AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DHFWS Yadgir Recruitment 2025: ಎಸ್​​ಎಸ್​ಎಲ್​ಸಿ, ಪಿಯುಸಿ ಪಾಸ್ ಆದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗವಕಾಶ

ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (ಡಿಎಚ್‌ಎಫ್‌ಡಬ್ಲ್ಯುಎಸ್)ವು 21 ಕೀಟ ಸಂಗ್ರಾಹಕ ಮತ್ತು ಸ್ವಯಂಸೇವಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಾದ ಅಭ್ಯರ್ಥಿಗಳು ಜೂನ್ 9 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ತಿಂಗಳಿಗೆ ರೂ. 15114 ಸಂಬಳ. ಯಾದಗಿರಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ.

DHFWS Yadgir Recruitment 2025: ಎಸ್​​ಎಸ್​ಎಲ್​ಸಿ, ಪಿಯುಸಿ ಪಾಸ್ ಆದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗವಕಾಶ
Dhfws Yadgir Recruitment
ಅಕ್ಷತಾ ವರ್ಕಾಡಿ
|

Updated on:May 31, 2025 | 2:45 PM

Share

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿಯು ಅಧಿಕೃತ ಅಧಿಸೂಚನೆಯ ಮೂಲಕ ಕೀಟ ಸಂಗ್ರಾಹಕ, ಸ್ವಯಂಸೇವಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವಿಶೇಷವಾಗಿ ನೀವು ಯಾದಗಿರಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪಾಸ್​​ ಆದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಜೂನ್ 09 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

DHFWS ಯಾದಗಿರಿ ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ( DHFWS )
  • ಹುದ್ದೆಗಳ ಸಂಖ್ಯೆ: 21
  • ಉದ್ಯೋಗ ಸ್ಥಳ: ಯಾದಗಿರಿ – ಕರ್ನಾಟಕ
  • ಹುದ್ದೆ ಹೆಸರು: ಕೀಟ ಸಂಗ್ರಾಹಕ, ಸ್ವಯಂಸೇವಕರು
  • ಸಂಬಳ: ತಿಂಗಳಿಗೆ ರೂ.15114/-

ಇದನ್ನೂ ಓದಿ: ವಿದೇಶದಲ್ಲಿ MBBS ಓದುವ ಭಾರತೀಯರ ಗಮನಕ್ಕೆ, ಈ ವಿಷ್ಯ ಗೊತ್ತಿಲ್ಲದಿದ್ದರೆ ಮೋಸ ಹೋಗುವುದು ಗ್ಯಾರಂಟಿ

ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣ, ಯಾದಗಿರಿ.

ಕೀಟ ಸಂಗ್ರಾಹಕ ಹುದ್ದೆಯ ಕರ್ತವ್ಯಗಳು, ನಿಬಂಧನೆಗಳು:

  • ನಗರ/ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆ/ಕೀಟಗಳ ಸಂಗ್ರಹಣೆಗಾಗಿ ಮುಂಜಾನೆ 05:00 ಗಂಟೆ ಹಾಗೂ ರಾತ್ರಿ 08:00ರ ಸಮಯದಲ್ಲಿ ಕಾರ್ಯನಿರ್ವಹಿಸುವುದು, ಸಂದರ್ಭಕ್ಕೆ ಅನುಸಾರವಾಗಿ ವಾಸ್ತವ್ಯವಾಗಿರಬೇಕು.
  • ತಿಂಗಳಲ್ಲಿ ಕನಿಷ್ಠ 16ದಿನ ಪ್ರವಾಸ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ವಿವರಗಳನ್ನು ಕಛೇರಿಯಲ್ಲಿ ಪಡೆಯಬಹುದಾಗಿದೆ.
  • ಕಂಪ್ಯೂಟರ್​​ ನಿರ್ವಹಣೆಯ ಜ್ಞಾನ ಹೊಂದಿರಬೇಕು.
  • ಸದರಿ ಹುದ್ದೆಯು ಗುತ್ತಿಗೆ ಅವಧಿಗೆ ಸೀಮಿತವಾಗಿದ್ದು ಖಾಯಂ ಎಂದು ಪರಿಗಣಿಸುವುದಿಲ್ಲ.
  • ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು.

ಕೀಟ ಸಂಗ್ರಾಹಕ ಹುದ್ದೆಗಾಗಿ 100ದಿನಗಳ ಅವಧಿಗೆ ಸೂಕ್ತ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ನೇರ ಸಂದರ್ಶವನ್ನು ಕರೆಯಲಾಗಿದ್ದು ಆಸಕ್ತಿಉಳ್ಳವ ಅಭ್ಯರ್ಥಿಗಳು (ಪ್ರತಿ ದಿನ ಗೌರವಧನ 400/-) ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಸಭಾಂಗಣದಲ್ಲಿ ದಿನಾಂಕ:04.06.2025ರ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ರೊಳಗಾಗಿ ನೇರ ಸಂದರ್ಶನದ (Walk In Interview) ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಈ ಅಧಿಸೂಚನೆಯಲ್ಲಿ ಓದಿ: 21-Insect-Collector-Volunteers-Posts-Advt-Details-DHFWS-Yadgir

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Sat, 31 May 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!