AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CRPF ನೇಮಕಾತಿ 2023: 1.30 ಲಕ್ಷ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ಮಾಹಿತಿ

ಸಿಆರ್‌ಪಿಎಫ್ ಒಟ್ಟು 1,29,929 ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಈ ಪೈಕಿ 1,25,262 ಪುರುಷ ಅಭ್ಯರ್ಥಿಗಳಿಗೆ ಮತ್ತು 4667 ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ

CRPF ನೇಮಕಾತಿ 2023: 1.30 ಲಕ್ಷ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ  ಮಾಹಿತಿ
CRPF Recruitment 2023Image Credit source: Amarujala
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 06, 2023 | 12:03 PM

Share

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 1.30 ಲಕ್ಷ ಕಾನ್ಸ್‌ಟೇಬಲ್‌ಗಳ ನೇಮಕಾತಿಗೆ ಸಂಬಂಧಿಸಿದಂತೆ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಸಿಆರ್ಪಿಎಫ್ (CRPF) ಒಟ್ಟು 1,29,929 ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಅದರಲ್ಲಿ 1,25,262 ಪುರುಷ ಅಭ್ಯರ್ಥಿಗಳಿಗೆ ಮತ್ತು 4667 ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. CRPF ನಲ್ಲಿ ನೇಮಕಾತಿಗಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ crpf.gov.in ನಲ್ಲಿ ಈ ಕೆಲಸಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

CRPF ಕಾನ್ಸ್‌ಟೇಬಲ್ ನೇಮಕಾತಿ 2023 ಗೆ ಹೇಗೆ ಅರ್ಜಿ ಸಲ್ಲಿಸಬೇಕು?

  • ಅಧಿಕೃತ ವೆಬ್‌ಸೈಟ್-crpf.gov.in ಗೆ ಭೇಟಿ ನೀಡಿ.
  • ಮುಖ್ಯ ವೆಬ್‌ಸೈಟ್ ಅನ್ನು ನಮೂದಿಸಿ.
  • ಕೆಳಗೆ ಸ್ಕ್ರಾಲ್ ಮಾಡಿ ಮತ್ತು ‘ನೇಮಕಾತಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
  • CRPF ಕಾನ್ಸ್ಟೇಬಲ್ ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅಗತ್ಯ ವಿವರಗಳನ್ನು ಒದಗಿಸುವ ಮೂಲಕ ಆನ್ ಲೈನ್ ನಲ್ಲಿ ನಿಮ್ಮ ಹೆಸರು ನೋಂದಾಯಿಸಿ.
  • ಈಗ ನೀವು ರಚಿಸಿದ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ.
  • CRPF ಕಾನ್ಸ್ಟೇಬಲ್ ನೇಮಕಾತಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು ಮತ್ತು ಕೇಳಿರುವ ಫೋಟೋಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ, ಫಾರ್ಮ್ ಸಲ್ಲಿಸಿ.

CRPF ನೇಮಕಾತಿ 2023: ವಯೋಮಿತಿ

  • ಆಗಸ್ಟ್ 1, 2023ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 02/08/1996 ಕ್ಕಿಂತ ನಂತರ ಮತ್ತು 01/08/2002 ರ ಮೊದಲು ಜನಿಸಿರಬೇಕು.
  • ಸಿಆರ್ಪಿಎಫ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುವುದು.

CRPF ನೇಮಕಾತಿ 2023: ವಿದ್ಯಾರ್ಹತೆ

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮಾಜಿ ಸೇನಾ ಸಿಬ್ಬಂದಿಯ ವಿಷಯದಲ್ಲಿ ತತ್ಸಮಾನ ಸೇನಾ ಅರ್ಹತೆಯನ್ನು ಹೊಂದಿರಬೇಕು.
  • ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಉದ್ಯೋಗಗಳಲ್ಲಿ ಮಾಜಿ ಅಗ್ನಿವೀರ್‌ಗಳಿಗೆ ಈಗ 10% ಮೀಸಲಾತಿ ನೀಡಲಾಗುವುದು ಎಂದು ಗೃಹ ಸಚಿವಾಲಯ ಕಳೆದ ತಿಂಗಳು ಘೋಷಿಸಿತ್ತು. ಅವರು ಅಗ್ನಿವೀರ್‌ಗಳ ಮೊದಲ ಬ್ಯಾಚ್ ಅಥವಾ ನಂತರದ ಬ್ಯಾಚ್ಗಳ ಭಾಗವಾಗಿದ್ದಾರೆಯೇ ಎಂಬುದನ್ನು ಅವಲಂಬಿಸಿ ಗರಿಷ್ಠ ವಯಸ್ಸಿನ ಮಿತಿಯನ್ನು ಸಡಿಲಿಸುವುದಾಗಿ ಘೋಷಿಸಿದೆ.
  • ಮಾಜಿ ಅಗ್ನಿವೀರ್‌ಗಳ ಮೊದಲ ಬ್ಯಾಚ್‌ನ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು ಐದು ವರ್ಷಗಳವರೆಗೆ ಮತ್ತು ಇತರ ಬ್ಯಾಚ್‌ಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳವರೆಗೆ ಸಡಿಲಗೊಳಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.
  • ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ 17 ರಿಂದ 21 ವರ್ಷದೊಳಗಿನ ಯುವಕರನ್ನು ನಾಲ್ಕು ವರ್ಷಗಳ ಅಲ್ಪಾವಧಿಯ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿದೆ. ಈ ಯೋಜನೆಯಡಿ ನೇಮಕಗೊಂಡವರನ್ನು ಅಗ್ನಿವೀರರು ಎಂದು ಕರೆಯಲಾಗುತ್ತದೆ. ನಾಲ್ಕು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನಂತರ, ಪ್ರತಿ ಬ್ಯಾಚ್ನಿಂದ ನೇಮಕಗೊಂಡ 25% ಜನರಿಗೆ ನಿಯಮಿತ ಸೇವೆಯನ್ನು ನೀಡಲಾಗುವುದು

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?