾರವು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್​ ನೇತೃತ್ವದ ನ್ಯಾಯಪೀಠಕ್ಕೆ ಮಾಹಿತಿ ನೀಡಿತು.

CSE-2021ರಲ್ಲಿ ಪರೀಕ್ಷೆ ಬರೆಯಲು ನಿಯಮಾನುಸಾರ ಅವಕಾಶವಿರುವವರಿಗೆ ಮತ್ತು ವಿವಿಧ ಕ್ಯಾಟಗರಿ ನಿಯಮಗಳ ಅನ್ವಯ ವಯೋಮಿತಿ ಮೀರುವವರಿಗೆ ಈ ವಿನಾಯ್ತಿ ಅನ್ವಯಿಸುವುದಿಲ್ಲ. ವಿಶೇಷ ಪ್ರಕರಣದ ಸಂದಿಗ್ಧತೆಗಳನ್ನು ಪರಿಗಣಿಸಿ ನೀಡಿರುವ ಈ ವಿನಾಯ್ತಿಯನ್ನು ಮೇಲ್ಪಂಕ್ತಿ (precedent) ಎಂದು ಪರಿಗಣಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಫೆ.8ಕ್ಕೆ ಮುಂದೂಡಿತು.

ಕೇಂದ್ರ ಸರ್ಕಾರ ಇದೀಗ ಪ್ರಸ್ತಾಪಿಸಿರುವ ವಿನಾಯ್ತಿಯನ್ನು ನ್ಯಾಯಾಲಯ ಒಪ್ಪಿಕೊಂಡರೆ ಸುಮಾರು 3,300 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಕಳೆದ ಅಕ್ಟೋಬರ್ 4ರಂದು ನಡೆದಿದ್ದ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಒಟ್ಟು 4,86,952 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಅಭ್ಯರ್ಥಿಗಳ ಹಿತ ಕಾಪಾಡಲು ಕೇಂದ್ರ ಲೋಕಸೇವಾ ಆಯೋಗವು ಎಲ್ಲ ಅಗತ್ಯ ಕ್ರಮ ತೆಗೆದುಕೊಂಡಿತ್ತು ಎಂದು ಕೇಂದ್ರ ಸರ್ಕಾರ ಹೇಳಿತು.

Published On - 6:07 pm, Fri, 5 February 21

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ